25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಲ್ಪತರು ನರ್ಸಿಂಗ್ ಸ್ಕೂಲ್ ನಲ್ಲಿ ಲ್ಯಾಂಪ್ ಲೈಟಿಂಗ್ ಮತ್ತು ಓಥ್ ಸಮಾರಂಭ

ಬೆಳ್ತಂಗಡಿ: ಬೆಳ್ತಂಗಡಿಯ ಕಲ್ಪತರು ನರ್ಸಿಂಗ್ ಸ್ಕೂಲ್ ಜೂ.23 ರಂದು ಶ್ರದ್ಧೆಯೊಂದಿಗೆ ಲ್ಯಾಂಪ್ ಲೈಟಿಂಗ್ ಮತ್ತು ಓಥ್ ಸಮಾರಂಭ ಆಚರಿಸಲಾಯಿತು.

ಮುಖ್ಯ ಅತಿಥಿಯಾಗಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಅತಿ ವಂದನೀಯ ಲಾರೆನ್ಸ್ ಮುಕ್ಕುಯಿ ಮಾತನಾಡಿ “ನೀವು ಇಂದು ಈ ದೀಪವನ್ನು ಹೊತ್ತಿರುವಷ್ಟೆ ಅಲ್ಲ, ರೋಗಿಗಳಿಗಾಗಿ ಪ್ರೀತಿಯ ದೀಪವನ್ನೂ ಬೆಳಗಿಸಲು ಕರೆಹೊಂದಿದವರು. ಈ ಸೇವೆಗೆ ಸಮರ್ಪಿತ ಮನಸ್ಸು ಅತ್ಯಗತ್ಯ. ಈ ದೀಪ ನಿಮ್ಮ ಜೀವನದ ದಿಕ್ಕನ್ನು ತೋರಿಸುವ ಬೆಳಕು ಆಗಲಿ” ಎಂದು ಆಶೀರ್ವದಿಸಿದರು.

ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಸಂಜಾತ್ , ಇತರ ಗಣ್ಯರು, ಶಿಕ್ಷಕವೃಂದ ಹಾಗೂ ವಿದ್ಯಾರ್ಥಿಗಳು ಸಮಾರಂಭದಲ್ಲಿ ಭಾಗವಹಿಸಿದರು.

ಕಾರ್ಯಕ್ರಮದಲ್ಲಿ ನರ್ಸಿಂಗ್ ವಿದ್ಯಾರ್ಥಿನಿಯರು ವಿದ್ಯೆಯ ದೀಪ ಬೆಳಗಿಸಿ ನರ್ಸಿಂಗ್ ಸೇವೆಗೆ ತಮ್ಮ ಪ್ರತಿಜ್ಞಾ ವಿಧಿಯನ್ನು ವಾಚಿಸಿದರು. ವಿದ್ಯಾರ್ಥಿಗಳಿಗೆ ಪೋಷಕರು, ಬಂಧುಮಿತ್ರರು ಹಾಗೂ ಶಿಕ್ಷಕರು ಹಾರೈಕೆ ಸಲ್ಲಿಸಿದರು. ಕಲ್ಪತರು ನರ್ಸಿಂಗ್ ಸ್ಕೂಲಿನ ಪ್ರಾಂಶುಪಾಲರಾದ ಶ್ರೀಮತಿ ಚಂದ್ರಿಕಾರವರು ಪ್ರತಿಜ್ಞೆಯನ್ನು ಹೇಳಿಕೊಟ್ಟರು.

Related posts

ಕಣಿಯೂರು ಮಹಾಶಕ್ತಿ ಕೇಂದ್ರದ ವ್ಯಾಪ್ತಿಯಲ್ಲಿ ಶಾಸಕ ಹರೀಶ್ ಪೂಂಜರಿಂದ ಚುನಾವಣಾ ಪ್ರಚಾರ

Suddi Udaya

ಗುಂಡೂರಿ: ಮಂಜಪ್ಪ ದೇವಾಡಿಗರಿಗೆ ನುಡಿನಮನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಚರ್ಮಗಂಟು ರೋಗದ ಎರಡನೇ ಅಲೆಯೇ ಎಂಬ ಸಂದೇಹ

Suddi Udaya

ಕಕ್ಕಿಂಜೆಯಲ್ಲಿ ಶಾಸಕ ಹರೀಶ್ ಪೂಂಜರಿಂದ ಮತಯಾಚನೆ

Suddi Udaya

ಜೆ ಇ ಇ ಮೈನ್ಸ್ ಪರೀಕ್ಷೆ: ವಾಣಿ ಕಾಲೇಜಿನ ವಿದ್ಯಾರ್ಥಿ ಆದರ್ಶ್ ಗೆ ಶೇ. 98.08 ಫಲಿತಾಂಶ

Suddi Udaya

ವೇಣೂರು ಭಾರತಿ ಶಿಶುಮಂದಿರದಲ್ಲಿ ಭಗವದ್ಗೀತೆಯ ಕಲಿಕಾ ತರಗತಿ ಉದ್ಘಾಟನೆ

Suddi Udaya
error: Content is protected !!