23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಓರಿಯೆಂಟೇಷನ್ ಕಾರ್ಯಕ್ರಮ.

ಉಜಿರೆ: ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಡಿಪ್ಲೋಮಾ ಪ್ರಥಮ ವರ್ಷದ ವಿದ್ಯಾರ್ಥಿಗಳಿಗಾಗಿ ಓರಿಯೆಂಟೇಷನ್ ಕಾರ್ಯಕ್ರಮ ಜೂ. 23 ರಂದು ನಡೆಯಿತು.


ಕಾರ್ಯಕ್ರಮದಲ್ಲಿ ದೀಪ ಪ್ರಜ್ವಲನೆಯನ್ನು ಮಾಡಿದ ಧರ್ಮಸ್ಥಳ ಸ್ಟಉದ್ಯೋಗ ತರಬೇತಿ ಸಂಸ್ಥೆ( ರುಡ್ ಸೆಟ್) ಯ ಹಿರಿಯ ಉಪನ್ಯಾಸಕ ಕರುಣಾಕರ್ ಜೈನ್ ಮಾತನಾಡುತ್ತ ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಯಶಸ್ಸಿಗೆ ಸಹಾಯ ಮಾಡುವುದಲ್ಲದೆ, ಭವಿಷ್ಯದ ವೃತ್ತಿ ಜೀವನದ ಸವಾಲುಗಳಿಗೆ ಅವರನ್ನು ಸಿದ್ದಪಡಿಸುವ ವಿವಿಧ ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕೆಂದು ಸಲಹೆ ನೀಡಿದರು. ಇಂದಿನ ಕ್ರಿಯಾತ್ಮಕ ಜಗತ್ತಿನಲ್ಲಿ ವಿದ್ಯಾರ್ಥಿಗಳಿಗೆ ಕೌಶಲ್ಯ ಅಭಿವೃದ್ಧಿಯ ನಿರ್ಣಾಯಕ ಪ್ರಾಮುಖ್ಯತೆಯನ್ನು ಹೇಳಿದರು. ಪೋಷಕರು ವಿದ್ಯಾರ್ಥಿಗಳಿಗೆ ಮಾದರಿಯಾಗಿ ವರ್ತಿಸಬೇಕು ಎಂದು ಒತ್ತಿಹೇಳಿದರು.


ಪ್ರಾಂಶುಪಾಲರಾದ ಸಂತೋಷ್ ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜು ಮತ್ತು ಡಿಪ್ಲೋಮಾ ಕೋರ್ಸ್ ಗಳ ಕುರಿತು ಮಾಹಿತಿ ನೀಡಿದರು. ಅದಲ್ಲದೆ, ಕಾಲೇಜಿನ ನಿಯಮಗಳು ಮತ್ತು ನಿಬಂಧನೆಗಳನ್ನು ವಿವರಿಸಿದರು.


ವೇದಿಕೆಯಲ್ಲಿ ಕಾಲೇಜಿನ ವ್ಯವಸ್ಥಾಪಕ ಚಂದ್ರನಾಥ ಜೈನ್ ಉಪಸ್ಥಿತರಿದ್ದರು. ಆಂಗ್ಲ ಭಾಷಾ ಉಪನ್ಯಾಸಕರಾದ ಶಂಕರ್ ಭಟ್ ಎಚ್.ಆರ್ ಸ್ವಾಗತಿಸಿದರು. ಮೆಕ್ಯಾನಿಕಲ್ ಎಂಜಿನಿಯರಿಂಗ್ ಉಪನ್ಯಾಸಕರಾದ ಶಿವಪ್ರಸಾದ್ ಮುಖ್ಯ ಅತಿಥಿಗಳನ್ನು ಪರಿಚಯಿಸಿದರು. ಎಲೆಕ್ಟ್ರಾನಿಕ್ಸ್ ಆಂಡ್ ಕಮ್ಯುನಿಕೇಷನ್ ಎಂಜಿನಿಯರಿಂಗ್ ಉಪನ್ಯಾಸಕರಾದ ಸಂಪತ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ನಿಖಿತ್ ಡಿ. ಆರ್ ಧನ್ಯವಾದ ಸಮರ್ಪಿಸಿದರು.

Related posts

ಮುಗೇರಡ್ಕ: ಸ್ಪಂದನ ಚಾರಿಟೇಬಲ್ ಟ್ರಸ್ಟ್ , ಬೆಂಗಳೂರು ಮತ್ತು ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ಅಲೆಕ್ಕಿ ಇದರ ಆಶ್ರಯದಲ್ಲಿ ಮನೆ ಹಸ್ತಾಂತರ ಕಾರ್ಯಕ್ರಮ

Suddi Udaya

ಕೊಲ್ಲಿ: ರತನ್ ಶೆಟ್ಟಿಯವರ ಮನೆಯೊಳಗಿದ್ದ ಸೌಂಡ್ ಬಾಕ್ಸ್ ನಲ್ಲಿ ಅವಿತಿದ್ದ ಕಾಳಿಂಗ ಸರ್ಪ

Suddi Udaya

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ : ಬೆಳ್ತಂಗಡಿಯ ಎಸ್.ಡಿ.ಎಂ ಶಾಲೆಗೆ ಪ್ರಶಸ್ತಿ

Suddi Udaya

ಅರಸಿನಮಕ್ಕಿ: ಅರಿಕೆಗುಡ್ಡೆ ಶ್ರೀ ವನದುರ್ಗ ದೇವಸ್ಥಾನದ ಬ್ರಹ್ಮಕಲಶ: ಚಪ್ಪರ ಮುಹೂರ್ತ

Suddi Udaya

ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕ ಮೋಹನ್ ಕುಮಾರ್ ಕಚೇರಿಗೆ ಕ್ಯಾ. ಬ್ರಿಜೇಶ್ ಚೌಟ ಭೇಟಿ:

Suddi Udaya

ಸೆ. 7: ಮಡಂತ್ಯಾರುವಿನಲ್ಲಿ ವೈಭವದ ಮೊಸರು ಕುಡಿಕೆ ಉತ್ಸವ: ಸಾಧಕರಿಗೆ ಸನ್ಮಾನ,ಧಾರ್ಮಿಕ ಕಾರ್ಯಕ್ರಮ

Suddi Udaya
error: Content is protected !!