ಮೇಲಂತಬೆಟ್ಟು : ರಾಜ್ಯಕಾಂಗ್ರೆಸ್ ಸರಕಾರದ ಜನ ವಿರೋಧಿ ನೀತಿಯನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿ ಕರೆಕೊಟ್ಟ ಪ್ರತಿಭಟನೆಯ ಭಾಗವಾಗಿ ಜೂ.23 ರಂದು ಮೇಲಂತಬೆಟ್ಟು ಗ್ರಾಮ ಪಂಚಾಯತ್ ಎದುರು ಪ್ರತಿಭಟನೆ ಮಾಡಲಾಯಿತು.
ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಪಂಚಾಯತ್ ಸದಸ್ಯರು ಮತ್ತು ಬೆಳ್ತಂಗಡಿ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಜಯಾನಂದ ಗೌಡ, ಕಾರ್ಯದರ್ಶಿ ಪ್ರಭಾಕರ್ ಮತ್ತು ಶಕ್ತಿಕೇಂದ್ರದ ಅಧ್ಯಕ್ಷರು, ಬೂತ್ ಅಧ್ಯಕ್ಷರು /ಕಾರ್ಯದರ್ಶಿ ಹಾಗೂ ಕಾರ್ಯಕರ್ತರು ಹಾಗೂ ಪಕ್ಷದ ಅಭಿಮಾನಿಗಳು ಭಾಗವಹಿಸಿದರು.











