July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರತಿಭಟನೆ

ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಮಿತ್ತಬಾಗಿಲು ಗ್ರಾ.ಪಂ. ನಲ್ಲಿ ಪ್ರತಿಭಟನೆ

ಮಿತ್ತಬಾಗಿಲು: ರಾಜ್ಯ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿ ಖಂಡಿಸಿ ಮಿತ್ತಬಾಗಿಲು ಬಿಜೆಪಿ ಘಟಕದಿಂದ ಮಿತ್ತಬಾಗಿಲು ಗ್ರಾಮ ಪಂಚಾಯತ್ ಮುಂಭಾಗದಲ್ಲಿ ಜೂ.23ರಂದು ಪ್ರತಿಭಟನೆ ನಡೆಯಿತು.

ಗ್ರಾ.ಪಂ. ಅಧ್ಯಕ್ಷ ವಿನಯಚಂದ್ರ ಮಾತನಾಡಿ, ರಾಜ್ಯದ ಕಾಂಗ್ರೆಸ್ ಸರ್ಕಾರದ ಜನ ವಿರೋಧಿ ನೀತಿಯಿಂದಾಗಿ ಇಂದು ರಸ್ತೆಗಳಿಗೆ ಚರಲು ಹಾಕಬೇಕಾದರೆ ಪಂಚಾಯತ್ ನಲ್ಲಿ ಅನುದಾನ ಇಲ್ಲದಾಗಿದೆ. ಕೇಂದ್ರ ಸರ್ಕಾರದ 15ನೇ ಹಣಕಾಸಿನಿಂದ ಮಾತ್ರ ಇಂದು ಸಣ್ಣ ಪುಟ್ಟ ಕೆಲಸಗಳು ನಡೆಯುತ್ತಿದೆ. ಕಾಂಗ್ರೆಸ್ ನ ಬಿಟ್ಟಿ ಭಾಗ್ಯದಿಂದಾಗಿ ಜನ ಸಾಮಾನ್ಯರಿಗೆ ಸಮಸ್ಯೆಗಳು ಆಗುತ್ತಿದೆ ಎಂದರು.

ನಂತರ ವಿವಿಧ ಬೇಡಿಕೆಗಳನ್ನು ಒಳಗೊಂಡ ಮನವಿಯನ್ನು ಪಂಚಾಯತ್‌ ಅಭಿವೃದ್ಧಿ ಅಧಿಕಾರಿ ರವರ ಮೂಲಕ ರಾಜ್ಯಪಾಲರಿಗೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಪಂ ಉಪಾಧ್ಯಕ್ಷೆ ವಿಜಯಲಕ್ಷ್ಮೀ, ಹಿರಿಯ ಮುಖಂಡ ವಾಸುದೇವ ರಾವ್ ಕಕ್ಕೇನೇಜಿ ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರುಗಳು ಉಪಸ್ಥಿತರಿದ್ದರು.

Related posts

ಲಾಯಿಲ: ಗುರು ರಾಘವೇಂದ್ರ ಸ್ವಾಮಿಯ ಮಠದಲ್ಲಿ ಶ್ರೀರಾಮಚಂದ್ರ ಪ್ರಾಣ ಪ್ರತಿಷ್ಠೆಯ ಪ್ರಯುಕ್ತ ಸ್ವಚ್ಛತಾ ಕಾರ್ಯ

Suddi Udaya

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ರವರಿಂದ ಅರಸಿನಮಕ್ಕಿಯಲ್ಲಿ ಪ್ರಧಾನಮಂತ್ರಿ ಭಾರತೀಯ ಜನೌಷಧಿ ಕೇಂದ್ರ ಉದ್ಘಾಟನೆ

Suddi Udaya

ನಿರಂಜನ ಬಾವಂತಬೆಟ್ಟುರವರಿಗೆ ನುಡಿನಮನ

Suddi Udaya

ಸೂಳಬೆಟ್ಟು ಶ್ರೀ ಗೋಪಾಲಕೃಷ್ಣ ಕುಣಿತ ಭಜನಾ ಮಂಡಳಿ ವತಿಯಿಂದ ನೃತ್ಯ ಭಜನೋತ್ಸವ

Suddi Udaya

ಭರತನಾಟ್ಯ ಶಾಸ್ತ್ರೀಯ ನೃತ್ಯದ ಜೂನಿಯರ್ ಗ್ರೇಡ್ ಪರೀಕ್ಷೆ: ಮಡಂತ್ಯಾರು ನಿಯತಿ ನೃತ್ಯ ನಿಕೇತನ ವಿದ್ಯಾರ್ಥಿನಿಯರು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಪದ್ಮುಂಜ ಹಾ.ಉ.ಸ‌. ಸಂಘದ ಮಾಜಿ ನಿರ್ದೇಶಕ ಪೂವನಿ ಗೌಡ ರವರಿಗೆ ಸಹಕಾರಿ ಸಪ್ತಾಹದಲ್ಲಿ ಕ್ಷೀರ ರತ್ನ ಪ್ರಶಸ್ತಿ

Suddi Udaya
error: Content is protected !!