September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರತಿಭಟನೆ

ರಾಜ್ಯ ಸರ್ಕಾರದ ಜನವಿರೋಧಿ ನೀತಿಯನ್ನು ವಿರೋಧಿಸಿ ಕುವೆಟ್ಟು ಗ್ರಾಮ ಪಂಚಾಯತ್ ಎದುರು ಪ್ರತಿಭಟನೆ

ಗುರುವಾಯನಕೆರೆ: ರಾಜ್ಯಕಾಂಗ್ರೆಸ್ ಸರಕಾರದ ಜನ ವಿರೋಧಿ ನೀತಿಯನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿ ಕರೆಕೊಟ್ಟ ಪ್ರತಿಭಟನೆಯ ಭಾಗವಾಗಿ ಜೂ.23ರಂದು ಕುವೆಟ್ಟು ಗ್ರಾಮ ಪಂಚಾಯತ್ ಎದುರು ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.


ಪ್ರತಿಭಟನೆಯನ್ನು ಉದ್ದೇಶಿಸಿ ಗ್ರಾ.ಪಂ ಅಧ್ಯಕ್ಷೆ ಭಾರತಿ ಎಸ್. ಶೆಟ್ಟಿಯವರು ಮಾತನಾಡಿ, ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರದ ದುರಾಡಳಿತ ನೀತಿಯನ್ನು ಭಾರತೀಯ ಜನತಾ ಪಾರ್ಟಿ ತೀವ್ರವಾಗಿ ಖಂಡಿಸುತ್ತದೆ ಎಂದು ಹೇಳಿದರು.


ಈ ಸಂದರ್ಭದಲ್ಲಿ ಕುವೆಟ್ಟು ಗ್ರಾಮದ ಶಕ್ತಿ ಕೇಂದ್ರಗಳ ಅಧ್ಯಕ್ಷರಾದ, ಚಂದ್ರಹಾಸ್ ದಾಸ್, ರಾಜಪ್ರಕಾಶ್ ಶೆಟ್ಟಿ ಪ್ರಭಾರಿ ಬಾಲಕೃಷ್ಣ ಬಿರ್ಮೋಟ್, ವಿಠಲ ಆಚಾರ್ಯ, ಉಮೇಶ್ ಕುಲಾಲ್, ವಸಂತ ಮಠ, ಗ್ರಾ.ಪಂ ಉಪಾಧ್ಯಕ್ಷರಾದ ಗಣೇಶ್ ಕೆ. ಪಂಚಾಯತ್ ಸದಸ್ಯರು, ಪಕ್ಷದ ಕಾರ್ಯಕರ್ತರು, ಹಾಗೂ ಪ್ರಮುಖರು ಭಾಗವಹಿಸಿದರು. ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿಗಳ ವಿರುದ್ಧ ನೂರಾರು ಸಂಖ್ಯೆಯಲ್ಲಿ ಸೇರಿದ ಕಾರ್ಯಕರ್ತರು, ಘೋಷಣೆ ಕೂಗಿ ಪ್ರತಿಭಟಸಿದರು.

ರಾಜ್ಯಪಾಲರಿಗೆ ಮನವಿಯನ್ನು ಪಂಚಾಯತ್ ಕಾರ್ಯದರ್ಶಿಯವರ ಮುಖಾಂತರ ಸಲ್ಲಿಸಸಲಾಯಿತು.

Related posts

ಯುವ ಸಾಹಿತಿ ಚಂದ್ರಹಾಸ ಕುಂಬಾರ ಬಂದಾರು ಇವರಿಗೆ ವರ್ಲ್ಡ್ ಪ್ರೆಸ್ ಬುಕ್ ಆಫ್ ರೆಕಾರ್ಡ್ ವಿಶ್ವ ದಾಖಲೆ ಗೌರವ

Suddi Udaya

ಎಸ್ ಡಿ ಎಮ್ ವಸತಿ ಪಿ ಯು ಕಾಲೇಜಿನ ವಿದ್ಯಾರ್ಥಿಗಳಿಂದ ಡ್ರಾಗನ್ ತೋಟಕ್ಕೆ ಶಿಕ್ಷಣ ಪ್ರವಾಸ

Suddi Udaya

ವೇಣೂರು: ಮಜಲಡ್ಡ ನಿವಾಸಿ ಚೆನ್ನಪ್ಪ ಪೂಜಾರಿ ನಿಧನ

Suddi Udaya

ಮೈಸೂರು ಜಿಲ್ಲಾ ನ್ಯಾಯಾಲಯದ ನೋಟರಿಗಳ ಕಟ್ಟಡಕ್ಕೆ ಶಂಕುಸ್ಥಾಪನೆ

Suddi Udaya

ನಿಡಿಗಲ್ ಹೊಸ ಸೇತುವೆ ಬಳಿ ಕಸ ಹಾಕಿದವರಿಂದಲೇ ಕಸ ವಿಲೇವಾರಿ ಮಾಡಿಸಿ ದಂಡ ವಿಧಿಸಿದ ಮುಂಡಾಜೆ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಗಾಯತ್ರಿ ಪಿ ಅವರ ಕೆಲಸಕ್ಕೆ ಸಾರ್ವಜನಿಕರಿಂದ ಶ್ಲಾಘನೆ

Suddi Udaya

ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya
error: Content is protected !!