ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರತಿಭಟನೆ

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಪಟ್ರಮೆ ಗ್ರಾಮ ಪಂಚಾಯತ್ ಬಳಿ ಬಿಜೆಪಿ ಪ್ರತಿಭಟನೆ

ಪಟ್ರಮೆ : ಬಿಜೆಪಿ ಕಾರ್ಯಕರ್ತ ಜಯರಾಮ್ ರವರ ಮನೆಯಲ್ಲಿ ಶ್ಯಾಮ್ ಪ್ರಸಾದ್ ಮುಖರ್ಜಿ ಬಲಿದಾನ ದಿವಸವನ್ನು ಪುಷ್ಪನಮನದ ಮೂಲಕ ನಡೆಸಿ ಅಲ್ಲಿಂದ ಮೆರವಣಿಗೆ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಪಟ್ರಮೆ ಗ್ರಾಮ ಪಂಚಾಯತ್ ಕಚೇರಿ ಬಳಿ ಪ್ರತಿಭಟನೆ ನಡೆಸಲಾಯಿತು.

ಪ್ರಮುಖ ಭಾಷಣಕಾರರಾಗಿ ಸಂದೀಪ್ ರೈ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿಯನ್ನು ಖಂಡಿಸಿ, ಪಂಚಾಯತ್ ಮಟ್ಟದಲ್ಲಿ ಈಗಿನ ಸರಕಾರದಿಂದ ಆಗುತ್ತಿರುವ ಅನ್ಯಾಯಗಳ ಬಗ್ಗೆ ಎಳೆ ಎಳೆಯಾಗಿ ವಿವರಿಸಿದರು.

9/11 ಸಮಸ್ಯೆ, ಅಕ್ರಮ ಸಕ್ರಮ ಸಮಸ್ಯೆ, ವಿದ್ಯುತ್ ದರ ಸಮಸ್ಯೆ, ವಸತಿ ಸಮಸ್ಯೆ, ಕೆಂಪು ಕಲ್ಲು ನಿಷೇಧ, ಬಿಪಿಎಲ್ ಕಾರ್ಡು ರದ್ಧತಿ, ಸಂಧ್ಯಾ ಸುರಕ್ಷಾ, ವೃದ್ಧಾಪ್ಯ ವೇತನ ಮುಂತಾದ ಸ್ಥಳೀಯ ಸಮಸ್ಯೆಗಳ ಬಗ್ಗೆ ಮಾತನಾಡಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರವನ್ನು ನೀಡಲಾಯಿತು.


ಪ್ರತಿಭಟನೆಯಲ್ಲಿ ಪಂಚಾಯತ್ ಅಧ್ಯಕ್ಷ ಮನೋಜ್, ಹಾಗೂ ಸದಸ್ಯರು, ಶಕ್ತಿಕೇಂದ್ರ ಪ್ರಮುಖ್ ಡಾಗಯ್ಯ ಗೌಡ, ಸೊಸೈಟಿ ನಿರ್ದೇಶಕರುಗಳು, ಬಿಜೆಪಿ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

Related posts

ಭಾರತೀಯ ಜನತಾ ಪಾರ್ಟಿಯ ಗರ್ಡಾಡಿ ಶಕ್ತಿ ಕೇಂದ್ರದ ನೂತನ‌ ಬೂತ್ ಸಮಿತಿ ಅಧ್ಯಕ್ಷ ಹಾಗೂ ಕಾರ್ಯದರ್ಶಿಗಳ ಆಯ್ಕೆ

Suddi Udaya

ನವ ವಿವಾಹಿತ, ಕಂಪನಿ ಉದ್ಯೋಗಿ, ನಾಲ್ಕೂರಿನ ಯುವಕ ಮೈಸೂರಲ್ಲಿ ಆತ್ಮಹತ್ಯೆ

Suddi Udaya

ಆ.18: ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ರಾಷ್ಟ್ರೀಯ ಮಟ್ಟದ ಅಧ್ಯಾಪಕರ ಅಭಿವೃದ್ಧಿ ಕಾರ್ಯಕ್ರಮ

Suddi Udaya

ಕಕ್ಯಪದವು ಲಾವಣ್ಯ ಹತ್ಯೆ ಆರೋಪಿಗೆ ನ್ಯಾಯಾಂಗ ಬಂಧನ

Suddi Udaya

ಉಜಿರೆ: ಎಸ್.ಡಿ.ಎಂ. ಕಾಲೇಜು ಗ್ರಂಥಾಲಯದ ತುಕಾರಾಮ ಸಾಲಿಯಾನ್ ಸೇವಾ ನಿವೃತ್ತಿ

Suddi Udaya

ಲಯನ್ಸ್ ಫೌಂಡೇಶನ್ ವತಿಯಿಂದ ಬೆಳ್ತಂಗಡಿ ಲಯನ್ಸ್ ಭವನ ನಿರ್ಮಾಣಕ್ಕೆ ಬಿಡುಗಡೆಗೊಂಡ ರೂ. 5 ಲಕ್ಷ ದೇಣಿಗೆ ಹಸ್ತಾಂತರ

Suddi Udaya
error: Content is protected !!