25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರತಿಭಟನೆ

ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿ ವಿರೋಧಿಸಿ ಕಡಿರುದ್ಯಾವರ ಗ್ರಾ.ಪಂ. ನಲ್ಲಿ ಪ್ರತಿಭಟನೆ

ಕಡಿರುದ್ಯಾವರ : ರಾಜ್ಯ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿ ಖಂಡಿಸಿ ಕಡಿರುದ್ಯಾವರ ಬಿಜೆಪಿ ಘಟಕದಿಂದ ಕಡಿರುದ್ಯಾವರ ಗ್ರಾಮ ಪಂಚಾಯತ್ ಮುಂಭಾಗದಲ್ಲಿ ಜೂ.23ರಂದು ಪ್ರತಿಭಟನೆ ನಡೆಯಿತು.

ಪ್ರತಿಭಟನಾ ಸಭೆಯಲ್ಲಿ ಸೂರಜ್ ವಳಂಬ್ರ ಪ್ರಾಸ್ತವಿಕವಾಗಿ ಮಾತನಾಡಿದರು. ಅಶೋಕ್ ಕುಮಾರ್ ರವರು ರಾಜ್ಯ ಸರಕಾರದ 9/11 ನಕ್ಷೆಗೆ ಮೂಡದಿಂದ ಅನುಮತಿ ಪಡೆಯ ಆದೇಶ ಮಾಡಿದ್ದು ಅದರಿಂದ ಜನರಿಗಾಗುವ ತೊಂದರೆ ಬಗ್ಗೆ, ಕಟ್ಟಡ ಸಂಖ್ಯೆ ಇದ್ದರು ವಿದ್ಯುತ್ ಸಂಪರ್ಕ ಪಡೆಯಲು ವಾಸಯೋಗ್ಯ ಪ್ರಮಾಣ ಪತ್ರದ ಆದೇಶದ ಬಗ್ಗೆ, ನೋಂದಾವಣೆ ಶುಲ್ಕವನ್ನು. 2% ದಿಂದ 10% ಮಾಡಿರುವ ಬಗ್ಗೆ ಹಾಗೂ ಕಾಂಗ್ರೆಸ್ ಸರಕಾರದ ಭ್ರಷ್ಟಾಚಾರದ ಬಗ್ಗೆ ಮಾತಾಡಿ ಆಕ್ರೋಶವನ್ನು ವ್ಯಕ್ತಪಡಿಸಿ ತಕ್ಷಣ ಜನವಿರೋಧಿ ಆದೇಶಗಳನ್ನು ವಾಪಾಸ್ ಪಡೆಯುವಂತೆ ಹೇಳಿದರು. ತಪ್ಪಿದರೆ ಮುಂದೆ ದೊಡ್ಡ ಮಟ್ಟದಲ್ಲಿ ಹೋರಾಟವನ್ನು ಮಾಡುವುದಾಗಿ ಎಚ್ಚರಿಕೆಯನ್ನು ನೀಡಿದರು.

ಪ್ರತಿಭಟನೆಯಲ್ಲಿ ಪಂಚಾಯತ್ ಅಧ್ಯಕ್ಷೆ ರತ್ನಾವತಿ, ಉಪಾಧ್ಯಕ್ಷೆ ಸಾವಿತ್ರಿ , ಪಂಚಾಯತ್ ಸದಸ್ಯರು ರಾಜೇಶ್, ಹಿರಿಯರಾದ ಪ್ರಭಾಕರ ಶೆಣೈ, ಪ್ರಶಾಂತ್ ಅಂತರ, ರೇಣುಕಾ ರಮೇಶ್, ಹೇಮಾವತಿ, ರಾಮಚಂದ್ರ ಜನಾರ್ದನ ಕಾನರ್ಪ, ಸಿ ಎ ಬ್ಯಾಂಕ್ ಉಪಾಧ್ಯಕ್ಷ ಆನಂದ ಗೌಡ ಬರಮೇಲು, ಪ್ರಮುಖ ಕಾರ್ಯಕರ್ತರು ಸಾರ್ವಜನಿಕರು ಭಾಗವಹಿಸಿದರು.

Related posts

ಅಳದಂಗಡಿ: ವಯೋವೃದ್ದ ಬಾಡಜ್ಜನಿಗೆ ಆಶ್ರಯ ಕಲ್ಪಿಸಿದ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜ ಸೇವಾ ಸಂಘಟನೆ

Suddi Udaya

ಅಸ್ಸಾಂನಲ್ಲಿ ನಡೆದ ರಾಷ್ಟ್ರೀಯ ಯೋಗಾಸನ ಕ್ರೀಡಾ ಛಾಂಪಿಯನ್ ಶಿಪ್ ನ್ನು ಉದ್ಘಾಟಿಸಿದ ಶ್ರೀ ಧ.ಮಂ.ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ನಿರ್ದೇಶಕ ಡಾ. ಐ. ಶಶಿಕಾಂತ್ ಜೈನ್

Suddi Udaya

ಮಡಂತ್ಯಾರು ನಿಯತಿ ನೃತ್ಯ ನಿಕೇತನದ ವಿದ್ಯಾರ್ಥಿಗಳು ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ತೇರ್ಗಡೆ

Suddi Udaya

ಬೆಳ್ತಂಗಡಿ ಮಾಜಿ ಶಾಸಕರಾದ ಕೆ. ವಸಂತ ಬಂಗೇರ ನಿಧನಕ್ಕೆ ಎಸ್‌ಡಿಪಿಐ ಸಂತಾಪ

Suddi Udaya

ಗುರುವಾಯನಕೆರೆ: ಶ್ರೀ ಶಿವಂ ಟೆಕ್ಸ್‌ಟೈಲ್ಸ್ ಮತ್ತು ರೆಡಿಮೇಡ್ಸ್‌ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಸ್ಪೆಷಲ್ ಡಿಸ್ಕೌಂಟ್ ಆಫರ್

Suddi Udaya

ಹಿರಿಯ ಯಕ್ಷಗಾನ ಭಾಗವತ ಧರ್ಣಪ್ಪ ಆಚಾರ್ಯ ಅಳದಂಗಡಿ ನಿಧನ

Suddi Udaya
error: Content is protected !!