25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೇಣೂರು: ಧೀಮಹಿ ಸನಾತನ ಪ್ರತಿಷ್ಠಾನದಿಂದ ಯಕ್ಷಗಾನ ಹಿಮ್ಮೇಳ  ತರಗತಿ ಆರಂಭ

ವೇಣೂರು: ವೇಣೂರಿನ ಮಹಾವೀರ ನಗರದಲ್ಲಿ ಇರುವ ಧೀಮಹಿ ಸನಾತನ ಪ್ರತಿಷ್ಠಾನದಿಂದ ನಡೆಸಲ್ಪಡುವ ಯಕ್ಷಗಾನ ಹಿಮ್ಮೇಳ  ತರಗತಿಯ ಉದ್ಘಾಟನೆಯನ್ನು ಮಾತೃಶ್ರೀ ಗೌರಮ್ಮನವರು ದೀಪ ಪ್ರಜ್ವಲಿಸುವ ಮೂಲಕ ಜೂ.22 ರಂದು ನೆರವೇರಿಸಿದರು.

ಧೀಮಹಿ ಸನಾತನ ಪ್ರತಿಷ್ಠಾನದ ಧ್ಯೇಯೋದ್ದೇಶಗಳನ್ನು ಪ್ರಸ್ತಾವಿಕ ನುಡಿಯಲ್ಲಿ ಸಂಚಾಲಕರಾದ ಯಜ್ಞನಾರಾಯಣ ಭಟ್ ವಿವರಿಸಿದರು. ಮುಖ್ಯ ಅತಿಥಿಗಳಾಗಿ ವೇಣೂರು ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಪಂಜಾಲಬೈಲು ಎನ್. ಪುರುಷೋತ್ತಮ ರಾವ್, ಭಾಸ್ಕರ ಪೈ ಹಾಗೂ ವೇಣೂರು ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಪಾಣೂರು ಅಶೋಕ ಅವರು ಶುಭ ಹಾರೈಸಿದರು.


ಯಕ್ಷಗಾನ ತರಗತಿಯ ಗುರುಗಳಾಗಿ ಖ್ಯಾತ ಹಿಮ್ಮೇಳವಾದಕ ಕೊಂಕಣಾಜೆ ಚಂದ್ರಶೇಖರ ಭಟ್ ಅವರು ಬೋಧನಾ ಕ್ರಮದ ಬಗ್ಗೆ ಪರಿಚಯಿಸಿದರು. ರವಿಶಂಕರ ಭಟ್ ಬೆದ್ರಡ್ಕ ವಂದಿಸಿದರು. ಜಗನ್ನಾಥ ದೇವಾಡಿಗ ಹಂದೇವು ಕಾರ್ಯಕ್ರಮ ನಿರೂಪಿಸಿದರು.

ವೇಣೂರು ಸುತ್ತಮುತ್ತಲಿನ ನೂರಕ್ಕೂ ಅಧಿಕ ಯಕ್ಷಭಿಮಾನಿಗಳು ನೆರೆದಿದ್ದರು. ಹಿಮ್ಮೇಳ ಕಲಿಯಲು ಆಸಕ್ತರು ಕೊಂಕಣಾಜೆ ಚಂದ್ರಶೇಖರ ಭಟ್ಟರನ್ನು 91 90081 36127 ಸಂಪರ್ಕಿಸಬಹುದು.

Related posts

ಬಸ್ ಸಮಸ್ಯೆ: ಜುಲೈ 1ರಂದು ಬೆಳ್ತಂಗಡಿಯಲ್ಲಿ ಶಾಸಕರಿಂದ ಜನಸ್ಪಂದನ ಕಾರ್ಯಕ್ರಮ: ಸಾವ೯ಜನಿಕ ಅಹವಾಲು ಸ್ವೀಕಾರ ಮತ್ತು ಮಾಹಿತಿ ಕಾರ್ಯಕ್ರಮ

Suddi Udaya

ರಾಜ್ಯಮಟ್ಟದ ‘ಎಸ್.ಡಿ.ಎಂ ಉದ್ಯೋಗಂ – 2026’ ಗೆ ಚಾಲನೆ

Suddi Udaya

ಕೊಕ್ಕಡ: ಕಲಾಯಿ ನಿವಾಸಿ ತಿಮ್ಮಪ್ಪ ಗೌಡ ನಿಧನ

Suddi Udaya

ಧರೆಗೆ ಡಿಕ್ಕಿ ಹೊಡೆದ ಖಾಸಗಿ ಬಸ್ಸು: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಮೃತ್ಯು

Suddi Udaya

ಮಾಲಾಡಿ : ಗ್ರಾಮ ಪಂಚಾಯತಿನ ದ್ವಿತೀಯ ಸುತ್ತಿನ ಗ್ರಾಮ ಸಭೆ

Suddi Udaya

ಬೆಳ್ತಂಗಡಿ ತಾಲೂಕು ಕಚೇರಿಯಲ್ಲಿ ಸಿಬ್ಬಂದಿ ಕೊರತೆ: ಕಂದಾಯ ಸಚಿವರಿಗೆ ರಕ್ಷಿತ್ ಶಿವರಾಂ ಮನವಿ

Suddi Udaya
error: Content is protected !!