23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಸ್ತೆ- ಕಾಲುವೆಗಳಲ್ಲಿ ಪ್ಲಾಸ್ಟಿಕ್ ಕಸ ವಿಲೇವಾರಿ ಮಾಡಿದಲ್ಲಿ ದಂಡ

ಬೆಳ್ತಂಗಡಿ: ರಸ್ತೆಗಳಲ್ಲಿ ಮತ್ತು ಕಾಲುವೆಗಳಲ್ಲಿಯ ಪ್ಲಾಸ್ಟಿಕ್ ಕಸದ ರಾಶಿಗಳು, ಏಕ ಬಳಕೆಯ ಪ್ಲಾಸ್ಟಿಕ್ ವಸ್ತುಗಳು ಪರಿಸರ ಹಾಗೂ ಆರೋಗ್ಯದ ಮೇಲೆ ಬೀರುವ ದುಷ್ಪರಿಣಾಮಗಳ ಬಗ್ಗೆ ತೀವ್ರ ಆತಂಕ ವ್ಯಕ್ತಪಡಿಸಿರುವ ಸಿಎಂ, ಈ ಬಗ್ಗೆ ಕಠಿಣ ಕ್ರಮ ತೆಗೆದುಕೊಳ್ಳಲು ಸೂಚನೆ ನೀಡಿದ್ದಾರೆ ಎಂದು ಸರಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ತಿಳಿಸಿದ್ದಾರೆ.

ಪರಿಸರ ಸಂರಕ್ಷಣಾ ಕಾಯ್ದೆಯ ಸೆಕ್ಷನ್ ೫ ರ ಅಡಿಯಲ್ಲಿ ಹಾಗೂ Plastic Waste Management Rules, 2016 (Amended in 2021) ಅನ್ವಯ ಕ್ಯಾರಿ ಬ್ಯಾಗ್ ಇತ್ಯಾದಿಗಳಲ್ಲಿ ೧೨೦ ಮೈಕ್ರಾನ್‌ಗಿಂತ ಕಡಿಮೆ ಗಾತ್ರದ ಎಲ್ಲಾ ಕೆಲವು ಏಕ ಬಳಕೆಯ ಪ್ಲಾಸ್ಟಿಕ್ ವಸ್ತುಗಳ ಉತ್ಪಾದನೆ, ಮಾರಾಟ, ಸಂಗ್ರಹಣೆ, ವಿತರಣಾ ಹಾಗೂ ಬಳಕೆ ನಿಷೇಧಿಸಲಾಗಿದೆ. ಈ ನಿಯಮಗಳನ್ನು ರಾಜ್ಯದಲ್ಲಿ ಕಟ್ಟುನಿಟ್ಟಾಗಿ ಜಾರಿಗೆ ತರಲು ಎಲ್ಲಾ ಇಲಾಖೆಗಳ ಸಹಕಾರ ಅಗತ್ಯವಾಗಿದೆ.

ರಸ್ತೆಗಳಲ್ಲಿ ಪ್ಲಾಸ್ಟಿಕ್ ಕಸ ವಿಲೇವಾರಿಯಾದರೆ ಬೀಳುತ್ತೆ ದಂಡ:
ಸ್ಥಳೀಯ ಸಂಸ್ಥೆಗಳ ಬಿಬಿಎಂಪಿ, ನಗರ ಪಾಲಿಕೆಗಳು, ಪುರಸಭೆಗಳು, ಜಿಲ್ಲೆ/ತಾಲ್ಲೂಕು/ಗ್ರಾಮ ಪಂಚಾಯತ್ ಮೂಲಕ ರಸ್ತೆ ಮತ್ತು ಕಾಲುವೆಗಳಲ್ಲಿ ಪ್ಲಾಸ್ಟಿಕ್ ಕಸ ವಿಲೇವಾರಿ ಹಾಗೂ ದಂಡ ವಿಧಿಸುವ ಕಾರ್ಯಾಚರಣೆ ತ್ವರಿತವಾಗಿ ಜಾರಿಗೆ ತರಬೇಕು. ಏಕ ಬಳಕೆಯ ಪ್ಲಾಸ್ಟಿಕ್ ತಯಾರಕರು ಹಾಗೂ ಮಾರಾಟದ ಮೇಲ್ವಿಚಾರಣೆಗೆ ಕಾನೂನು ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಅಧೀನ ಇಲಾಖೆಗಳಿಗೆ ಸೂಚನೆ ನೀಡಬೇಕು. ಪರಿಸರ ಸಂರಕ್ಷಣೆ ಮತ್ತು ಸಾರ್ವಜನಿಕ ಜಾಗೃತಿ ಮೂಡಿಸುವ ಕಾರ್ಯಕ್ಕೆ ಸಾರ್ವಜನಿಕ ಶಿಕ್ಷಣ ಮತ್ತು ಮಾಧ್ಯಮದ ಜತೆಗೂಡಿ ಅಭಿಯಾನ ಕೈಗೊಳ್ಳಬೇಕು. ತಮ್ಮ ಇಲಾಖೆಯ ವ್ಯಾಪ್ತಿಯ ಎಲ್ಲಾ ಕಚೇರಿಗಳು ಮತ್ತು ಘಟಕಗಳಲ್ಲಿ ಏಕ ಬಳಕೆಯ. ಪ್ಲಾಸ್ಟಿಕ್ ಬಳಕೆಯನ್ನು ತಕ್ಷಣದಿಂದಲೇ ನಿಷೇಧಿಸುವಂತೆ ಕ್ರಮ ಕೈಗೊಳ್ಳುವುದು. ಈ ನಿಟ್ಟಿನಲ್ಲಿ ಕೈಗೊಳ್ಳಲಾಗುವ ಕ್ರಮಗಳ ವರದಿಯನ್ನು 15 ದಿನಗಳೊಳಗೆ ಈ ಕಛೇರಿಗೆ ಸಲ್ಲಿಸುವಂತೆ ಅವರು ಪತ್ರದಲ್ಲಿ ತಿಳಿಸಿದ್ದಾರೆ.

Related posts

ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ಹುಣ್ಸೆಕಟ್ಟೆ ಸ.ಕಿ.ಪ್ರಾ. ಶಾಲೆಯ ಮುಖ್ಯ ಶಿಕ್ಷಕ ಕರಿಯಪ್ಪ ಎ.ಕೆ ರವರಿಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ

Suddi Udaya

ಮಚ್ಚಿನ ಗ್ರಾ.ಪಂ.ನಲ್ಲಿ ಗೃಹಲಕ್ಷ್ಮಿ ಯೋಜನೆಯ ಫಲಾನುಭಾವಿಗಳಿಗೆ ನೋಂದಾವಣೆ ಪತ್ರ ವಿತರಣೆ

Suddi Udaya

ಬರೆಂಗಾಯದಲ್ಲಿ ಉಜಿರೆ ಎಸ್ ಡಿ ಎಮ್ ಪಿಯು ಕಾಲೇಜಿನ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

Suddi Udaya

ಪುಂಜಾಲಕಟ್ಟೆ ಸ.ಪ್ರ.ದ. ಕಾಲೇಜಿನಲ್ಲಿ ಅಂತರ ಕಾಲೇಜು ಪುರುಷರ ಹ್ಯಾಂಡ್ ಬಾಲ್ ಪಂದ್ಯಾಟ

Suddi Udaya

ಬೆಳ್ತಂಗಡಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ನೇತೃತ್ವದಲ್ಲಿ ಮಡಿವಾಳ ಮಾಚಿದೇವ ಜಯಂತಿ ಆಚರಣೆ

Suddi Udaya
error: Content is protected !!