30 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೇಣೂರು: ಧೀಮಹಿ ಸನಾತನ ಪ್ರತಿಷ್ಠಾನದಿಂದ ಯಕ್ಷಗಾನ ಹಿಮ್ಮೇಳ  ತರಗತಿ ಆರಂಭ

ವೇಣೂರು: ವೇಣೂರಿನ ಮಹಾವೀರ ನಗರದಲ್ಲಿ ಇರುವ ಧೀಮಹಿ ಸನಾತನ ಪ್ರತಿಷ್ಠಾನದಿಂದ ನಡೆಸಲ್ಪಡುವ ಯಕ್ಷಗಾನ ಹಿಮ್ಮೇಳ  ತರಗತಿಯ ಉದ್ಘಾಟನೆಯನ್ನು ಮಾತೃಶ್ರೀ ಗೌರಮ್ಮನವರು ದೀಪ ಪ್ರಜ್ವಲಿಸುವ ಮೂಲಕ ಜೂ.22 ರಂದು ನೆರವೇರಿಸಿದರು.

ಧೀಮಹಿ ಸನಾತನ ಪ್ರತಿಷ್ಠಾನದ ಧ್ಯೇಯೋದ್ದೇಶಗಳನ್ನು ಪ್ರಸ್ತಾವಿಕ ನುಡಿಯಲ್ಲಿ ಸಂಚಾಲಕರಾದ ಯಜ್ಞನಾರಾಯಣ ಭಟ್ ವಿವರಿಸಿದರು. ಮುಖ್ಯ ಅತಿಥಿಗಳಾಗಿ ವೇಣೂರು ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಪಂಜಾಲಬೈಲು ಎನ್. ಪುರುಷೋತ್ತಮ ರಾವ್, ಭಾಸ್ಕರ ಪೈ ಹಾಗೂ ವೇಣೂರು ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಪಾಣೂರು ಅಶೋಕ ಅವರು ಶುಭ ಹಾರೈಸಿದರು.


ಯಕ್ಷಗಾನ ತರಗತಿಯ ಗುರುಗಳಾಗಿ ಖ್ಯಾತ ಹಿಮ್ಮೇಳವಾದಕ ಕೊಂಕಣಾಜೆ ಚಂದ್ರಶೇಖರ ಭಟ್ ಅವರು ಬೋಧನಾ ಕ್ರಮದ ಬಗ್ಗೆ ಪರಿಚಯಿಸಿದರು. ರವಿಶಂಕರ ಭಟ್ ಬೆದ್ರಡ್ಕ ವಂದಿಸಿದರು. ಜಗನ್ನಾಥ ದೇವಾಡಿಗ ಹಂದೇವು ಕಾರ್ಯಕ್ರಮ ನಿರೂಪಿಸಿದರು.

ವೇಣೂರು ಸುತ್ತಮುತ್ತಲಿನ ನೂರಕ್ಕೂ ಅಧಿಕ ಯಕ್ಷಭಿಮಾನಿಗಳು ನೆರೆದಿದ್ದರು. ಹಿಮ್ಮೇಳ ಕಲಿಯಲು ಆಸಕ್ತರು ಕೊಂಕಣಾಜೆ ಚಂದ್ರಶೇಖರ ಭಟ್ಟರನ್ನು 91 90081 36127 ಸಂಪರ್ಕಿಸಬಹುದು.

Related posts

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಅನ್ವೇಷಣ್’

Suddi Udaya

ಜನರ ಸುರಕ್ಷಿತ ದೃಷ್ಟಿಯಿಂದ ಗುರುವಾಯನಕೆರೆ- ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಇನ್ನುಳಿದ ರಸ್ತೆ ಡಾಮರೀಕರಣಕ್ಕೆ ನಮ್ಮ ಪ್ರಯತ್ನ ನಿರಂತರ :ಪತ್ರಿಕಾಗೋಷ್ಠಿಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಹೇಳಿಕೆ

Suddi Udaya

ಉಜಿರೆ: ಕುಂಜರ್ಪ ನಿವಾಸಿ ತಿಮ್ಮಪ್ಪ ಪೂಜಾರಿ ನಿಧನ

Suddi Udaya

ಹೊಸಪಟ್ಣ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಶಿಶಿಲ: ಶ್ರೀ ವನದುರ್ಗಾ ಕೃಪಾಶ್ರಿತ ಸಂಚಾರಿ ನಡುಮನೆ ಯಕ್ಷಗಾನ ಚಿಕ್ಕ ಮೇಳ ತಿರುಗಾಟ ಆರಂಭ

Suddi Udaya

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿಗೆ ತಾ.ಪಂ ಇಓ ಭೇಟಿ, ಸ್ಥಳ ಪರಿಶೀಲನೆ

Suddi Udaya
error: Content is protected !!