July 23, 2026
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹೊಸಂಗಡಿ: ಉಚಿತ ಆರೋಗ್ಯ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ

ಹೊಸಂಗಡಿ : ಆಳ್ವಾಸ್ ಹೋಮಿಯೋಪತಿಕ್ ಮೆಡಿಕಲ್ ಕಾಲೇಜು , ಆಸ್ಪತ್ರೆ ಮಿಜಾರ್ ಮತ್ತು ರಾಜ್ಯ ಪ್ರಶಸ್ತಿ ಪಡೆದ ಹೊಸಂಗಡಿ ಫ್ರೆಂಡ್ಸ್ ಕ್ಲಬ್ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ ಜೂ.22 ರಂದು ಹೊಸಂಗಡಿ ಫ್ರೆಂಡ್ಸ್ ಕ್ಲಬ್ ಸಭಾ ಭವನದಲ್ಲಿ ನಡೆಯಿತು.

ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಧರಣೇಂದ್ರ ಕುಮಾರ್ ಕಾರ್ಯಕ್ರಮ ಉದ್ಘಾಟಿಸಿ ಮಾತಾಡಿ ಫ್ರೆಂಡ್ಸ್ ಕ್ಲಬ್ ಸದಾ ಗ್ರಾಮಸ್ಥರ ಆರೋಗ್ಯದ ಬಗ್ಗೆ ಒತ್ತುಕೊಟ್ಟು ಆಳ್ವಾಸ್ ಆಸ್ಪತ್ರೆ ವತಿಯಿಂದ ವಾರಕ್ಕೊಮ್ಮೆ ಆರೋಗ್ಯ ತಪಾಸಣೆ ಮತ್ತು ಉಚಿತ ಚಿಕಿತ್ಸೆಯ ಏರ್ಪಾಡು ಮಾಡುತ್ತಿದೆ. 50 ವರ್ಷಗಳು ಮೇಲ್ಪಟ್ಟವರ ರಕ್ತದೊತ್ತಡ ಹಾಗೂ ಮಧುಮೇಹದ ತಪಾಸಣೆಗಾಗಿ ತನ್ನ ಕ್ಲಬ್ ನ ಸಭಾಂಗಣವನ್ನು ಕೊಟ್ಟಿದ್ದು ಗ್ರಾಮಸ್ಥರು ಇದರ ಸದುಪಯೋಗ ಮಾಡಬೇಕೆಂದು ಮನವಿ ಮಾಡಿದರು.

ಆಳ್ವಾಸ್ ಹೋಮಿಯೋಪತಿಕ್ ಆಸ್ಪತ್ರೆ ವೈದ್ಯ ಡಾ. ಭರತ್ ಮಾತನಾಡಿ, ಆರೋಗ್ಯ ಇದ್ದರೆ ಮಾತ್ರ ಜೀವನ ಮತ್ತು ನಮ್ಮ ಸಂಸ್ಥೆಯ ಆರೋಗ್ಯ ಶಿಬಿರದ ಸದುಪಯೋಗಪಡಿಸುವಂತೆ ಕರೆ ನೀಡಿ ಈ ನಿಟ್ಟಿನಲ್ಲಿ ನಿರಂತರವಾಗಿ ಸಹಕರಿಸುತ್ತಿರುವ ಫ್ರೆಂಡ್ಸ್ ಕ್ಲಬ್ ಹೊಸಂಗಡಿ ಮತ್ತು ಮಾಜಿ ಅಧ್ಯಕ್ಷ ದಿ| ಹರಿಪ್ರಸಾದ್ ರವರನ್ನು ಸ್ಮರಿಸಿದರು.

ಸಭಾ ಕಾರ್ಯಕ್ರಮದಲ್ಲಿ ಡಾ ಪ್ರಶಾಂತ್ , ಡಾ ಶಿವಕುಮಾರ್ , ಪೆರಿಂಜೆ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಎನ್ ಸೀತಾರಾಮ ರೈ ,ಬೆಳ್ತಂಗಡಿ ತಾಲೂಕು ಭೂನ್ಯಾಯ ಮಂಡಳಿ ಸದಸ್ಯ ಇಸ್ಮಾಯಿಲ್ ಕೆ ಪೆರಿಂಜೆ ,ಕ್ಲಬ್ ಅಧ್ಯಕ್ಷ ಶ್ರೀಪತಿ ಉಪಾದ್ಯಾಯ, ಗ್ರಾ.ಪಂ. ಸದಸ್ಯ ಆನಂದ ಬಂಗೇರ ಕೊಡಂಗೇರಿ ಉಪಸ್ಥಿತರಿದ್ದರು.

ಚಂದ್ರ ಪೇರಿ ,ಭರತ್ ,ನಾಗೇಶ್ ಕೋಟಿಯಾನ್ ಹೊಸಂಗಡಿ ,ಸಚ್ಚಿದಾನಂದ ಪೆರಿಂಜೆ ,ದೇವದಾಸ್ ,ರಾಜೇಶ್ ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು.

ಶ್ರೀಪತಿ ಉಪಾಧ್ಯಾಯ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಸುಜಿತ್ ವಂದಿಸಿದರು.

Related posts

ಬೆಳ್ತಂಗಡಿ ಡಿ. ಕೆ.ಆರ್.ಡಿ.ಎಸ್ ನಿಂದ ಕ್ರಿಸ್ಮಸ್ ಆಚರಣೆ

Suddi Udaya

ಬಂಟರ ಯಾನೆ ನಾಡವರ ಸಂಘ ಬೆಳ್ತಂಗಡಿ, ವಲಯ ಬಂಟರ ಸಂಘ, ಉಜಿರೆ ಹಾಗೂ ಬಂಟರ ಗ್ರಾಮ ಸಮಿತಿ ಉಜಿರೆ ಮುಂಡಾಜೆ ಮತ್ತು ತೋಟತ್ತಾಡಿ ಇವುಗಳ ಸಹಭಾಗಿತ್ವದಲ್ಲಿ ಉಜಿರೆ ವಲಯ ಬಂಟರ ಕ್ರೀಡಾಕೂಟ

Suddi Udaya

ಗುರುವಾಯನಕೆರೆ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಯಾಂತ್ರಿಕೃತ ಭತ್ತದ ಕೃಷಿ ನಾಟಿಗೆ ಸಸಿ ಮಡಿ ಹಸ್ತಾಂತರ

Suddi Udaya

ನೆರಿಯ: ಬೈಲಂಗಡಿ ಬಸದಿಯ ಪ್ರಧಾನ ಅರ್ಚಕ ಮಿತ್ರಸೇನಾ ಇಂದ್ರ ನಿಧನ

Suddi Udaya

ಮೇ 30: ಗುರುವಾಯನಕೆರೆಯಲ್ಲಿ ಶ್ರೀ ಗುರುದೇವ ಎಲೆಕ್ಟ್ರಿಕಲ್ ಸಂಸ್ಥೆಯ ನೂತನ “ಕೆ.ವಿ.ಪಿ.” ಕಾಂಪ್ಲೆಕ್ಸ್ ಶುಭಾರಂಭ

Suddi Udaya

ಸುಲ್ಕೇರಿಮೋಗ್ರು: ಕುಸಿದ ತಡೆಗೋಡೆ ತೆರವುಗೊಳಿಸಿದ ಅಳದಂಗಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕ ಸ್ವಯಂಸೇವಕರು

Suddi Udaya
error: Content is protected !!