ಗುರುವಾಯನಕೆರೆ: ರಾಜ್ಯಕಾಂಗ್ರೆಸ್ ಸರಕಾರದ ಜನ ವಿರೋಧಿ ನೀತಿಯನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿ ಕರೆಕೊಟ್ಟ ಪ್ರತಿಭಟನೆಯ ಭಾಗವಾಗಿ ಜೂ.23ರಂದು ಕುವೆಟ್ಟು ಗ್ರಾಮ ಪಂಚಾಯತ್ ಎದುರು ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಯನ್ನು ಉದ್ದೇಶಿಸಿ ಗ್ರಾ.ಪಂ ಅಧ್ಯಕ್ಷೆ ಭಾರತಿ ಎಸ್. ಶೆಟ್ಟಿಯವರು ಮಾತನಾಡಿ, ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರದ ದುರಾಡಳಿತ ನೀತಿಯನ್ನು ಭಾರತೀಯ ಜನತಾ ಪಾರ್ಟಿ ತೀವ್ರವಾಗಿ ಖಂಡಿಸುತ್ತದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಕುವೆಟ್ಟು ಗ್ರಾಮದ ಶಕ್ತಿ ಕೇಂದ್ರಗಳ ಅಧ್ಯಕ್ಷರಾದ, ಚಂದ್ರಹಾಸ್ ದಾಸ್, ರಾಜಪ್ರಕಾಶ್ ಶೆಟ್ಟಿ ಪ್ರಭಾರಿ ಬಾಲಕೃಷ್ಣ ಬಿರ್ಮೋಟ್, ವಿಠಲ ಆಚಾರ್ಯ, ಉಮೇಶ್ ಕುಲಾಲ್, ವಸಂತ ಮಠ, ಗ್ರಾ.ಪಂ ಉಪಾಧ್ಯಕ್ಷರಾದ ಗಣೇಶ್ ಕೆ. ಪಂಚಾಯತ್ ಸದಸ್ಯರು, ಪಕ್ಷದ ಕಾರ್ಯಕರ್ತರು, ಹಾಗೂ ಪ್ರಮುಖರು ಭಾಗವಹಿಸಿದರು. ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿಗಳ ವಿರುದ್ಧ ನೂರಾರು ಸಂಖ್ಯೆಯಲ್ಲಿ ಸೇರಿದ ಕಾರ್ಯಕರ್ತರು, ಘೋಷಣೆ ಕೂಗಿ ಪ್ರತಿಭಟಸಿದರು.
ರಾಜ್ಯಪಾಲರಿಗೆ ಮನವಿಯನ್ನು ಪಂಚಾಯತ್ ಕಾರ್ಯದರ್ಶಿಯವರ ಮುಖಾಂತರ ಸಲ್ಲಿಸಸಲಾಯಿತು.











