ವೇಣೂರು: ಕಾಂಗ್ರೆಸ್ ಸರಕಾರವು ಅಧಿಕಾರಕ್ಕೆ ಬಂದು ಎರಡೂವರೆ ವರ್ಷಗಳಾದರೂ ಸೂಸೂತ್ರವಾಗಿ ಆಡಳಿತ ನಡೆಸದೇ ಅವೈಜ್ಞಾನಿಕ ನಿಯಮಗಳನ್ನು ರೂಪಿಸಿ ಅಲೆದಾಡುವ ಭಾಗ್ಯ ಒದಗಿಸಿರುವುದನ್ನು ಭಾರತೀಯ ಜನತಾ ಘಟಕವು ತೀವ್ರವಾಗಿ ಖಂಡಿಸುತ್ತದೆ ಎಂದು ಶಾಸಕ ಹರೀಶ್ ಪೂಂಜ ಹೇಳಿದರು.
ಅವರು ಕಾಂಗ್ರೇಸ್ ಸರಕಾರದ ವಿರುದ್ದ ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ವೇಣೂರು ಗ್ರಾಮ ಪಂಚಾಯತ್ ವಠಾರದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದರು.

ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜಯಂತ್ ಕೋಟ್ಯಾನ್ ಮಾತನಾಡಿ
9/11ಸಮಸ್ಯೆಯಿಂದ ಜನರು ಸಮಸ್ಯೆ ಎದುರುತ್ತಿದ್ದು ಇಲ್ಲಿಂದ ಮೂಡಬಿದ್ರೆಗೆ ಅಲೆದಾಡುವ ಪರಿಸ್ಥಿತಿ ಎದುರಾಗಿದೆ ಎಂದರು.
ಪ್ರತಿಭಟನೆಯಲ್ಲಿ ವೇಣೂರು ಗ್ರಾ.ಪಂ ಅಧ್ಯಕ್ಷೆ ಮಲ್ಲಿಕಾ ಹೆಗ್ಡೆ,ಉಪಾಧ್ಯಕ್ಷ ಉಮೇಶ್ ನಡ್ತಿಕಲ್ಲು, ಬಿಜೆಪಿ ಪ್ರಮುಖರಾದ ರಾಜೇಶ್ ಪೂಜಾರಿ ವೇಣೂರು,ನೇಮಯ್ಯ ಕುಲಾಲ್,ರಕ್ಷಿತ್ ಬಜಿರೆ,ಲೋಕಯ್ಯ ಪೂಜಾರಿ,ವಿಜಯ ಗೌಡ,ಪಂಚಾಯತ್ ಸದಸ್ಯರು,ಕಾರ್ಯಕರ್ತರು ಉಪಸ್ಥಿತರಿದ್ದರು.











