23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರತಿಭಟನೆ

ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿ ವಿರೋಧಿಸಿ ಕಡಿರುದ್ಯಾವರ ಗ್ರಾ.ಪಂ. ನಲ್ಲಿ ಪ್ರತಿಭಟನೆ

ಕಡಿರುದ್ಯಾವರ : ರಾಜ್ಯ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿ ಖಂಡಿಸಿ ಕಡಿರುದ್ಯಾವರ ಬಿಜೆಪಿ ಘಟಕದಿಂದ ಕಡಿರುದ್ಯಾವರ ಗ್ರಾಮ ಪಂಚಾಯತ್ ಮುಂಭಾಗದಲ್ಲಿ ಜೂ.23ರಂದು ಪ್ರತಿಭಟನೆ ನಡೆಯಿತು.

ಪ್ರತಿಭಟನಾ ಸಭೆಯಲ್ಲಿ ಸೂರಜ್ ವಳಂಬ್ರ ಪ್ರಾಸ್ತವಿಕವಾಗಿ ಮಾತನಾಡಿದರು. ಅಶೋಕ್ ಕುಮಾರ್ ರವರು ರಾಜ್ಯ ಸರಕಾರದ 9/11 ನಕ್ಷೆಗೆ ಮೂಡದಿಂದ ಅನುಮತಿ ಪಡೆಯ ಆದೇಶ ಮಾಡಿದ್ದು ಅದರಿಂದ ಜನರಿಗಾಗುವ ತೊಂದರೆ ಬಗ್ಗೆ, ಕಟ್ಟಡ ಸಂಖ್ಯೆ ಇದ್ದರು ವಿದ್ಯುತ್ ಸಂಪರ್ಕ ಪಡೆಯಲು ವಾಸಯೋಗ್ಯ ಪ್ರಮಾಣ ಪತ್ರದ ಆದೇಶದ ಬಗ್ಗೆ, ನೋಂದಾವಣೆ ಶುಲ್ಕವನ್ನು. 2% ದಿಂದ 10% ಮಾಡಿರುವ ಬಗ್ಗೆ ಹಾಗೂ ಕಾಂಗ್ರೆಸ್ ಸರಕಾರದ ಭ್ರಷ್ಟಾಚಾರದ ಬಗ್ಗೆ ಮಾತಾಡಿ ಆಕ್ರೋಶವನ್ನು ವ್ಯಕ್ತಪಡಿಸಿ ತಕ್ಷಣ ಜನವಿರೋಧಿ ಆದೇಶಗಳನ್ನು ವಾಪಾಸ್ ಪಡೆಯುವಂತೆ ಹೇಳಿದರು. ತಪ್ಪಿದರೆ ಮುಂದೆ ದೊಡ್ಡ ಮಟ್ಟದಲ್ಲಿ ಹೋರಾಟವನ್ನು ಮಾಡುವುದಾಗಿ ಎಚ್ಚರಿಕೆಯನ್ನು ನೀಡಿದರು.

ಪ್ರತಿಭಟನೆಯಲ್ಲಿ ಪಂಚಾಯತ್ ಅಧ್ಯಕ್ಷೆ ರತ್ನಾವತಿ, ಉಪಾಧ್ಯಕ್ಷೆ ಸಾವಿತ್ರಿ , ಪಂಚಾಯತ್ ಸದಸ್ಯರು ರಾಜೇಶ್, ಹಿರಿಯರಾದ ಪ್ರಭಾಕರ ಶೆಣೈ, ಪ್ರಶಾಂತ್ ಅಂತರ, ರೇಣುಕಾ ರಮೇಶ್, ಹೇಮಾವತಿ, ರಾಮಚಂದ್ರ ಜನಾರ್ದನ ಕಾನರ್ಪ, ಸಿ ಎ ಬ್ಯಾಂಕ್ ಉಪಾಧ್ಯಕ್ಷ ಆನಂದ ಗೌಡ ಬರಮೇಲು, ಪ್ರಮುಖ ಕಾರ್ಯಕರ್ತರು ಸಾರ್ವಜನಿಕರು ಭಾಗವಹಿಸಿದರು.

Related posts

‘ಆಸರೆ’ ರುಡ್ ಸೆಟ್ ಯಶಸ್ವಿ ಉದ್ಯಮಿಗಳ ಸಂಘದ ವತಿಯಿಂದ ‘ಆಟಿಡೊಂಜಿ ಕೂಟ’ ಮತ್ತು ಅಭಿನಂದನಾ ಸಮಾರಂಭ

Suddi Udaya

ಡಿ.3: ಬಂಟರಯಾನೆ ನಾಡವರ ಸಂಘ ಬೆಳ್ತಂಗಡಿ ಆಶ್ರಯದಲ್ಲಿ ಬಂಟೋತ್ಸವ: ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ತಾಲೂಕು ಸಮಾಜ ಕಲ್ಯಾಣ ಇಲಾಖಾ ವ್ಯಾಪ್ತಿಯ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಿಗೆ ಮ್ಯಾನ್ಯುವಲ್ ದಾಖಲಾತಿ ಪ್ರಕ್ರಿಯೆ ಆರಂಭ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ತಂದೆಯಂದಿರ ದಿನಾಚರಣೆ

Suddi Udaya

ಉಜಿರೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ 110ನೇ ಸಂಸ್ಥಾಪನಾ ದಿನಾಚರಣೆ

Suddi Udaya

ರೈತರ, ಯುವಜನರ, ಬಡವರ, ಮಧ್ಯಮ ವರ್ಗದವರ ವಿರೋಧಿ ಬಜೆಟ್: ರಕ್ಷಿತ್ ಶಿವರಾಂ

Suddi Udaya
error: Content is protected !!