ಬೆಳ್ತಂಗಡಿ ತಾಲೂಕಿನ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಎಸ್.ಡಿ.ಎಮ್ ಅನುದಾನಿತ ಪ್ರೌಢಶಾಲೆ ಇಲ್ಲಿಯ ದೈಹಿಕ ಶಿಕ್ಷಣ ಶಿಕ್ಷಕರು, ರಾಷ್ಟ್ರೀಯ ಕಬಡ್ಡಿ ತೀರ್ಪುಗಾರ ಕೃಷ್ಣಾನಂದ ರಾವ್ ಇವರು ಅವಿರೋಧವಾಗಿ ಆಯ್ಕೆ ಆಗಿರುತ್ತಾರೆ.
ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಸ. ಉ. ಪ್ರಾ. ಶಾಲೆ ಬದನಾಜೆಯ ನಿರಂಜನ್ , ಕೋಶಾಧಿಕಾರಿಯಾಗಿ ಅಶೋಕ್ ಸರಕಾರಿ ಪ್ರೌಢಶಾಲೆ ಹಳೇಪೇಟೆ ಉಜಿರೆ ಇವರು ಆಯ್ಕೆಯಾಗಿರುತ್ತಾರೆ .
ಸಂಘದ ಗೌರವ ಅಧ್ಯಕ್ಷರಾಗಿ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಶ್ರೀಮತಿ ಸುಜಯ, ಸಂಘದ ಉಪಾಧ್ಯಕ್ಷರಾಗಿ ವೆಂಕಟೇಶ್ ಭಟ್ ಗುರುವಾಯನಕೆರೆ ಹಾಗೂ ಕೇವನ್ ಅಳದಂಗಡಿ , ಜಂಟಿ ಕಾರ್ಯದರ್ಶಿಯಾಗಿ ಶೀನಪ್ಪ ಗೌಡ ಪುದುವೆಟ್ಟು ಹಾಗೂ ಪ್ರವೀಣ್ ಎನ್ ಬೆಳ್ತಂಗಡಿ, ಸಂಘಟನಾ ಕಾರ್ಯದರ್ಶಿಯಾಗಿ ಅಜಿತ್ ಗೇರುಕಟ್ಟೆ ಹಾಗೂ ಶೇಖರ್ ಅಳದಂಗಡಿ, ಕ್ರೀಡಾ ಕಾರ್ಯದರ್ಶಿಯಾಗಿ ಗುಣಪಾಲ್ ಎಂ ಎಸ್ ಮುಂಡಾಜೆ ಹಾಗೂ ಶ್ರೀಮತಿ ಪದ್ಮಶ್ರೀ ಜೈನ್ ಕಾಶಿಪಟ್ನ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಶ್ರೀಮತಿ ತ್ರಿಶಲಾ ಜೈನ್ ಕರ್ನೂಡಿ ಲಾಯಿಲ, ಪತ್ರಿಕಾ ಕಾರ್ಯದರ್ಶಿಯಾಗಿ ಅಜಿತ್ ಕುಮಾರ್ ಲಾಯಿಲ, ಆಂತರಿಕ ಲೆಕ್ಕ ಪರಿಶೋಧಕರಾಗಿ ವಿಠಲ್ ನಾಯಕ್ ಬದನಾಜೆ ಆಯ್ಕೆ ಆಗಿರುತ್ತಾರೆ.











