September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಆರಂಬೋಡಿ ಹಿಂದೂ ಜಾಗರಣ ವೇದಿಕೆ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ 40ನೇ ವರ್ಷದ ಮೊಸರು ಕುಡಿಕೆ ಉತ್ಸವದ ಪೂರ್ವಭಾವಿ ಸಭೆ

ಆರಂಬೋಡಿ : ಆರಂಬೋಡಿ ಹಿಂದೂ ಜಾಗರಣ ವೇದಿಕೆ ಎಲಿಯನಡುಗೋಡು ಇದರ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ 40ನೇ ವರ್ಷದ ಮೊಸರು ಕುಡಿಕೆ ಉತ್ಸವದ ಪೂರ್ವಭಾವಿ ಸಭೆಯು ಶ್ರೀನಿವಾಸ್ ಶೆಟ್ಟಿಗಾರ್ ಸಭಾಂಗಣ ಹೊಕ್ಕಾಡಿಗೋಳಿ ಕೂಡುರಸ್ತೆಯಲ್ಲಿ ಜರಗಿತು.

ಸಭೆಯ ಅಧ್ಯಕ್ಷತೆಯನ್ನು ಮೊಸರು ಕುಡಿಕೆ ಉತ್ಸವ ಸಮಿತಿಯ ಅಧ್ಯಕ್ಷ ಪ್ರಣೀತ್ ಹಿಂಗಾಣಿ ವಹಿಸಿದರು.ಈ ವರ್ಷ 40ನೇ ವರ್ಷದ ಕಾರ್ಯಕ್ರಮವು ಬಹಳ ಅದ್ದೂರಿಯಾಗಿ ಎರಡು ದಿನ ವಿವಿಧ ಧಾರ್ಮಿಕ, ಸಾಂಸ್ಕೃತಿಕ, ಕಾರ್ಯಕ್ರಮ ಗಳೊಂದಿಗೆ ಜರಗಲಿದೆ ಎಂದು ಸಭೆಯಲ್ಲಿ ನಿರ್ಣಯಿಸಲಾಯಿತು.

ಪ್ರತಿ ವರ್ಷದಂತೆ ಶ್ರೀ ಕೃಷ್ಣ ದೇವರ ಪೂಜೆಯೊಂದಿಗೆ, ಧ್ವಜಾರೋಹಣ, ನಂತರ ರಕ್ಷಾ ಬಂಧನ, ಬೌದಿಕ್, ವಿವಿಧ ಮಂಡಳಿ ಗಳಿಂದ ಭಜನೆ, ಮದ್ಯಾಹ್ನ ಅನ್ನ ಸಂತರ್ಪಣೆ, ವಿವಿಧ ಆಟೋಟ ಸ್ಪರ್ಧೆ ಗಳು,ಅಲ್ಲದೆ ವಿವಿಧ ವಿನೋದವಲಿಗಳೊಂದಿಗೆ ಮೆರವಣಿಗೆ, ನಂತರ ಸುಪ್ರಸಿದ್ದ ಕಲಾವಿದರಿಂದ ನಾಟಕ ಜರಗಲಿದೆ.ಹಾಗೂ ಕಳೆದ 40 ವರ್ಷಗಳಿಂದ ಸಂಘಟನೆಯಲ್ಲಿ ದುಡಿದ ಸಂಘಟಕರಿಗೆ ಅಭಿನಂದನಾ ಕಾರ್ಯಕ್ರಮ ನಡೆಸುದೆಂದು ತೀರ್ಮಾನಿಸಲಾಯಿತು.

ಸಭೆಯಲ್ಲಿ ಮೊಸರು ಕುಡಿಕೆ ಉತ್ಸವ ಸಮಿತಿಯ ಗೌರವಧ್ಯಕ್ಷರು, ಮೊಸರು ಕುಡಿಕೆ ಉತ್ಸವ ಸಮಿತಿಯ ಪದಾಧಿಕಾರಿಗಳು, ಆರಂಬೋಡಿ ಗ್ರಾಮ ಪಂಚಾಯತ್ ಸದಸ್ಯರುಗಳು, ಆರಂಬೋಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ನಿರ್ದೇಶಕರು, ವಿವಿಧ ಭಜನಾ ಮಂಡಳಿಯ ಪದಾಧಿಕಾರಿಗಳು, ಸಂಘ ಸಂಸ್ಥೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿಯಲ್ಲಿ ರಾಜಸ್ಥಾನ ಆರ್ಟ್‌ ಹಾಗೂ ಕ್ರಾಫ್ಟ್ ಬೃಹತ್ ಪ್ರದರ್ಶನ, ಮಾರಾಟ ಮೇಳ

Suddi Udaya

ಫೆ.7 : ಅಳದಂಗಡಿ ಸುಂಕದಕಟ್ಟೆ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ವಾರ್ಷಿಕ ವರ್ಧಂತಿ ಉತ್ಸವ

Suddi Udaya

ಧರ್ಮಸ್ಥಳ: ಪಾಂಗಳದಲ್ಲಿ ಮನೆಯಲ್ಲಿ ಯಾರು ಇಲ್ಲದ ವೇಳೆ ಕಳ್ಳತನ

Suddi Udaya

ಪಿಯುಸಿ ಫಲಿತಾಂಶ: ಲಾಯಿಲ ಪ್ರಸನ್ನ ಪ.ಪೂ. ಕಾಲೇಜಿನ ಅಲ್ಶಾನಾ ಗೆ 535 ಅಂಕ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಬಿ.ವೈ. ರಾಘವೇಂದ್ರ ಭೇಟಿ

Suddi Udaya

ಅನಾರೋಗ್ಯದಿಂದ ಕಾಶಿಪಟ್ಣದ ಯುವಕ ದೀಪಕ್ ಸಾಲಿಯಾನ್ ನಿಧನ

Suddi Udaya
error: Content is protected !!