23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೇಣೂರು: ಧೀಮಹಿ ಸನಾತನ ಪ್ರತಿಷ್ಠಾನದಿಂದ ಯಕ್ಷಗಾನ ಹಿಮ್ಮೇಳ  ತರಗತಿ ಆರಂಭ

ವೇಣೂರು: ವೇಣೂರಿನ ಮಹಾವೀರ ನಗರದಲ್ಲಿ ಇರುವ ಧೀಮಹಿ ಸನಾತನ ಪ್ರತಿಷ್ಠಾನದಿಂದ ನಡೆಸಲ್ಪಡುವ ಯಕ್ಷಗಾನ ಹಿಮ್ಮೇಳ  ತರಗತಿಯ ಉದ್ಘಾಟನೆಯನ್ನು ಮಾತೃಶ್ರೀ ಗೌರಮ್ಮನವರು ದೀಪ ಪ್ರಜ್ವಲಿಸುವ ಮೂಲಕ ಜೂ.22 ರಂದು ನೆರವೇರಿಸಿದರು.

ಧೀಮಹಿ ಸನಾತನ ಪ್ರತಿಷ್ಠಾನದ ಧ್ಯೇಯೋದ್ದೇಶಗಳನ್ನು ಪ್ರಸ್ತಾವಿಕ ನುಡಿಯಲ್ಲಿ ಸಂಚಾಲಕರಾದ ಯಜ್ಞನಾರಾಯಣ ಭಟ್ ವಿವರಿಸಿದರು. ಮುಖ್ಯ ಅತಿಥಿಗಳಾಗಿ ವೇಣೂರು ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಪಂಜಾಲಬೈಲು ಎನ್. ಪುರುಷೋತ್ತಮ ರಾವ್, ಭಾಸ್ಕರ ಪೈ ಹಾಗೂ ವೇಣೂರು ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಪಾಣೂರು ಅಶೋಕ ಅವರು ಶುಭ ಹಾರೈಸಿದರು.


ಯಕ್ಷಗಾನ ತರಗತಿಯ ಗುರುಗಳಾಗಿ ಖ್ಯಾತ ಹಿಮ್ಮೇಳವಾದಕ ಕೊಂಕಣಾಜೆ ಚಂದ್ರಶೇಖರ ಭಟ್ ಅವರು ಬೋಧನಾ ಕ್ರಮದ ಬಗ್ಗೆ ಪರಿಚಯಿಸಿದರು. ರವಿಶಂಕರ ಭಟ್ ಬೆದ್ರಡ್ಕ ವಂದಿಸಿದರು. ಜಗನ್ನಾಥ ದೇವಾಡಿಗ ಹಂದೇವು ಕಾರ್ಯಕ್ರಮ ನಿರೂಪಿಸಿದರು.

ವೇಣೂರು ಸುತ್ತಮುತ್ತಲಿನ ನೂರಕ್ಕೂ ಅಧಿಕ ಯಕ್ಷಭಿಮಾನಿಗಳು ನೆರೆದಿದ್ದರು. ಹಿಮ್ಮೇಳ ಕಲಿಯಲು ಆಸಕ್ತರು ಕೊಂಕಣಾಜೆ ಚಂದ್ರಶೇಖರ ಭಟ್ಟರನ್ನು 91 90081 36127 ಸಂಪರ್ಕಿಸಬಹುದು.

Related posts

ಬೆದ್ರಬೆಟ್ಟು ರಿಫಾಯ್ಯಾ ಜುಮಾ ಮಸೀದಿಯಲ್ಲಿ ಸಂಭ್ರಮದ ರಂಜಾನ್ ಆಚರಣೆ

Suddi Udaya

ಕೊಕ್ಕಡ: ಕೊಟ್ಟಿಗೆಯಲ್ಲಿ ಪತ್ತೆಯಾದ 12 ಅಡಿ ಉದ್ದದ ಕಾಳಿಂಗ ಸರ್ಪ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಸ್ನೇಕ್ ಪ್ರಕಾಶ್

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಹುಟ್ಟು ಹಬ್ಬದ ಸಂಭ್ರಮ: ಭಾರತೀಯ ಜೀವ ವಿಮಾ ನಿಗಮ ದಿಂದ ಡಾ.ಹೆಗ್ಗಡೆಯವರಿಗೆ ಗೌರವಾರ್ಪಣೆ; ಡಾ. ಹೆಗ್ಗಡೆಯವರ ಭಾವಚಿತ್ರವಿರುವ ಅಂಚೆ ಚೀಟಿ ಬಿಡುಗಡೆ

Suddi Udaya

ಕುಪ್ಪೆಟ್ಟಿ :ಕುಪ್ಪೆಟ್ಟಿ ಕ್ಲಸ್ಟರ್ ನ ಸಮೂಹ ಸಂಪನ್ಮೂಲ ವ್ಯಕ್ತಿ(CRP)ಯಾಗಿ ಕಾರ್ಯನಿರ್ವಹಿಸುತ್ತಿದ್ದ ಸಂಧ್ಯಾ ಬಿ. ಗೋಳಿತೊಟ್ಟು ಶಾಲೆಗೆ ವರ್ಗಾವಣೆ

Suddi Udaya

ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾದ ನವಚೇತನ ಆಂ.ಮಾ. ಶಾಲೆಯ ವಿದ್ಯಾರ್ಥಿ ಶರ್ವಿನ್ ಮೊನಿಸ್ ರವರನ್ನು ಸನ್ಮಾನಿಸಿ ಅಭಿನಂದಿಸಿದ ಶಾಸಕ ಹರೀಶ್ ಪೂಂಜ

Suddi Udaya

ಜಿಲ್ಲಾ ಮಟ್ಟದ ಐಕ್ಸ್ ವಾಲಿಬಾಲ್ ಸ್ಪರ್ಧೆ : ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya
error: Content is protected !!