25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಓರಿಯೆಂಟೇಷನ್ ಕಾರ್ಯಕ್ರಮ.

ಉಜಿರೆ: ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಡಿಪ್ಲೋಮಾ ಪ್ರಥಮ ವರ್ಷದ ವಿದ್ಯಾರ್ಥಿಗಳಿಗಾಗಿ ಓರಿಯೆಂಟೇಷನ್ ಕಾರ್ಯಕ್ರಮ ಜೂ. 23 ರಂದು ನಡೆಯಿತು.


ಕಾರ್ಯಕ್ರಮದಲ್ಲಿ ದೀಪ ಪ್ರಜ್ವಲನೆಯನ್ನು ಮಾಡಿದ ಧರ್ಮಸ್ಥಳ ಸ್ಟಉದ್ಯೋಗ ತರಬೇತಿ ಸಂಸ್ಥೆ( ರುಡ್ ಸೆಟ್) ಯ ಹಿರಿಯ ಉಪನ್ಯಾಸಕ ಕರುಣಾಕರ್ ಜೈನ್ ಮಾತನಾಡುತ್ತ ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಯಶಸ್ಸಿಗೆ ಸಹಾಯ ಮಾಡುವುದಲ್ಲದೆ, ಭವಿಷ್ಯದ ವೃತ್ತಿ ಜೀವನದ ಸವಾಲುಗಳಿಗೆ ಅವರನ್ನು ಸಿದ್ದಪಡಿಸುವ ವಿವಿಧ ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕೆಂದು ಸಲಹೆ ನೀಡಿದರು. ಇಂದಿನ ಕ್ರಿಯಾತ್ಮಕ ಜಗತ್ತಿನಲ್ಲಿ ವಿದ್ಯಾರ್ಥಿಗಳಿಗೆ ಕೌಶಲ್ಯ ಅಭಿವೃದ್ಧಿಯ ನಿರ್ಣಾಯಕ ಪ್ರಾಮುಖ್ಯತೆಯನ್ನು ಹೇಳಿದರು. ಪೋಷಕರು ವಿದ್ಯಾರ್ಥಿಗಳಿಗೆ ಮಾದರಿಯಾಗಿ ವರ್ತಿಸಬೇಕು ಎಂದು ಒತ್ತಿಹೇಳಿದರು.


ಪ್ರಾಂಶುಪಾಲರಾದ ಸಂತೋಷ್ ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜು ಮತ್ತು ಡಿಪ್ಲೋಮಾ ಕೋರ್ಸ್ ಗಳ ಕುರಿತು ಮಾಹಿತಿ ನೀಡಿದರು. ಅದಲ್ಲದೆ, ಕಾಲೇಜಿನ ನಿಯಮಗಳು ಮತ್ತು ನಿಬಂಧನೆಗಳನ್ನು ವಿವರಿಸಿದರು.


ವೇದಿಕೆಯಲ್ಲಿ ಕಾಲೇಜಿನ ವ್ಯವಸ್ಥಾಪಕ ಚಂದ್ರನಾಥ ಜೈನ್ ಉಪಸ್ಥಿತರಿದ್ದರು. ಆಂಗ್ಲ ಭಾಷಾ ಉಪನ್ಯಾಸಕರಾದ ಶಂಕರ್ ಭಟ್ ಎಚ್.ಆರ್ ಸ್ವಾಗತಿಸಿದರು. ಮೆಕ್ಯಾನಿಕಲ್ ಎಂಜಿನಿಯರಿಂಗ್ ಉಪನ್ಯಾಸಕರಾದ ಶಿವಪ್ರಸಾದ್ ಮುಖ್ಯ ಅತಿಥಿಗಳನ್ನು ಪರಿಚಯಿಸಿದರು. ಎಲೆಕ್ಟ್ರಾನಿಕ್ಸ್ ಆಂಡ್ ಕಮ್ಯುನಿಕೇಷನ್ ಎಂಜಿನಿಯರಿಂಗ್ ಉಪನ್ಯಾಸಕರಾದ ಸಂಪತ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ನಿಖಿತ್ ಡಿ. ಆರ್ ಧನ್ಯವಾದ ಸಮರ್ಪಿಸಿದರು.

Related posts

ಬೆಳ್ತಂಗಡಿಯಲ್ಲಿ ಅನುಗ್ರಹ ಟ್ರೈನಿಂಗ್ ಕಾಲೇಜು ಕ್ಯಾಂಪಸ್ ಉದ್ಘಾಟನೆ

Suddi Udaya

ಕಲ್ಮಂಜ: ಮಾಣಿಂಜೆ ಅಣೆಕಟ್ಟುವಿನಲ್ಲಿ ಸಿಕ್ಕಿಹಾಕಿಕೊಂಡ ಮರದ ದಿಮ್ಮಿಗಳು : ತೆರವುಗೊಳಿಸುವಂತೆ ಸ್ಥಳೀಯರ ಒತ್ತಾಯ

Suddi Udaya

ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನಲ್ಲಿ 29ನೇ ಪದವಿ ಪ್ರದಾನ ಸಮಾರಂಭ

Suddi Udaya

ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ “ಪೆರ್ಲ ಬೈಪಾಡಿ ಊರುದ ಭಕ್ತಿದ ಎಸಲ್” ತುಳು ಆಡಿಯೋ & ವಿಡಿಯೋ ಆಲ್ಬಮ್ ಬಿಡುಗಡೆ

Suddi Udaya

ವೇಣೂರು ಐಟಿಐಯಲ್ಲಿ ಬೃಹತ್ ರಕ್ತದಾನ ಶಿಬಿರ: 119 ಯುನಿಟ್ ರಕ್ತ ಸಂಗ್ರಹ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್ ರವರಿಂದ ಉಜಿರೆ ಶ್ರೀ ಜನಾರ್ಧನ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!