25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಯಕ್ಷಭಾರತಿ ಕನ್ಯಾಡಿ ವತಿಯಿಂದ ವಿಶ್ವ ಯೋಗ ದಿನಾಚರಣೆ

ಕನ್ಯಾಡಿ : ಯಕ್ಷಭಾರತಿ ಕನ್ಯಾಡಿ ವತಿಯಿಂದ ವಿಶ್ವ ಯೋಗದಿನಾಚರಣೆಯು ಕನ್ಯಾಡಿಯ ಹರಿಹರಾನುಗ್ರಹ ಕಲ್ಯಾಣ ಮಂಟಪದಲ್ಲಿ ಜರುಗಿತು. ಕನ್ಯಾಡಿ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಸಮಿತಿ ಅಧ್ಯಕ್ಷ ಹರೀಶ ರಾವ್ ಮುಂಡ್ರುಪ್ಪಾಡಿ ಕಾರ್ಯಕ್ರಮವನ್ನು ಉದ್ಘಾಟಿಸಿ ಯೋಗದ ನಿತ್ಯ ಅನುಷ್ಠಾನ ಸ್ವಸ್ತ ಮನಸ್ಸು, ಆರೋಗ್ಯ ಹೊಂದಲು ಸಾಧ್ಯವೆಂದರು.

ಉಜಿರೆಯ ಎಸ್ ಡಿ ಎಂ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ವಿದ್ಯಾಲಯದ ಡಾ. ಅಭಿಷೇಕ್ ಪೂಜಾರಿ ಯೋಗದ ಅಷ್ಟಾಂಗಗಳ ಬಗ್ಗೆ ಮಾಹಿತಿ ನೀಡಿ ಸರಳವಾಗಿ ಮಾಡುವ ಯೋಗ ಕ್ರಿಯೆಗಳ ಪ್ರಾತ್ಯಕ್ಷಿಕೆಯನ್ನು ನೀಡಿ ಪ್ರಶ್ನೆಗಳಿಗೆ ಉತ್ತರಿಸಿದರು. ಯಕ್ಷಭಾರತಿ ಅಧ್ಯಕ್ಷರಾದ ರಾಘವೇಂದ್ರ ಬೈಪಾಡಿತ್ತಾಯರು ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭದಲ್ಲಿ ಯಕ್ಷಗಾನ ಡಿಪ್ಲೊಮಾದಲ್ಲಿ ಡಿಸ್ಟಿಂಕ್ಷನ್ ಪಡೆದ ಸಂಸ್ಥೆಯ ಕಾರ್ಯದರ್ಶಿ ದಿವಾಕರ ಆಚಾರ್ಯ ಗೇರುಕಟ್ಟೆ ಅವರನ್ನು ಅಭಿನಂದಿಸಲಾಯಿತು.

ಯಕ್ಷ ಭಾರತಿಯ ಟ್ರಸ್ಟಿಗಳಾದ ಹರಿದಾಸ ಗಾಂಭೀರ, ಮಹೇಶ ಕನ್ಯಾಡಿ, ಕುಸುಮಾಕರ ಕೊತ್ತೋಡಿ, ಸೂರ್ಯಾನಂದ ರಾವ್ ಹಾಗೂ ಸಂಸ್ಥೆಯ ಆಹ್ವಾನಿತ ಸದಸ್ಯರಾದ ಕೌಶಿಕ್ ರಾವ್ ಉಪಸ್ಥಿತರಿದ್ದು ಸಹಕಾರ ನೀಡಿದರು.

ಕು. ಪ್ರತೀಕ್ಷ, ಕು. ಹರಿಪ್ರಿಯ ಪ್ರಾರ್ಥಿಸಿದರು. ಯಕ್ಷ ಭಾರತಿ ಅಧ್ಯಕ್ಷ ರಾಘವೇಂದ್ರ ಬೈಪಾಡಿಕ್ತಾಯ ಸ್ವಾಗತಿಸಿ, ಕಾರ್ಯದರ್ಶಿ ದಿವಾಕರ ಆಚಾರ್ಯ ಗೇರುಕಟ್ಟೆ ಕಾರ್ಯಕ್ರಮ ನಿರೂಪಿಸಿದರು.

Related posts

ಉಜಿರೆಯ ಎಸ್‌ಡಿಎಂ ಕಲಾ ಕೇಂದ್ರಕ್ಕೆ ಅಮೇರಿಕಾದ ಹೃದ್ರೋಗ ತಜ್ಞ ಡಾ. ರಾಮಯ್ಯ ಗೌಡ ದಂಪತಿ ಭೇಟಿ- ಸಂಸ್ಥೆಗೆ ಒಂದು ಲಕ್ಷ ಧನ ಸಹಾಯ ಹಸ್ತಾಂತರ- ವಿದ್ಯಾರ್ಥಿಗಳ ಪ್ರತಿಭೆ ಮತ್ತು ಪರಿಶ್ರಮಕ್ಕೆ ಮೆಚ್ಚುಗೆ

Suddi Udaya

ಮೊಗ್ರು: ಶ್ರೀ ದುರ್ಗಾನುಗ್ರಹ ಭಜನಾ ಮಂದಿರದ ಜೀರ್ಣೋದ್ಧಾರ ಕಾರ್ಯಕ್ಕೆ ಮಂಜೂರಾದ ರೂ 2 ಲಕ್ಷ ಸಹಾಯಧನ ಹಸ್ತಾಂತರ

Suddi Udaya

ಬೆಳ್ತಂಗಡಿ : ಕುಣಿತ ಭಜನಾ ತರಬೇತಿ ನೀಡುತ್ತಿರುವ ತರಬೇತಿದಾರರುಗಳ ಸಭೆ: ಪ್ರಥಮ ಬಾರಿಗೆ ಭಜನೆಯಲ್ಲಿ ನಿನ್ನೆ ಇಂದು ನಾಳೆಯ ಬಗ್ಗೆ ಗಂಭೀರ ಚರ್ಚೆ

Suddi Udaya

ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿಯ ಸಮಾಲೋಚನಾ ಸಭೆ: ಅಧ್ಯಕ್ಷರಾಗಿ ಶಶಿಧರ ಶೆಟ್ಟಿ , ಸಂಚಾಲಕರಾಗಿ ಶಾಸಕ ಹರೀಶ್ ಪೂಂಜ

Suddi Udaya

ಧರ್ಮಸ್ಥಳ : ಅಸಹಜ ಸಾವು ಪ್ರಕರಣ : ಮಾಸಾಂತ್ಯಕ್ಕೆ ಎಸ್‌ಐಟಿ ಯಿಂದ ವರದಿ ಸಲ್ಲಿಕೆ

Suddi Udaya

ಮಚ್ಚಿನ ಮೂಲ್ಯರ ಯಾನೆ ಕುಂಬಾರರ ಯುವ ವೇದಿಕೆ ಮಡಂತ್ಯಾರು ವಲಯದ ಆಶ್ರಯದಲ್ಲಿ ಆಟಿಡೊಂಜಿ ದಿನ ಕೆಸರ್ದ ಗೊಬ್ಬು ಕ್ರೀಡಾಕೂಟ

Suddi Udaya
error: Content is protected !!