22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರತಿಭಟನೆ

ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿ ವಿರೋಧಿಸಿ ಕಡಿರುದ್ಯಾವರ ಗ್ರಾ.ಪಂ. ನಲ್ಲಿ ಪ್ರತಿಭಟನೆ

ಕಡಿರುದ್ಯಾವರ : ರಾಜ್ಯ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿ ಖಂಡಿಸಿ ಕಡಿರುದ್ಯಾವರ ಬಿಜೆಪಿ ಘಟಕದಿಂದ ಕಡಿರುದ್ಯಾವರ ಗ್ರಾಮ ಪಂಚಾಯತ್ ಮುಂಭಾಗದಲ್ಲಿ ಜೂ.23ರಂದು ಪ್ರತಿಭಟನೆ ನಡೆಯಿತು.

ಪ್ರತಿಭಟನಾ ಸಭೆಯಲ್ಲಿ ಸೂರಜ್ ವಳಂಬ್ರ ಪ್ರಾಸ್ತವಿಕವಾಗಿ ಮಾತನಾಡಿದರು. ಅಶೋಕ್ ಕುಮಾರ್ ರವರು ರಾಜ್ಯ ಸರಕಾರದ 9/11 ನಕ್ಷೆಗೆ ಮೂಡದಿಂದ ಅನುಮತಿ ಪಡೆಯ ಆದೇಶ ಮಾಡಿದ್ದು ಅದರಿಂದ ಜನರಿಗಾಗುವ ತೊಂದರೆ ಬಗ್ಗೆ, ಕಟ್ಟಡ ಸಂಖ್ಯೆ ಇದ್ದರು ವಿದ್ಯುತ್ ಸಂಪರ್ಕ ಪಡೆಯಲು ವಾಸಯೋಗ್ಯ ಪ್ರಮಾಣ ಪತ್ರದ ಆದೇಶದ ಬಗ್ಗೆ, ನೋಂದಾವಣೆ ಶುಲ್ಕವನ್ನು. 2% ದಿಂದ 10% ಮಾಡಿರುವ ಬಗ್ಗೆ ಹಾಗೂ ಕಾಂಗ್ರೆಸ್ ಸರಕಾರದ ಭ್ರಷ್ಟಾಚಾರದ ಬಗ್ಗೆ ಮಾತಾಡಿ ಆಕ್ರೋಶವನ್ನು ವ್ಯಕ್ತಪಡಿಸಿ ತಕ್ಷಣ ಜನವಿರೋಧಿ ಆದೇಶಗಳನ್ನು ವಾಪಾಸ್ ಪಡೆಯುವಂತೆ ಹೇಳಿದರು. ತಪ್ಪಿದರೆ ಮುಂದೆ ದೊಡ್ಡ ಮಟ್ಟದಲ್ಲಿ ಹೋರಾಟವನ್ನು ಮಾಡುವುದಾಗಿ ಎಚ್ಚರಿಕೆಯನ್ನು ನೀಡಿದರು.

ಪ್ರತಿಭಟನೆಯಲ್ಲಿ ಪಂಚಾಯತ್ ಅಧ್ಯಕ್ಷೆ ರತ್ನಾವತಿ, ಉಪಾಧ್ಯಕ್ಷೆ ಸಾವಿತ್ರಿ , ಪಂಚಾಯತ್ ಸದಸ್ಯರು ರಾಜೇಶ್, ಹಿರಿಯರಾದ ಪ್ರಭಾಕರ ಶೆಣೈ, ಪ್ರಶಾಂತ್ ಅಂತರ, ರೇಣುಕಾ ರಮೇಶ್, ಹೇಮಾವತಿ, ರಾಮಚಂದ್ರ ಜನಾರ್ದನ ಕಾನರ್ಪ, ಸಿ ಎ ಬ್ಯಾಂಕ್ ಉಪಾಧ್ಯಕ್ಷ ಆನಂದ ಗೌಡ ಬರಮೇಲು, ಪ್ರಮುಖ ಕಾರ್ಯಕರ್ತರು ಸಾರ್ವಜನಿಕರು ಭಾಗವಹಿಸಿದರು.

Related posts

ಪ್ರತಿಭಾ ಕಾರಂಜಿ ಸ್ಪರ್ಧೆ: ಕುಂಭಶ್ರೀ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya

ಲಾಯಿಲ ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿ ವತಿಯಿಂದ ಅಂತರರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ವತಿಯಿಂದ ಅರ್ಹ ಫಲಾನುಭವಿಗಳಿಗೆ ಉಜ್ವಲ ಗ್ಯಾಸ್ ವಿತರಣೆ

Suddi Udaya

ಬೆಳ್ತಂಗಡಿ ಶ್ರೀ ಕ್ಷೇ.ಧ.ಗ್ರಾ.ಯೋಜನೆಯಿಂದ ಮುಂಡತ್ತೊಡಿ ಹಿ.ಪ್ರಾ. ಶಾಲೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಲಾಯಿಲ ಬಿಜೆಪಿ ಬೆಂಬಲಿತ ಮಾಜಿ ಗ್ರಾಮ ಪಂಚಾಯತಿ ಸದಸ್ಯೆ ಕಾಂಗ್ರೆಸ್ ಪಕ್ಷ ಸೇರ್ಪಡೆ

Suddi Udaya

ಶಿಕ್ಷಕರು ಮತ್ತು ಸರ್ಕಾರಿ ಶಾಲೆಗಳ ಸಮಸ್ಯೆಗಳ ಬಗ್ಗೆ ಅಧಿವೇಶನದಲ್ಲಿ ಗಮನ ಸೆಳೆದ ಶಾಸಕ ಹರೀಶ್ ಪೂಂಜ

Suddi Udaya
error: Content is protected !!