25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರತಿಭಟನೆಪ್ರಮುಖ ಸುದ್ದಿಬೆಳ್ತಂಗಡಿವರದಿ

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ವಿರೋಧಿಸಿ ಪಟ್ಟಣ ಪ೦ಚಾಯತ್ ಎದುರು ಪ್ರತಿಭಟನೆ

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಇದರ ವತಿಯಿಂದ ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಯನ್ನು ಖಂಡಿಸಿ, ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಹಾಗೂ ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ ಪ್ರಜ್ವಲ್ ಇವರ ನೇತೃತ್ವದಲ್ಲಿ ಬೆಳ್ತಂಗಡಿ ಪಟ್ಟಣ ಪಂಚಾಯತ್ ಎದುರು ಜೂ.23 ರಂದು ಪ್ರತಿಭಟನೆ ನಡೆಯಿತು.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಜಯಾನಂದ ಗೌಡ ಪ್ರಜ್ವಲ್ ಅವರು ಕರ್ನಾಟಕ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದು ಎರಡು ವರ್ಷಗಳಾಗುತ್ತಿದ್ದು, ರಾಜ್ಯದಲ್ಲಿ ಭೂಮಾಫಿಯ, ಪಟ್ಟಭದ್ರ ಹಿತಾಸಕ್ತಿಗಳಿಂದ ಜನರಿಗೆ ಸುಲಭ ರೀತಿಯ ಸೇವೆ ದೊರಕದೆ ಭ್ರಷ್ಟಚಾರದ ಕೂಪದಿಂದ ಶ್ರೀಸಾಮಾನ್ಯನ ಹಣ ದೋಚಲು ಅವೈಜ್ಞಾನಿಕ ನಿಯಮ ರೂಪಿಸಿ ಅಲೆದಾಟದ ಭಾಗ್ಯ ಒದಗಿಸಿರುವುದನ್ನು ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ನಗರ ಘಟಕ ತೀವ್ರವಾಗಿ ಖಂಡಿಸುತ್ತದೆ ಎಂದು ತಿಳಿಸಿದರು.


ಪಟ್ಟಣವಾಸಿಗಳಿಗೆ ನೀಡುತ್ತಿದ್ದ ಪಂಚಾಯತ್ ಸೇವೆಗಳನ್ನು ಕಠಿಣಗೊಳಿಸಿದ ಪರಿಣಾಮ ಇಂದು ಜನಸಾಮಾನ್ಯರು ನಿವೇಶನಕ್ಕೆ ಬಿಖಾತೆ ಕೊಟ್ಟರೂ, ಸಮಸ್ಯೆ ಉಂಟಾಗಿ ಅನುಮತಿ ಸಿಗದೆ ಮನೆ ನಿರ್ಮಾಣಕ್ಕೆ ಗೃಹ ಮಂಡಳಿಗೆ ಅಲೆದಾಡುವ ಪರಿಸ್ಥಿತಿ ನಿರ್ಮಾಣಗೊಂಡಿದೆ. ಅದೇ ರೀತಿ ಕಟ್ಟಡಕ್ಕೆ ಸೂಕ್ತ ಪರವಾನಿಗೆ ನೀಡದೆ ಅವೈಜ್ಞಾನಿಕ ಕಾರಣ ನೀಡುವುದರಿಂದ ಮನೆ ನಿರ್ಮಾಣಕ್ಕೆ ಮನೆ ನಂಬ್ರ ನೀಡದಿರುವುದು, ವಿದ್ಯುತ್ ಸಂಪರ್ಕ ನಿರಾಕರಿಸುವುದು ಜನತೆಯ ದೈನಂದಿನ ಜೀವನಕ್ಕೆ ಬಹಳಷ್ಟು ಸಮಸ್ಯೆಯಾಗಿದೆ ಎಂದು ಆರೋಪಿಸಿದರು.

ಈ ಎಲ್ಲಾ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಿ ಕಾರ್ಯಾಂಗದ ಮುಖ್ಯಸ್ಥರಾದ ರಾಜ್ಯಪಾಲರು ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡಿ ಜನಪರ ಸೇವೆ ಸುಲಲಿತವಾಗಿ ದೊರೆಯುವಂತಾಗಲು ಕಾರಣೀಕರ್ತರಾಗಬೇಕೆಂದು ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ನಗರ ಘಟಕದ ಪರವಾಗಿ ಒಕ್ಕೊರಲಿನಿಂದ ಆಗ್ರಹಿಸುತ್ತಿದ್ದೇವೆ ಎಂದು ಹೇಳಿದರು. ನಂತರ ವಿವಿಧ ಬೇಡಿಕೆಗಳನ್ನು ಒಳಗೊಂಡ ಮನವಿಯನ್ನು ಮುಖ್ಯಾಧಿಕಾರಿ ರಾಜೇಶ್ ಅವರ ಮೂಲಕ ರಾಜ್ಯಪಾಲರಿಗೆ ಸಲ್ಲಿಸಲಾಯಿತು.

ಪ್ರತಿಭಟನೆಯಲ್ಲಿ ಬಿಜೆಪಿ ಮಂಡಲ ಕಾರ್ಯದರ್ಶಿ ಪ್ರಭಾಕರ ಆಚಾರ್ಯ, ಭಾರತೀಯ ಮಜ್ದೂರು ಸಂಘದ ಜಿಲ್ಲಾಧ್ಯಕ್ಷ ಹಾಗೂ ನ್ಯಾಯವಾದಿ ಅನಿಲ್ ಕುಮಾರ್, ಪ.ಪಂ ಸದಸ್ಯರಾದ ರಜನಿ ಕುಡ್ವ, ಲೋಕೇಶ್ ನಾಯ್ಕ, ಶಕ್ತಿಕೇಂದ್ರದ ಪ್ರಮುಖ್ ಪ್ರಕಾಶ್ ಆಚಾರ್ಯ, ಪ.ಪಂ ಮಾಜಿ ಅಧ್ಯಕ್ಷೆ ವೀಣಾ ವಿ. ಕುಮಾರ್, ಬೂತ್ ಅಧ್ಯಕ್ಷ ಪ್ರೇಮನಾಥ್ ಶೆಟ್ಟಿ, ಪ್ರಮುಖರಾದ ಭುಜಂಗ ಶೆಟ್ಟಿ, ಹರೀಶ್ ಕೆಲ್ಲಗುತ್ತು, ರಾಜೇಶ್ ಕೆಲ್ಲಗುತ್ತು, ಶಿವಶಂಕರ್, ಶ್ರೀಮತಿ ಲಲಿತಾ, ಶಂಕರ್, ಆಶಾ ಸತೀಶ್, ಉಷಾ, ರವಿ, ರಕ್ಷಿತ್ ಮೊದಲಾದವರು ಉಪಸ್ಥಿತರಿದ್ದರು. ಶಕ್ತಿಕೇಂದ್ರದ ಪ್ರಮುಖ್ ಕೇಶವ ಅಚ್ಚಿನಡ್ಕ ಸ್ವಾಗತಿಸಿ, ಮನವಿ ವಾಚಿಸಿದರು.

Related posts

ಪದ್ಮನಾಭ ಮಾಣಿಂಜ ನಿಧನಕ್ಕೆ ಕನ್ಯಾಡಿ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಸಂತಾಪ

Suddi Udaya

ಕೊಕ್ರಾಡಿ ಶಾಲೆಯಲ್ಲಿ ಪರಿಸರ ಜಾಗೃತಿ ಮಾಹಿತಿ, ಗಿಡ ನಾಟಿ ಕಾರ್ಯಕ್ರಮ

Suddi Udaya

ಹಿಂದೂ ಸಂರಕ್ಷಣಾ ಯಾತ್ರೆ ಬಗ್ಗೆ ಹಾಕಿದ ಎರಡು ಬ್ಯಾನರ್ ಹರಿದ ಕಿಡಿಗೇಡಿಗಳು

Suddi Udaya

ಆ.15: ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ‘ವಿಜ್ಞಾನ – ವಿಸ್ಮಯ ಮತ್ತು ಕುತೂಹಲ’ – ವಿಮರ್ಶಾ ಕಾರ್ಯಾಗಾರ

Suddi Udaya

ಕು.ಸೌಜನ್ಯಳ ಮನೆಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರ ಭೇಟಿ

Suddi Udaya

ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ನಾಮನಿರ್ದೇಶಿತ ಸದಸ್ಯರಿಂದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ, ಅಭಿನಂದನೆ

Suddi Udaya
error: Content is protected !!