ಚಾರ್ಮಾಡಿ : ರಾಜ್ಯ ಸರ್ಕಾರ ದ ಜನ ವಿರೋಧಿ ನೀತಿ ಖಂಡಿಸಿ ಚಾರ್ಮಾಡಿ ಗ್ರಾಮ ಪಂಚಾಯತ್ ನಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.
ಸರ್ಕಾರದ ಜನ ವಿರೋಧಿ ನೀತಿ ಖಂಡಿಸಿ ಬಿಜೆಪಿ ಮಂಡಲ ಉಪಾಧ್ಯಕ್ಷ ಕೊರಗಪ್ಪ ಗೌಡ, ಚಾರ್ಮಾಡಿ ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದರು. ಗ್ರಾಮ ಪಂಚಾಯತ್ ಅಧ್ಯಕ್ಷೆ ಶಾರದಾ, ಬಿಜೆಪಿ ಮಂಡಲ ಉಪಾಧ್ಯಕ್ಷ ಚನ್ನಕೇಶವ ಅರಸಮಜಲು, ಮಾಜಿ ತಾಲ್ಲೂಕು ಪಂಚಾಯತ್ ಸದಸ್ಯರ ಅಶೋಕ್ ಜೈನ್, ಶಕ್ತಿ ಕೇಂದ್ರ ಪ್ರಮುಖರುಗಳಾದ ಗಣೇಶ್ ಕೋಟ್ಯಾನ್ ಚಾರ್ಮಾಡಿ, ಓಬಯ್ಯ ಗೌಡ, ತೋಟತ್ತಾಡಿ ರಾಘವ ಗೌಡ ಕುಡುಮಡ್ಕ, ತಾಲ್ಲೂಕು ರೈತ ಮೋರ್ಚಾ ದಿವಿನೇಶ್, ಚಾರ್ಮಾಡಿ ತಾಲ್ಲೂಕು ಯುವಮೋರ್ಚಾ ಸುಧೀರ್, ಚಾರ್ಮಾಡಿ ಹಾಲು ಉತ್ಪಾದಕ ಸಂಘದ ನಿರ್ದೇಶಕರು, ಸಹಕಾರಿ ಸಂಘದ ನಿರ್ದೇಶಕರು, ಗ್ರಾಮ ಪಂಚಾಯತ್ ಸದಸ್ಯರು, ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.











