September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಹೊಕ್ಕಾಡಿಗೋಳಿ ಸ. ಉ. ಪ್ರಾ. ಶಾಲೆಗೆ ದಾನಿಗಳಿಂದ ವಿದ್ಯಾರ್ಥಿಗಳಿಗೆ ವಿವಿಧ ಕೊಡುಗೆಗಳ ವಿತರಣೆ ಮತ್ತು ಅಭಿನಂದನಾ ಕಾರ್ಯಕ್ರಮ

ಹೊಕ್ಕಾಡಿಗೋಳಿ: ಸ. ಉ. ಪ್ರಾ. ಶಾಲೆ ಹೊಕ್ಕಾಡಿಗೋಳಿಯಲ್ಲಿ ಎಸ್. ಡಿ. ಎಂ. ಸಿ. ಅಧ್ಯಕ್ಷ ದಿನೇಶ್ ಹುಲಿಮೇರು ಇವರ ಅಧ್ಯಕ್ಷತೆಯಲ್ಲಿ ದಾನಿಗಳಿಂದ ಮಕ್ಕಳಿಗೆ ವಿವಿಧ ಕೊಡುಗೆಗಳನ್ನು ವಿತರಿಸಲಾಯಿತು.

EDRT ಸಂಸ್ಥೆಯಿಂದ ಶ್ರೀಮತಿ ಮೀನಾಕ್ಷಿ ಮಾತಾಜಿ ಮತ್ತು ಹರೀಶ್ ಆಚಾರ್ಯ ಇವರ ನೇತೃತ್ವದಲ್ಲಿ ಮಕ್ಕಳಿಗೆ ಉಚಿತ ಬ್ಯಾಗ್, ನೋಟ್ ಪುಸ್ತಕ ಮತ್ತು ಕ್ರೀಡಾ ಸಾಮಗ್ರಿ, ಎಸ್. ಮಹಮ್ಮದ್ ಟೋಟಲ್ ಕ್ಲೀನ್ ಲಾಂಡ್ರಿ ಮಾಲೀಕರು ಇವರಿಂದ ಟ್ರ್ಯಾಕ್ ಸೂಟ್, ಮನೋಜ್ ಐತೇರಿ ಇವರಿಂದ ಉಚಿತ ನೋಟ್ ಪುಸ್ತಕ, ನರೇಶ್ ಪೂಜಾರಿ ಪ್ರಧಾನ ಅರ್ಚಕರು ಶ್ರೀ ಕೊರಗಜ್ಜ ಕ್ಷೇತ್ರ, ದೇಲೋಡಿ, ಆರಂಬೋಡಿ ಇವರಿಂದ ಉಚಿತ ನೋಟ್ ಪುಸ್ತಕ, ಆರಂಬೋಡಿ ಗ್ರಾಮ ಪಂಚಾಯತ್ ಸದಸ್ಯೆ ಶ್ರೀಮತಿ ವಿಜಯ ಕುಂಜಾಡಿ ಇವರಿಂದ ಹೊಸದಾಗಿ ದಾಖಲಾದ ಮಕ್ಕಳಿಗೆ ಉಚಿತ ಬ್ಯಾಗ್ ಹಾಗೂ ಉಚಿತ ನೋಟ್ ಪುಸ್ತಕ, ಶ್ರೀಮತಿ ಜೂಲಿಯಾನ ಡಿಸೋಜ ಇವರ ಮಗ ಅಲ್ವಿನ್ ಡಿಸೋಜಾ ಇವರಿಂದ ಉಚಿತ ಛತ್ರಿ, ಕಿರಣ್ ಮಂಜಿಲ ಉದ್ಯಮಿ ಇವರಿಂದ ಗೌರವ ಶಿಕ್ಷಕರ ವೇತನ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಘವೇಂದ್ರ ಭಟ್ ಇವರಿಂದ ಎರಡು ಫ್ಯಾನ್ ಕೊಡುಗೆಯಾಗಿ ನೀಡಿದರು.

ಕೊಡುಗೆ ನೀಡಿದ ಎಲ್ಲಾ ದಾನಿಗಳನ್ನು ಅಭಿನಂದಿಸಲಾಯಿತು. ಸಭೆಯಲ್ಲಿ ಸಂತೋಷ್ ಮಂಜಲ, ನಿತೇಶ್, ಶಾಲಾ ಎಸ್‌. ಡಿ. ಎಂ. ಸಿ. ಸದಸ್ಯರು, ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು, ಸದಸ್ಯರು, ಪೋಷಕರು, ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಶಾಲಾ ಶಿಕ್ಷಕಿ ಶ್ರೀಮತಿ ಸುಚಿತ್ರ ಕಾರ್ಯಕ್ರಮ ನಿರೂಪಿಸಿದರು. ಮುಖ್ಯ ಶಿಕ್ಷಕಿ ಶ್ರೀಮತಿ ಸುಮಿತ್ರ ಸ್ವಾಗತಿಸಿ, ಶ್ರೀಮತಿ ಶುಭವತಿ ವಂದಿಸಿದರು. ಶಿಕ್ಷಕಿಯರಾದ ಶ್ರೀಮತಿ ಮೆಟಿಲ್ಡಾ ಮತ್ತು ಶ್ರೀಮತಿ ಸಿಲ್ವಿಯ ಮಿರಾಂದ, ಕುಮಾರಿ ಸುತೀಕ್ಷ ದಾನಿಗಳ ಬಗ್ಗೆ ತಿಳಿಸಿದರು.

Related posts

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ ಉರೂಸ್ ಕಾರ್ಯಕ್ರಮ

Suddi Udaya

ಸುಲ್ಕೇರಿ ಬ್ರಹ್ಮ ಶ್ರೀ ಗುರು ನಾರಾಯಣ ಸೇವಾ ಸಮಿತಿಯಿಂದ ಸುಲ್ಕೇರಿ ಅಂಗನವಾಡಿ ಹಾಗೂ ಶ್ರೀರಾಮ ಶಾಲೆಯಲ್ಲಿ ಶ್ರಮದಾನ

Suddi Udaya

ಡೆಂಗ್ಯೂ ವಿರೋಧ ಮಾಸಾಚಾರಣೆ ಅಂಗವಾಗಿ ಬೆಳ್ತಂಗಡಿ ಪ.ಪಂ. ವ್ಯಾಪ್ತಿಯಲ್ಲಿ ಮನೆ ಮನೆಗೆ ಭೇಟಿ ನೀಡಿ ಮುಂಜಾಗೃತ ಮಾಹಿತಿ

Suddi Udaya

ಮಚ್ಚಿನ: ಕುದ್ರಡ್ಕ ನಿವಾಸಿ ಅಣ್ಣಿ ಪೂಜಾರಿ ನಿಧನ

Suddi Udaya

ಮಾನ್ಯತೆ ರದ್ದಾದ ಕಾಲೇಜು ಕೋಡ್ ನಲ್ಲಿ ಯಾವುದೇ ದಾಖಲಾತಿ ಆಗಿಲ್ಲ: ಅದರ ಮಾನ್ಯತೆ ರದ್ದಿಗೆ ನಾವೇ ಅರ್ಜಿ ಹಾಕಿದ್ದೆವು- ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ಯಾವುದೇ ಗೊಂದಲ ಬೇಡಾ: ಎಕ್ಸೆಲ್ ಕಾಲೇಜು ಆಡಳಿತ ಮಂಡಳಿ ಸ್ಪಷ್ಟನೆ

Suddi Udaya

ಕೊಯ್ಯೂರು ಸ.ಹಿ.ಪ್ರಾ. ಶಾಲೆಯಲ್ಲಿ ವಲಯ ಮಟ್ಟದ ಖೋ-ಖೋ ಪಂದ್ಯಾಟ

Suddi Udaya
error: Content is protected !!