September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರತಿಭಟನೆ

ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿ ವಿರೋಧಿಸಿ ಕಡಿರುದ್ಯಾವರ ಗ್ರಾ.ಪಂ. ನಲ್ಲಿ ಪ್ರತಿಭಟನೆ

ಕಡಿರುದ್ಯಾವರ : ರಾಜ್ಯ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿ ಖಂಡಿಸಿ ಕಡಿರುದ್ಯಾವರ ಬಿಜೆಪಿ ಘಟಕದಿಂದ ಕಡಿರುದ್ಯಾವರ ಗ್ರಾಮ ಪಂಚಾಯತ್ ಮುಂಭಾಗದಲ್ಲಿ ಜೂ.23ರಂದು ಪ್ರತಿಭಟನೆ ನಡೆಯಿತು.

ಪ್ರತಿಭಟನಾ ಸಭೆಯಲ್ಲಿ ಸೂರಜ್ ವಳಂಬ್ರ ಪ್ರಾಸ್ತವಿಕವಾಗಿ ಮಾತನಾಡಿದರು. ಅಶೋಕ್ ಕುಮಾರ್ ರವರು ರಾಜ್ಯ ಸರಕಾರದ 9/11 ನಕ್ಷೆಗೆ ಮೂಡದಿಂದ ಅನುಮತಿ ಪಡೆಯ ಆದೇಶ ಮಾಡಿದ್ದು ಅದರಿಂದ ಜನರಿಗಾಗುವ ತೊಂದರೆ ಬಗ್ಗೆ, ಕಟ್ಟಡ ಸಂಖ್ಯೆ ಇದ್ದರು ವಿದ್ಯುತ್ ಸಂಪರ್ಕ ಪಡೆಯಲು ವಾಸಯೋಗ್ಯ ಪ್ರಮಾಣ ಪತ್ರದ ಆದೇಶದ ಬಗ್ಗೆ, ನೋಂದಾವಣೆ ಶುಲ್ಕವನ್ನು. 2% ದಿಂದ 10% ಮಾಡಿರುವ ಬಗ್ಗೆ ಹಾಗೂ ಕಾಂಗ್ರೆಸ್ ಸರಕಾರದ ಭ್ರಷ್ಟಾಚಾರದ ಬಗ್ಗೆ ಮಾತಾಡಿ ಆಕ್ರೋಶವನ್ನು ವ್ಯಕ್ತಪಡಿಸಿ ತಕ್ಷಣ ಜನವಿರೋಧಿ ಆದೇಶಗಳನ್ನು ವಾಪಾಸ್ ಪಡೆಯುವಂತೆ ಹೇಳಿದರು. ತಪ್ಪಿದರೆ ಮುಂದೆ ದೊಡ್ಡ ಮಟ್ಟದಲ್ಲಿ ಹೋರಾಟವನ್ನು ಮಾಡುವುದಾಗಿ ಎಚ್ಚರಿಕೆಯನ್ನು ನೀಡಿದರು.

ಪ್ರತಿಭಟನೆಯಲ್ಲಿ ಪಂಚಾಯತ್ ಅಧ್ಯಕ್ಷೆ ರತ್ನಾವತಿ, ಉಪಾಧ್ಯಕ್ಷೆ ಸಾವಿತ್ರಿ , ಪಂಚಾಯತ್ ಸದಸ್ಯರು ರಾಜೇಶ್, ಹಿರಿಯರಾದ ಪ್ರಭಾಕರ ಶೆಣೈ, ಪ್ರಶಾಂತ್ ಅಂತರ, ರೇಣುಕಾ ರಮೇಶ್, ಹೇಮಾವತಿ, ರಾಮಚಂದ್ರ ಜನಾರ್ದನ ಕಾನರ್ಪ, ಸಿ ಎ ಬ್ಯಾಂಕ್ ಉಪಾಧ್ಯಕ್ಷ ಆನಂದ ಗೌಡ ಬರಮೇಲು, ಪ್ರಮುಖ ಕಾರ್ಯಕರ್ತರು ಸಾರ್ವಜನಿಕರು ಭಾಗವಹಿಸಿದರು.

Related posts

ಕೊಕ್ಕಡ: ಜೇಸಿ ಆಡಳಿತ ಸಭೆ: ಚುನಾವಣೆ ಅರಿವು ಆಂದೋಲನ ಕಾರ್ಯಕ್ರಮ

Suddi Udaya

ಕೊಯ್ಯೂರು ಪಂಚದುರ್ಗ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ವಿವಿಧ ಕ್ಷೇತ್ರದ ಮಹಿಳಾ ಸಾಧಕರಿಗೆ ಸನ್ಮಾನ

Suddi Udaya

ಪಾರಸ್ ಪೃಥ್ವಿ ಜ್ಯುವೆಲ್ಸ್ ವತಿಯಿಂದ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರ ದಿನಾಚರಣೆ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯಿಂದ ಇಲOತಿಲ ಕಾರ್ಯಕ್ಷೇತ್ರದ ಜ್ಞಾನವಿಕಾಸ ಕೇಂದ್ರದ ಸಭೆ

Suddi Udaya

ಮಾಜಿ ಅಧ್ಯಕ್ಷ ಹಾಲಿ ಗ್ರಾ.ಪಂ ಸದಸ್ಯ ಅಬ್ದುಲ್ ರಝಾಕ್ ಸತತ ಹೋರಾಟದಿಂದ ತೆಕ್ಕಾರು ಗ್ರಾಮಕ್ಕೆ ಉಪ ಆರೋಗ್ಯ ಕೇಂದ್ರ ಮಂಜೂರು ಕಟ್ಟಡ ನಿರ್ಮಿಸಲು ಅನುದಾನ ಮಂಜೂರುಗೊಳಿಸುವಂತೆ ಆರೋಗ್ಯ ಸಚಿವರಿಗೆ ಮತ್ತೊಂದು ಮನವಿ

Suddi Udaya
error: Content is protected !!