24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರತಿಭಟನೆ

ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಮಿತ್ತಬಾಗಿಲು ಗ್ರಾ.ಪಂ. ನಲ್ಲಿ ಪ್ರತಿಭಟನೆ

ಮಿತ್ತಬಾಗಿಲು: ರಾಜ್ಯ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿ ಖಂಡಿಸಿ ಮಿತ್ತಬಾಗಿಲು ಬಿಜೆಪಿ ಘಟಕದಿಂದ ಮಿತ್ತಬಾಗಿಲು ಗ್ರಾಮ ಪಂಚಾಯತ್ ಮುಂಭಾಗದಲ್ಲಿ ಜೂ.23ರಂದು ಪ್ರತಿಭಟನೆ ನಡೆಯಿತು.

ಗ್ರಾ.ಪಂ. ಅಧ್ಯಕ್ಷ ವಿನಯಚಂದ್ರ ಮಾತನಾಡಿ, ರಾಜ್ಯದ ಕಾಂಗ್ರೆಸ್ ಸರ್ಕಾರದ ಜನ ವಿರೋಧಿ ನೀತಿಯಿಂದಾಗಿ ಇಂದು ರಸ್ತೆಗಳಿಗೆ ಚರಲು ಹಾಕಬೇಕಾದರೆ ಪಂಚಾಯತ್ ನಲ್ಲಿ ಅನುದಾನ ಇಲ್ಲದಾಗಿದೆ. ಕೇಂದ್ರ ಸರ್ಕಾರದ 15ನೇ ಹಣಕಾಸಿನಿಂದ ಮಾತ್ರ ಇಂದು ಸಣ್ಣ ಪುಟ್ಟ ಕೆಲಸಗಳು ನಡೆಯುತ್ತಿದೆ. ಕಾಂಗ್ರೆಸ್ ನ ಬಿಟ್ಟಿ ಭಾಗ್ಯದಿಂದಾಗಿ ಜನ ಸಾಮಾನ್ಯರಿಗೆ ಸಮಸ್ಯೆಗಳು ಆಗುತ್ತಿದೆ ಎಂದರು.

ನಂತರ ವಿವಿಧ ಬೇಡಿಕೆಗಳನ್ನು ಒಳಗೊಂಡ ಮನವಿಯನ್ನು ಪಂಚಾಯತ್‌ ಅಭಿವೃದ್ಧಿ ಅಧಿಕಾರಿ ರವರ ಮೂಲಕ ರಾಜ್ಯಪಾಲರಿಗೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಪಂ ಉಪಾಧ್ಯಕ್ಷೆ ವಿಜಯಲಕ್ಷ್ಮೀ, ಹಿರಿಯ ಮುಖಂಡ ವಾಸುದೇವ ರಾವ್ ಕಕ್ಕೇನೇಜಿ ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರುಗಳು ಉಪಸ್ಥಿತರಿದ್ದರು.

Related posts

ಮೇ 28: ಮಿತ್ತಬಾಗಿಲು ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಶಿಲಾಮಯ ಧ್ವಜಸ್ತಂಭ

Suddi Udaya

ಮೊಗ್ರು : ಮುಗೇರಡ್ಕ ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ಮುಖ್ಯಕಾರ್ಯನಿರ್ವಹರ್ಣಾಧಿಕಾರಿಯಾಗಿ ಶಶಿಧರ ಅಧಿಕಾರ ಸ್ವೀಕಾರ

Suddi Udaya

ವಿಧಾನ ಪರಿಷತ್ ಶಾಸಕ ಕೆ. ಪ್ರತಾಪ್ ಸಿಂಹ ನಾಯಕ್ ರವರಿಗೆ ಮಂತ್ರಾಲಯಂ ಪರಿಮಳ ಪ್ರಶಸ್ತಿ ಪ್ರದಾನ

Suddi Udaya

ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ ಸಮಾಜ ಸೇವಾ ಸಂಘದ ಆರಂಬೋಡಿ ಗ್ರಾಮ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಧರ್ಮಸ್ಥಳ: ಕೇಶವ ಗಾಣಿಗ ನಿಧನ

Suddi Udaya
error: Content is protected !!