September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರತಿಭಟನೆ

ರಾಜ್ಯ ಸರ್ಕಾರದ ಜನವಿರೋಧಿ ನೀತಿಯನ್ನು ವಿರೋಧಿಸಿ ಕುವೆಟ್ಟು ಗ್ರಾಮ ಪಂಚಾಯತ್ ಎದುರು ಪ್ರತಿಭಟನೆ

ಗುರುವಾಯನಕೆರೆ: ರಾಜ್ಯಕಾಂಗ್ರೆಸ್ ಸರಕಾರದ ಜನ ವಿರೋಧಿ ನೀತಿಯನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿ ಕರೆಕೊಟ್ಟ ಪ್ರತಿಭಟನೆಯ ಭಾಗವಾಗಿ ಜೂ.23ರಂದು ಕುವೆಟ್ಟು ಗ್ರಾಮ ಪಂಚಾಯತ್ ಎದುರು ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.


ಪ್ರತಿಭಟನೆಯನ್ನು ಉದ್ದೇಶಿಸಿ ಗ್ರಾ.ಪಂ ಅಧ್ಯಕ್ಷೆ ಭಾರತಿ ಎಸ್. ಶೆಟ್ಟಿಯವರು ಮಾತನಾಡಿ, ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರದ ದುರಾಡಳಿತ ನೀತಿಯನ್ನು ಭಾರತೀಯ ಜನತಾ ಪಾರ್ಟಿ ತೀವ್ರವಾಗಿ ಖಂಡಿಸುತ್ತದೆ ಎಂದು ಹೇಳಿದರು.


ಈ ಸಂದರ್ಭದಲ್ಲಿ ಕುವೆಟ್ಟು ಗ್ರಾಮದ ಶಕ್ತಿ ಕೇಂದ್ರಗಳ ಅಧ್ಯಕ್ಷರಾದ, ಚಂದ್ರಹಾಸ್ ದಾಸ್, ರಾಜಪ್ರಕಾಶ್ ಶೆಟ್ಟಿ ಪ್ರಭಾರಿ ಬಾಲಕೃಷ್ಣ ಬಿರ್ಮೋಟ್, ವಿಠಲ ಆಚಾರ್ಯ, ಉಮೇಶ್ ಕುಲಾಲ್, ವಸಂತ ಮಠ, ಗ್ರಾ.ಪಂ ಉಪಾಧ್ಯಕ್ಷರಾದ ಗಣೇಶ್ ಕೆ. ಪಂಚಾಯತ್ ಸದಸ್ಯರು, ಪಕ್ಷದ ಕಾರ್ಯಕರ್ತರು, ಹಾಗೂ ಪ್ರಮುಖರು ಭಾಗವಹಿಸಿದರು. ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿಗಳ ವಿರುದ್ಧ ನೂರಾರು ಸಂಖ್ಯೆಯಲ್ಲಿ ಸೇರಿದ ಕಾರ್ಯಕರ್ತರು, ಘೋಷಣೆ ಕೂಗಿ ಪ್ರತಿಭಟಸಿದರು.

ರಾಜ್ಯಪಾಲರಿಗೆ ಮನವಿಯನ್ನು ಪಂಚಾಯತ್ ಕಾರ್ಯದರ್ಶಿಯವರ ಮುಖಾಂತರ ಸಲ್ಲಿಸಸಲಾಯಿತು.

Related posts

ಮೊಗ್ರು: ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ಅಲೆಕ್ಕಿ–ಮುಗೇರಡ್ಕ ಇದರ 25 ನೇ ವರ್ಷದ ರಜತ ಪಥ ಪ್ರಯುಕ್ತ ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯವರಿಂದ ಶ್ರೀ ದೇವಿ ಮಹಾತ್ಮೆ

Suddi Udaya

ಕೊಕ್ಕಡದಲ್ಲಿ ಜನಜಾಗೃತಿಗಾಗಿ ಅಖಂಡ ಭಾರತ ಸಂಕಲ್ಪ ದಿನ ಪಂಜಿನ ಮೆರವಣಿಗೆ

Suddi Udaya

ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನ: ನಡ ಸರಕಾರಿ ಪ್ರೌಢಶಾಲೆಗೆ ಶೇ.96.07 ಫಲಿತಾಂಶ

Suddi Udaya

ಉಜಿರೆ ಎಸ್.ಡಿ.ಎಂ. ಪಾಲಿಟೆಕ್ನಿಕ್ ಕಾಲೇಜು ವಾರ್ಷಿಕೋತ್ಸವ ಸಮಾರಂಭ

Suddi Udaya

ಉಜಿರೆ ಹಳೇಪೇಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ನಟ ರಮೇಶ್ ಅರವಿಂದ್ ಭೇಟಿ: ಅಭಿವೃದ್ಧಿ ಹೊಂದುತ್ತಿರುವ ಶಾಲೆಯ ಬಗ್ಗೆ ಮೆಚ್ಚುಗೆ

Suddi Udaya

ಧಮ೯ಸ್ಥಳ ಬುರುಡೆ ಷಡ್ಯಂತ್ರ ಪ್ರಕರಣ: ವರದಿಯ ಆದೇಶ ಡಿ.29ಕ್ಕೆ ಮುಂದೂಡಿದ ನ್ಯಾಯಾಲಯ

Suddi Udaya
error: Content is protected !!