25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಾಂಗ್ರೆಸ್ ಸರ್ಕಾರದ ಜನ ವಿರೋಧಿ ನೀತಿಗಳನ್ನು ಖಂಡಿಸಿ ನಾರಾವಿ ಗ್ರಾಮ ಪಂಚಾಯತ್ ನ ಎದುರು ಬಿಜೆಪಿ ಪ್ರತಿಭಟನೆ

ನಾರಾವಿ : ಕಾಂಗ್ರೆಸ್ ಸರ್ಕಾರದ ಜನ ವಿರೋಧಿ ನೀತಿಗಳನ್ನು ಖಂಡಿಸಿ ನಾರಾವಿ ಗ್ರಾಮ ಪಂಚಾಯತ್ ನ ಎದುರು ಬಿಜೆಪಿ ಶಕ್ತಿ ಕೇಂದ್ರ ನಾರಾವಿ ಮತ್ತು ಕುತ್ಲೂರು ವತಿಯಿಂದ ಅಭಿವೃದ್ಧಿ ಶೂನ್ಯ ಕರ್ನಾಟಕ ಕಾಂಗ್ರೆಸ್ ಸರ್ಕಾರದ ವಿರುದ್ಧ ಧಿಕ್ಕಾರ ಕೂಗುವ ಮೂಲಕ ಪ್ರತಿಭಟನೆಯನ್ನು ನಡೆಸಲಾಯಿತು.

ಕಾರ್ಯಕ್ರಮದಲ್ಲಿ ಯುವ ವಾಗ್ಮಿ ಸುನಿಲ್ ಪಣಪಿಲರವರು ಭಾಗವಹಿಸಿ ತನ್ನ ದಿಕ್ಸೂಚಿ ಭಾಷಣದಲ್ಲಿ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳನ್ನು ವಿವರಿಸಿ ಜನ ವಿರೋಧಿ ನೀತಿಗಳನ್ನು ಖಂಡಿಸಿದರು. ನಂತರ ಜನ ಸಾಮಾನ್ಯರ ಜೀವನದ ಸ್ಥಿತಿ ಗತಿಗಳ ಮೇಲೆ ದುಷ್ಪರಿಣಾಮ ಬೀರುವ ಕಾಂಗ್ರೆಸ್ ಸರ್ಕಾರದ ಕಾರ್ಯ ಯೋಜನೆಗಳನ್ನು ಖಂಡಿಸಿ ಅಭಿವೃದ್ಧಿಪರ ಜನಪರ ಆಡಳಿತ ಸುಧಾರಣೆಗೆ ಕ್ರಮ ಕೈಗೊಳ್ಳಬೇಕೆಂದು ರಾಜ್ಯಪಾಲರಿಗೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಯ ಮೂಲಕ ನಾರಾವಿ ಮತ್ತು ಕುತ್ಲೂರು ಶಕ್ತಿಕೇಂದ್ರ ಅಧ್ಯಕ್ಷರುಗಳು ಮನವಿಯನ್ನು ನೀಡಿದರು.

ಈ ಸಂದರ್ಭದಲ್ಲಿ ನಾರಾವಿ ಗ್ರಾಮ ಪಂಚಾಯತ್ ಅಧ್ಯಕ್ಷ ರಾಜವರ್ಮ ಜೈನ್, ನಾರಾವಿ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸುಧಾಕರ ಭಂಡಾರಿ, ನಾರಾವಿ ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ದಯಾನಂದ ಪೂಜಾರಿ, ಕುತ್ಲೂರು ಹಾಲು ಉತ್ಪಾದಕರ ಸಂಘದ ಅಧ್ಯಕ್ಷೆ ಶ್ರೀಮತಿ ರಾಜಶ್ರೀ, ಬಿಜೆಪಿ ಮಹಾಶಕ್ತಿ ಕೇಂದ್ರ ನಾರಾವಿಯ ಪ್ರಧಾನ ಕಾರ್ಯದರ್ಶಿ ಅಭಿಜಿತ್ ಜೈನ್, ಬಿಜೆಪಿ ಬೆಳ್ತಂಗಡಿ ಮಂಡಲ ಕಾರ್ಯಕಾರಿಣಿ ಸದಸ್ಯೆ,ನಾರಾವಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಸುಮಿತ್ರಾ, ಬಿಜೆಪಿ ಬೆಳ್ತಂಗಡಿ ಮಹಿಳಾ ಮೋರ್ಚಾ ಸದಸ್ಯೆ ಆಶಾಲತಾ, ನಾರಾವಿ ಮಹಾಶಕ್ತಿ ಕೇಂದ್ರ ತಂಡದ ಸದಸ್ಯರಾದ ವಸಂತ್ ಆಚಾರ್ಯ, ಕುತ್ಲೂರು ಶಕ್ತಿ ಕೇಂದ್ರ ಅಧ್ಯಕ್ಷರಾದ ರತ್ನಾಕರ ಬಡೆಕ್ಕಿಲ, ನಾರಾವಿ ಶಕ್ತಿ ಕೇಂದ್ರ ಅಧ್ಯಕ್ಷರಾದ ಪ್ರಕಾಶ್ ಆಚಾರ್ಯ, ಮಂಡಲ ಸಾಮಾಜಿಕ ಜಾಲತಾಣ ಸದಸ್ಯ ಅಜಿತ್ ಕುತ್ಲೂರು ಸೇರಿದಂತೆ ಗ್ರಾಮ ಪಂಚಾಯತ್ ಸದಸ್ಯರುಗಳು, ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರುಗಳು, ಬೂತ್ ಸಮಿತಿಯ ಪದಾಧಿಕಾರಿಗಳು, ಪಕ್ಷದ ಪ್ರಮುಖ ನಾಯಕರುಗಳು, ಸಂಘ ಪರಿವಾರದ ನಾಯಕರುಗಳು, ಕಾರ್ಯಕರ್ತ ಬಂಧುಗಳು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ನೆಲ್ಯಾಡಿ ಲಾವತಡ್ಕದಲ್ಲಿ ಕಾರು ಪಲ್ಟಿ : 6 ಮಂದಿಗೆ ಗಂಭೀರ ಗಾಯ

Suddi Udaya

ಎ ಗ್ರೇಡ್ ದೇವಸ್ಥಾನವಾಗಿ ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಉಜಿರೆ ಹಳೆಪೇಟೆಯಲ್ಲಿ ಫ್ಯಾಬ್ರಿಕ್ ಲೂಮ್ ರೆಡಿಮೇಡ್ ಶಾಪ್ ಉದ್ಘಾಟನೆ

Suddi Udaya

ಬೆಳ್ತಂಗಡಿಯ ಎಂಆರ್ ಎಫ್ ಶೋ ರೂಂನ ಆವರಣ ಗೋಡೆಗೆ ಡಿಕ್ಕಿ ಹೊಡೆದ ಕಾರು: ಅಪಾಯದಿಂದ ಪಾರಾದ ಪ್ರಯಾಣಿಕರು

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಮನೆಗೊಂದು ಗ್ರಂಥಾಲಯ ಕರಪತ್ರ ಬಿಡುಗಡೆ

Suddi Udaya
error: Content is protected !!