September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಲ್ಪತರು ನರ್ಸಿಂಗ್ ಸ್ಕೂಲ್ ನಲ್ಲಿ ಲ್ಯಾಂಪ್ ಲೈಟಿಂಗ್ ಮತ್ತು ಓಥ್ ಸಮಾರಂಭ

ಬೆಳ್ತಂಗಡಿ: ಬೆಳ್ತಂಗಡಿಯ ಕಲ್ಪತರು ನರ್ಸಿಂಗ್ ಸ್ಕೂಲ್ ಜೂ.23 ರಂದು ಶ್ರದ್ಧೆಯೊಂದಿಗೆ ಲ್ಯಾಂಪ್ ಲೈಟಿಂಗ್ ಮತ್ತು ಓಥ್ ಸಮಾರಂಭ ಆಚರಿಸಲಾಯಿತು.

ಮುಖ್ಯ ಅತಿಥಿಯಾಗಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಅತಿ ವಂದನೀಯ ಲಾರೆನ್ಸ್ ಮುಕ್ಕುಯಿ ಮಾತನಾಡಿ “ನೀವು ಇಂದು ಈ ದೀಪವನ್ನು ಹೊತ್ತಿರುವಷ್ಟೆ ಅಲ್ಲ, ರೋಗಿಗಳಿಗಾಗಿ ಪ್ರೀತಿಯ ದೀಪವನ್ನೂ ಬೆಳಗಿಸಲು ಕರೆಹೊಂದಿದವರು. ಈ ಸೇವೆಗೆ ಸಮರ್ಪಿತ ಮನಸ್ಸು ಅತ್ಯಗತ್ಯ. ಈ ದೀಪ ನಿಮ್ಮ ಜೀವನದ ದಿಕ್ಕನ್ನು ತೋರಿಸುವ ಬೆಳಕು ಆಗಲಿ” ಎಂದು ಆಶೀರ್ವದಿಸಿದರು.

ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಸಂಜಾತ್ , ಇತರ ಗಣ್ಯರು, ಶಿಕ್ಷಕವೃಂದ ಹಾಗೂ ವಿದ್ಯಾರ್ಥಿಗಳು ಸಮಾರಂಭದಲ್ಲಿ ಭಾಗವಹಿಸಿದರು.

ಕಾರ್ಯಕ್ರಮದಲ್ಲಿ ನರ್ಸಿಂಗ್ ವಿದ್ಯಾರ್ಥಿನಿಯರು ವಿದ್ಯೆಯ ದೀಪ ಬೆಳಗಿಸಿ ನರ್ಸಿಂಗ್ ಸೇವೆಗೆ ತಮ್ಮ ಪ್ರತಿಜ್ಞಾ ವಿಧಿಯನ್ನು ವಾಚಿಸಿದರು. ವಿದ್ಯಾರ್ಥಿಗಳಿಗೆ ಪೋಷಕರು, ಬಂಧುಮಿತ್ರರು ಹಾಗೂ ಶಿಕ್ಷಕರು ಹಾರೈಕೆ ಸಲ್ಲಿಸಿದರು. ಕಲ್ಪತರು ನರ್ಸಿಂಗ್ ಸ್ಕೂಲಿನ ಪ್ರಾಂಶುಪಾಲರಾದ ಶ್ರೀಮತಿ ಚಂದ್ರಿಕಾರವರು ಪ್ರತಿಜ್ಞೆಯನ್ನು ಹೇಳಿಕೊಟ್ಟರು.

Related posts

ತಾಲೂಕು ಮಟ್ಟದ ಕಂಠಪಾಠ ಸ್ಪರ್ಧೆ: ಕುಕ್ಕೇಡಿ ಬುಳೆಕ್ಕರ ಶಾಲೆಯ ವಿದ್ಯಾರ್ಥಿ ಪ್ರಥ್ವಿ ವಿ ಎಸ್ ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿ: ಕಲ್ಲಗುಡ್ಡೆ ನಿವಾಸಿ ಚಂದ್ರ ನಿಧನ

Suddi Udaya

ಪದ್ಮುಂಜ: ವಾಹನ ತಡೆದು ಅವಾಚ್ಯವಾಗಿ ನಿಂದಿಸಿ ಹಲ್ಲೆ : ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಕೊಕ್ಕಡ: ಹಳ್ಳಿಂಗೇರಿ ನಿವಾಸಿ ದಿನೇಶ್ ನಿಧನ

Suddi Udaya

ಕೃಷಿ ಪಂಡಿತ ಪ್ರಶಸ್ತಿಗೆ ರೈತರಿಂದ ಹಾಗೂ ರೈತ ಮಹಿಳೆಯರಿಂದ ಅರ್ಜಿ ಆಹ್ವಾನ

Suddi Udaya

ಲಾಯಿಲ: ಕಾಣೆಯಾಗಿದ್ದ ಸೂಚನ ಫಲಕ : ಆವರಿಸಿದ್ದ ಗಿಡ ಗಂಟಿಗಳ ತೆರವು: “ಸುದ್ದಿ ಉದಯ” ಜನಧ್ವನಿ Effect

Suddi Udaya
error: Content is protected !!