22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಆರಂಬೋಡಿ ಹಿಂದೂ ಜಾಗರಣ ವೇದಿಕೆ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ 40ನೇ ವರ್ಷದ ಮೊಸರು ಕುಡಿಕೆ ಉತ್ಸವದ ಪೂರ್ವಭಾವಿ ಸಭೆ

ಆರಂಬೋಡಿ : ಆರಂಬೋಡಿ ಹಿಂದೂ ಜಾಗರಣ ವೇದಿಕೆ ಎಲಿಯನಡುಗೋಡು ಇದರ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ 40ನೇ ವರ್ಷದ ಮೊಸರು ಕುಡಿಕೆ ಉತ್ಸವದ ಪೂರ್ವಭಾವಿ ಸಭೆಯು ಶ್ರೀನಿವಾಸ್ ಶೆಟ್ಟಿಗಾರ್ ಸಭಾಂಗಣ ಹೊಕ್ಕಾಡಿಗೋಳಿ ಕೂಡುರಸ್ತೆಯಲ್ಲಿ ಜರಗಿತು.

ಸಭೆಯ ಅಧ್ಯಕ್ಷತೆಯನ್ನು ಮೊಸರು ಕುಡಿಕೆ ಉತ್ಸವ ಸಮಿತಿಯ ಅಧ್ಯಕ್ಷ ಪ್ರಣೀತ್ ಹಿಂಗಾಣಿ ವಹಿಸಿದರು.ಈ ವರ್ಷ 40ನೇ ವರ್ಷದ ಕಾರ್ಯಕ್ರಮವು ಬಹಳ ಅದ್ದೂರಿಯಾಗಿ ಎರಡು ದಿನ ವಿವಿಧ ಧಾರ್ಮಿಕ, ಸಾಂಸ್ಕೃತಿಕ, ಕಾರ್ಯಕ್ರಮ ಗಳೊಂದಿಗೆ ಜರಗಲಿದೆ ಎಂದು ಸಭೆಯಲ್ಲಿ ನಿರ್ಣಯಿಸಲಾಯಿತು.

ಪ್ರತಿ ವರ್ಷದಂತೆ ಶ್ರೀ ಕೃಷ್ಣ ದೇವರ ಪೂಜೆಯೊಂದಿಗೆ, ಧ್ವಜಾರೋಹಣ, ನಂತರ ರಕ್ಷಾ ಬಂಧನ, ಬೌದಿಕ್, ವಿವಿಧ ಮಂಡಳಿ ಗಳಿಂದ ಭಜನೆ, ಮದ್ಯಾಹ್ನ ಅನ್ನ ಸಂತರ್ಪಣೆ, ವಿವಿಧ ಆಟೋಟ ಸ್ಪರ್ಧೆ ಗಳು,ಅಲ್ಲದೆ ವಿವಿಧ ವಿನೋದವಲಿಗಳೊಂದಿಗೆ ಮೆರವಣಿಗೆ, ನಂತರ ಸುಪ್ರಸಿದ್ದ ಕಲಾವಿದರಿಂದ ನಾಟಕ ಜರಗಲಿದೆ.ಹಾಗೂ ಕಳೆದ 40 ವರ್ಷಗಳಿಂದ ಸಂಘಟನೆಯಲ್ಲಿ ದುಡಿದ ಸಂಘಟಕರಿಗೆ ಅಭಿನಂದನಾ ಕಾರ್ಯಕ್ರಮ ನಡೆಸುದೆಂದು ತೀರ್ಮಾನಿಸಲಾಯಿತು.

ಸಭೆಯಲ್ಲಿ ಮೊಸರು ಕುಡಿಕೆ ಉತ್ಸವ ಸಮಿತಿಯ ಗೌರವಧ್ಯಕ್ಷರು, ಮೊಸರು ಕುಡಿಕೆ ಉತ್ಸವ ಸಮಿತಿಯ ಪದಾಧಿಕಾರಿಗಳು, ಆರಂಬೋಡಿ ಗ್ರಾಮ ಪಂಚಾಯತ್ ಸದಸ್ಯರುಗಳು, ಆರಂಬೋಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ನಿರ್ದೇಶಕರು, ವಿವಿಧ ಭಜನಾ ಮಂಡಳಿಯ ಪದಾಧಿಕಾರಿಗಳು, ಸಂಘ ಸಂಸ್ಥೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ರೆಖ್ಯ ಶಾಲಾ ಪ್ರಾರಂಭೋತ್ಸವ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ದೀಪಾವಳಿ ಸಂಭ್ರಮ

Suddi Udaya

ಲಾಯಿಲ ಬಂಟರ ಗ್ರಾಮ ಸಮಿತಿ ವತಿಯಿಂದ ಆಟಿದ ಗಮ್ಮತ್ ಹಾಗೂ ವಿವಿಧ ಕ್ರೀಡಾಕೂಟ

Suddi Udaya

ಬೆಳಾಲು ಶ್ರೀ ಧ.ಮಂ.ಅ.ಪ್ರೌ ಶಾಲೆಯಲ್ಲಿ ಮಾಸ್ತಿ ವೆಂಕಟೇಶ್ ಅಯ್ಯಂಗಾರ್ ಸಂಸ್ಮರಣ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದಿಂದ ಮರೋಡಿ ಪೊಸರಡ್ಕ ಕ್ಷೇತ್ರಕ್ಕೆ ದೇಣಿಗೆ ಹಸ್ತಾಂತರ

Suddi Udaya

ಫೆ.11 : ಬೆಳ್ತಂಗಡಿ ಧರ್ಮಪ್ರಾಂತ್ಯ ಸ್ಥಾಪನೆಯ ಬೆಳ್ಳಿ ಹಬ್ಬದ ಸಂಭ್ರಮ : ಶ್ರೇಷ್ಠ ಮಹಾಧರ್ಮಾಧ್ಯಕ್ಷರುಗಳು ಭಾಗಿ -ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಸಚಿವರುಗಳು, ಡಾ.ಹೆಗ್ಗಡೆ ಆಗಮನ

Suddi Udaya
error: Content is protected !!