25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರತಿಭಟನೆ

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಪಟ್ರಮೆ ಗ್ರಾಮ ಪಂಚಾಯತ್ ಬಳಿ ಬಿಜೆಪಿ ಪ್ರತಿಭಟನೆ

ಪಟ್ರಮೆ : ಬಿಜೆಪಿ ಕಾರ್ಯಕರ್ತ ಜಯರಾಮ್ ರವರ ಮನೆಯಲ್ಲಿ ಶ್ಯಾಮ್ ಪ್ರಸಾದ್ ಮುಖರ್ಜಿ ಬಲಿದಾನ ದಿವಸವನ್ನು ಪುಷ್ಪನಮನದ ಮೂಲಕ ನಡೆಸಿ ಅಲ್ಲಿಂದ ಮೆರವಣಿಗೆ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಪಟ್ರಮೆ ಗ್ರಾಮ ಪಂಚಾಯತ್ ಕಚೇರಿ ಬಳಿ ಪ್ರತಿಭಟನೆ ನಡೆಸಲಾಯಿತು.

ಪ್ರಮುಖ ಭಾಷಣಕಾರರಾಗಿ ಸಂದೀಪ್ ರೈ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿಯನ್ನು ಖಂಡಿಸಿ, ಪಂಚಾಯತ್ ಮಟ್ಟದಲ್ಲಿ ಈಗಿನ ಸರಕಾರದಿಂದ ಆಗುತ್ತಿರುವ ಅನ್ಯಾಯಗಳ ಬಗ್ಗೆ ಎಳೆ ಎಳೆಯಾಗಿ ವಿವರಿಸಿದರು.

9/11 ಸಮಸ್ಯೆ, ಅಕ್ರಮ ಸಕ್ರಮ ಸಮಸ್ಯೆ, ವಿದ್ಯುತ್ ದರ ಸಮಸ್ಯೆ, ವಸತಿ ಸಮಸ್ಯೆ, ಕೆಂಪು ಕಲ್ಲು ನಿಷೇಧ, ಬಿಪಿಎಲ್ ಕಾರ್ಡು ರದ್ಧತಿ, ಸಂಧ್ಯಾ ಸುರಕ್ಷಾ, ವೃದ್ಧಾಪ್ಯ ವೇತನ ಮುಂತಾದ ಸ್ಥಳೀಯ ಸಮಸ್ಯೆಗಳ ಬಗ್ಗೆ ಮಾತನಾಡಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರವನ್ನು ನೀಡಲಾಯಿತು.


ಪ್ರತಿಭಟನೆಯಲ್ಲಿ ಪಂಚಾಯತ್ ಅಧ್ಯಕ್ಷ ಮನೋಜ್, ಹಾಗೂ ಸದಸ್ಯರು, ಶಕ್ತಿಕೇಂದ್ರ ಪ್ರಮುಖ್ ಡಾಗಯ್ಯ ಗೌಡ, ಸೊಸೈಟಿ ನಿರ್ದೇಶಕರುಗಳು, ಬಿಜೆಪಿ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

Related posts

ಗೇರುಕಟ್ಟೆ : ಪರಪ್ಪು ಮಸೀದಿಯಲ್ಲಿ ಎಸ್.ಎಸ್.ಎಫ್ ಸದಸ್ಯತ್ವ ಅಭಿಯಾನದ ಪೋಸ್ಟರ್ ಬಿಡುಗಡೆ

Suddi Udaya

ವೇಣೂರು ವಿದ್ಯೋದಯ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಇಳಂತಿಲದಲ್ಲಿ ಕುಣಿತ ಭಜನಾ ತರಬೇತಿ ಆರಂಭೋತ್ಸವ

Suddi Udaya

ಕಕ್ಕಿಂಜೆ: ರವಿ ಗುರುಸ್ವಾಮಿ ಅಸೌಖ್ಯದಿಂದ ನಿಧನ

Suddi Udaya

ಸುಲ್ಕೇರಿ ಗ್ರಾ.ಪಂ. ಗ್ರಾಮ ಸಭೆ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya
error: Content is protected !!