July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಅಪರಾಧ ಕೃತ್ಯಗಳ ಬಗ್ಗೆ ಮಾಹಿತಿ ತಿಳಿದಿರುವ ವ್ಯಕ್ತಿ ಠಾಣೆಗೆ ಶರಣಾಗಲು ಸಿದ್ದ: ಬೆಂಗಳೂರಿನ ವಕೀಲರನ್ನು ಸಂಪರ್ಕಿಸಿದ ಪೊಲೀಸರು

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಅಪರಾಧ ಕೃತ್ಯಗಳ ಬಗ್ಗೆ ತಿಳಿದಿರುವ ವ್ಯಕ್ತಿಯೊಬ್ಬ ಧರ್ಮಸ್ಥಳ ಠಾಣೆಗೆ ಬಂದು ಮಾಹಿತಿ ನೀಡುವುದಾಗಿ ಬರವಣಿಗೆ ಇರುವ ಪತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ಪ್ರಸಾರವಾಗಿರುವುದು ಕಂಡು ಬಂದಿರುತ್ತದೆ.

ಈ ಪತ್ರದ ನೈಜತೆಯನ್ನು ಪರಿಶೀಲಿಸುವ ಸಲುವಾಗಿ ಸದ್ರಿ ಪತ್ರದಲ್ಲಿ ನಮೂದಿಸಲಾಗಿದ್ದ ಬೆಂಗಳೂರಿನ ವಕೀಲರಿಗೆ ಧರ್ಮಸ್ಥಳ ಪೊಲೀಸ್ ಠಾಣೆಯಿಂದ ಸಂಪರ್ಕಿಸಿದಾಗ ಸದ್ರಿ ವಕೀಲರು ವ್ಯಕ್ತಿಯೋರ್ವ ತನ್ನ ಬಳಿ ಬಂದು ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಅಪರಾಧ ಕೃತ್ಯಗಳ ಬಗ್ಗೆ ತನಗೆ ಮಾಹಿತಿ ಇರುವುದಾಗಿ ಹಾಗೂ ತಾನು ಪೊಲೀಸ್ ಠಾಣೆಗೆ ಶರಣಾಗಿ ಮಾಹಿತಿಯನ್ನು ನೀಡಲು ಸಿದ್ಧವಿರುವುದಾಗಿ ತಿಳಿಸಿರುತ್ತಾರೆ.

ಸದ್ರಿ ವ್ಯಕ್ತಿಗೆ ಅಗತ್ಯವಾದ ಕಾನೂನು ಸುರಕ್ಷತೆಯನ್ನು ಕಲ್ಪಿಸಿ ಆ ಬಳಿಕ ಆತನನ್ನು ಹಾಜರುಪಡಿಸುವುದಾಗಿ ವಕೀಲರು ತಿಳಿಸಿರುತ್ತಾರೆ. ಅದರಂತೆ ಸದ್ರಿ ವ್ಯಕ್ತಿ ಹಾಜರಾಗಿ ಮಾಹಿತಿ ನೀಡಿದಲ್ಲಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಇಲಾಖೆ ಪ್ರಕಟಣೆ ತಿಳಿಸಿದೆ.

Related posts

ಕನ್ಯಾಡಿ ಸೇವಾಭಾರತಿಯಿಂದ ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್ ಭೇಟಿ

Suddi Udaya

ಮುಂಡಾಜೆ ವಲಯದ ಚಾರ್ಮಾಡಿ-ಬಿ ಕಾರ್ಯಕ್ಷೇತ್ರದಲ್ಲಿ ನೂತನ ಸರಸ್ವತಿ ಸ್ವಸಹಾಯ ಸಂಘ ಉದ್ಘಾಟನೆ

Suddi Udaya

ವಾಣಿ ಕಾಲೇಜಿನಲ್ಲಿ ಕಲಾ ಸಂಘದ ವತಿಯಿಂದ ಉಪನ್ಯಾಸ ಕಾರ್ಯಕ್ರಮ

Suddi Udaya

ಕಾಂಗ್ರೆಸ್‌ ಕಾರ್ಯಕರ್ತರು ಬಿಜೆಪಿ ಸೇರ್ಪಡೆ

Suddi Udaya

‘ಬೆಳ್ತಂಗಡಿ ಸಂಭ್ರಮ’ ಕಾರ್ಯಕ್ರಮಕ್ಕೆ ಚಾಲನೆ: ಮೂರು ದಿನಗಳ ಕಾಲ ಬೆಳ್ತಂಗಡಿ ಮಾರಿಗುಡಿ ಮೈದಾನದಲ್ಲಿ ಸಂಭ್ರಮ

Suddi Udaya

ತಣ್ಣೀರುಪಂತ: 7ನೇ ತರಗತಿ ವಿದ್ಯಾರ್ಥಿ ನೇಣುಬಿಗಿದು ಆತ್ಮಹತ್ಯೆ

Suddi Udaya
error: Content is protected !!