July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರತಿಭಟನೆ

ರಾಜ್ಯ ಸರ್ಕಾರದ ಜನವಿರೋಧಿ ನೀತಿಯನ್ನು ವಿರೋಧಿಸಿ ಕುವೆಟ್ಟು ಗ್ರಾಮ ಪಂಚಾಯತ್ ಎದುರು ಪ್ರತಿಭಟನೆ

ಗುರುವಾಯನಕೆರೆ: ರಾಜ್ಯಕಾಂಗ್ರೆಸ್ ಸರಕಾರದ ಜನ ವಿರೋಧಿ ನೀತಿಯನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿ ಕರೆಕೊಟ್ಟ ಪ್ರತಿಭಟನೆಯ ಭಾಗವಾಗಿ ಜೂ.23ರಂದು ಕುವೆಟ್ಟು ಗ್ರಾಮ ಪಂಚಾಯತ್ ಎದುರು ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.


ಪ್ರತಿಭಟನೆಯನ್ನು ಉದ್ದೇಶಿಸಿ ಗ್ರಾ.ಪಂ ಅಧ್ಯಕ್ಷೆ ಭಾರತಿ ಎಸ್. ಶೆಟ್ಟಿಯವರು ಮಾತನಾಡಿ, ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರದ ದುರಾಡಳಿತ ನೀತಿಯನ್ನು ಭಾರತೀಯ ಜನತಾ ಪಾರ್ಟಿ ತೀವ್ರವಾಗಿ ಖಂಡಿಸುತ್ತದೆ ಎಂದು ಹೇಳಿದರು.


ಈ ಸಂದರ್ಭದಲ್ಲಿ ಕುವೆಟ್ಟು ಗ್ರಾಮದ ಶಕ್ತಿ ಕೇಂದ್ರಗಳ ಅಧ್ಯಕ್ಷರಾದ, ಚಂದ್ರಹಾಸ್ ದಾಸ್, ರಾಜಪ್ರಕಾಶ್ ಶೆಟ್ಟಿ ಪ್ರಭಾರಿ ಬಾಲಕೃಷ್ಣ ಬಿರ್ಮೋಟ್, ವಿಠಲ ಆಚಾರ್ಯ, ಉಮೇಶ್ ಕುಲಾಲ್, ವಸಂತ ಮಠ, ಗ್ರಾ.ಪಂ ಉಪಾಧ್ಯಕ್ಷರಾದ ಗಣೇಶ್ ಕೆ. ಪಂಚಾಯತ್ ಸದಸ್ಯರು, ಪಕ್ಷದ ಕಾರ್ಯಕರ್ತರು, ಹಾಗೂ ಪ್ರಮುಖರು ಭಾಗವಹಿಸಿದರು. ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿಗಳ ವಿರುದ್ಧ ನೂರಾರು ಸಂಖ್ಯೆಯಲ್ಲಿ ಸೇರಿದ ಕಾರ್ಯಕರ್ತರು, ಘೋಷಣೆ ಕೂಗಿ ಪ್ರತಿಭಟಸಿದರು.

ರಾಜ್ಯಪಾಲರಿಗೆ ಮನವಿಯನ್ನು ಪಂಚಾಯತ್ ಕಾರ್ಯದರ್ಶಿಯವರ ಮುಖಾಂತರ ಸಲ್ಲಿಸಸಲಾಯಿತು.

Related posts

ಯೋಗಾಸನ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ಮೋಹಿತ್ ತೃತೀಯ ಸ್ಥಾನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಖ್ಯಾತ ಕ್ರಿಕೆಟಿಗ ಕೆ.ಎಲ್‌.ರಾಹುಲ್ ಭೇಟಿ

Suddi Udaya

ಸುಲ್ಕೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ನೂತನ ಕಟ್ಟಡ ‘ಸುರಭಿ’ ಉದ್ಘಾಟನೆ

Suddi Udaya

ಮೇಲಂತಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಸಿ.ವಿ.ಸಿ ಹಾಲ್ ವಸತಿ ವಿದ್ಯಾರ್ಥಿನಿ ನಿಲಯದ ಸಮಸ್ಯೆಗೆ ಸಿಕ್ಕಿತು ವಾರ್ಡನ್ ನಿಯೋಜನೆ ಬಳಿಕ ಪರಿಹಾರ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ನಟಿ ರಕ್ಷಿತಾ ಪ್ರೇಮ್ ದಂಪತಿ ಭೇಟಿ

Suddi Udaya
error: Content is protected !!