23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ರಾಜ್ಯ ಕಾಂಗ್ರೆಸ್ ಸರ್ಕಾರದ ಜನ ವಿರೋಧಿ ನೀತಿಗಳನ್ನು ಖಂಡಿಸಿ ಲಾಯಿಲ ಗ್ರಾ.ಪಂ. ಎದುರು ಪ್ರತಿಭಟನೆ

ಲಾಯಿಲ : ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ವತಿಯಿಂದ ರಾಜ್ಯ ಕಾಂಗ್ರೆಸ್ ಸರ್ಕಾರದ “ಜನ ವಿರೋಧಿ ನೀತಿ”ಗಳನ್ನು ಖಂಡಿಸಿ ಇಂದು ಲಾಯಿಲ ಗ್ರಾಮ ಪಂಚಾಯತ್ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು.

ಮುಖ್ಯ ಭಾಷಣಕಾರರಾಗಿ ತಾಲೂಕು ಪಂಚಾಯತ್ ಮಾಜಿ ಸದಸ್ಯ, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಸುಧಾಕರ ಬಿ.ಎಲ್ ಇವರು ಮಾತನಾಡಿ ರಾಜ್ಯ ಸರ್ಕಾರದ ವೈಫಲ್ಯವನ್ನು ಸಾರ್ವಜನಿಕರ ಮುಂದೆ ಬಿಚ್ಚಿಟ್ಟರು. ಪ್ರಾಸ್ತಾವಿಕವಾಗಿ ಮಾತನಾಡಿದ ಮಂಡಲ ಕಾರ್ಯದರ್ಶಿ ಗಿರೀಶ್ ಗಿರೀಶ್ ಡೋಂಗ್ರೆ ಇವರು ಕಟ್ಟಡ ಕಾರ್ಮಿಕರ ಅನುಭವಿಸುತ್ತಿರುವ ಸಮಸ್ಯೆಯನ್ನು ವಿವರಿಸಿದರು. ಯುವ ಮೋರ್ಚಾ ಮಂಡಲ ಉಪಾಧ್ಯಕ್ಷ ಗಣೇಶ್. ಆರ್ ಸ್ವಾಗತಿಸಿ ಬೂತ್ 66 ರ ಕಾರ್ಯದರ್ಶಿ ಜಗದೀಶ್ ಕನ್ನಾಜೆ ಧನ್ಯವಾದಗೈದರು.

ಲಾಯಿಲ ಮಹಾ ಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಅರವಿಂದ್ ಕುಮಾರ್ ಇವರು ಕಾರ್ಯಕ್ರಮವನ್ನು ನಿರೂಪಿಸಿ ಪಕ್ಷದ ವತಿಯಿಂದ ಗ್ರಾಮ ಪಂಚಾಯತ್ ಅಭಿವೃದ್ದಿ ಅಧಿಕಾರಿಗಳ ಮೂಲಕ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದ ಮನವಿ ಪತ್ರವನ್ನು ಓದಿದರು.

ಈ ಸಂದರ್ಭದಲ್ಲಿ ಲಾಯಿಲ ಶಕ್ತಿ ಕೇಂದ್ರ ಅಧ್ಯಕ್ಷರಾದ ಗಣೇಶ್ ಸಫಲ್ಯ, ತಾಲೂಕು ಸಹಕಾರ ಭಾರತಿ ಅಧ್ಯಕ್ಷ ವೆಂಕಪ್ಪಯ್ಯ ಭಟ್, ಮಂಡಲ ಕಾರ್ಯದರ್ಶಿ ಆಶಾ ಸಾಲ್ಡನ, ಅಲ್ಪಸಂಖ್ಯಾತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಅಶ್ರಫ್ ಮಾಂಜಲ್, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ರುಕ್ಮಯ ಕನ್ನಾಜೆ, ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಬೂತ್ ಸಮಿತಿ ಅಧ್ಯಕ್ಷರು,ಕಾರ್ಯದರ್ಶಿ, ಸಿ.ಎ ಬ್ಯಾಂಕ್ ನಿರ್ದೇಶಕರು, ಹಾಲಿನ ಸೊಸೈಟಿ ನಿರ್ದೇಶಕರು, ಮಾಜಿ ಗ್ರಾಮ ಪಂಚಾಯತ್ ಸದಸ್ಯರು, ಕಾರ್ಯಕರ್ತ ಬಂಧುಗಳು ಉಪಸ್ಥಿತರಿದ್ದರು.

Related posts

ಓಡಿಲ್ನಾಳ ಸ.ಉ.ಪ್ರಾ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ವಿಧಾನ ಪರಿಷತ್ ಚುನಾವಣೆ : ಮದುಮಗನಿಂದ ಕೊಕ್ಕಡ ಪಂಚಾಯತ್ ನಲ್ಲಿ ಮತ ಚಲಾವಣೆ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಜಿಲ್ಲಾ ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಸುರೇಶ್ ಬಿ. ಕೌಡಂಗೆ

Suddi Udaya

ಬಂದಾರು: 28ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣೆ

Suddi Udaya

ಎ.30-ಮೇ.3: ಮಾನ್ಯ ಸತ್ಯಚಾವಡಿ ತರವಾಡು ಮನೆಯ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವ: ಸಮಾಲೋಚನೆ ಸಭೆ, ಭರದಿಂದ ಸಾಗುತ್ತಿದೆ ಜೀರ್ಣೋದ್ಧಾರ ಕೆಲಸ

Suddi Udaya

ಕನ್ಯಾಡಿ 2: ಸ.ಉ. ಹಿ.ಪ್ರಾ. ಶಾಲೆಗೆ ಕನ್ಯಾಡಿ ಫ್ರೆಂಡ್ಸ್ ಕ್ಲಬ್ ವತಿಯಿಂದ ಪ್ರಿಂಟರ್ ಕೊಡುಗೆ

Suddi Udaya
error: Content is protected !!