July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೇಣೂರು: ಧೀಮಹಿ ಸನಾತನ ಪ್ರತಿಷ್ಠಾನದಿಂದ ಯಕ್ಷಗಾನ ಹಿಮ್ಮೇಳ  ತರಗತಿ ಆರಂಭ

ವೇಣೂರು: ವೇಣೂರಿನ ಮಹಾವೀರ ನಗರದಲ್ಲಿ ಇರುವ ಧೀಮಹಿ ಸನಾತನ ಪ್ರತಿಷ್ಠಾನದಿಂದ ನಡೆಸಲ್ಪಡುವ ಯಕ್ಷಗಾನ ಹಿಮ್ಮೇಳ  ತರಗತಿಯ ಉದ್ಘಾಟನೆಯನ್ನು ಮಾತೃಶ್ರೀ ಗೌರಮ್ಮನವರು ದೀಪ ಪ್ರಜ್ವಲಿಸುವ ಮೂಲಕ ಜೂ.22 ರಂದು ನೆರವೇರಿಸಿದರು.

ಧೀಮಹಿ ಸನಾತನ ಪ್ರತಿಷ್ಠಾನದ ಧ್ಯೇಯೋದ್ದೇಶಗಳನ್ನು ಪ್ರಸ್ತಾವಿಕ ನುಡಿಯಲ್ಲಿ ಸಂಚಾಲಕರಾದ ಯಜ್ಞನಾರಾಯಣ ಭಟ್ ವಿವರಿಸಿದರು. ಮುಖ್ಯ ಅತಿಥಿಗಳಾಗಿ ವೇಣೂರು ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಪಂಜಾಲಬೈಲು ಎನ್. ಪುರುಷೋತ್ತಮ ರಾವ್, ಭಾಸ್ಕರ ಪೈ ಹಾಗೂ ವೇಣೂರು ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಪಾಣೂರು ಅಶೋಕ ಅವರು ಶುಭ ಹಾರೈಸಿದರು.


ಯಕ್ಷಗಾನ ತರಗತಿಯ ಗುರುಗಳಾಗಿ ಖ್ಯಾತ ಹಿಮ್ಮೇಳವಾದಕ ಕೊಂಕಣಾಜೆ ಚಂದ್ರಶೇಖರ ಭಟ್ ಅವರು ಬೋಧನಾ ಕ್ರಮದ ಬಗ್ಗೆ ಪರಿಚಯಿಸಿದರು. ರವಿಶಂಕರ ಭಟ್ ಬೆದ್ರಡ್ಕ ವಂದಿಸಿದರು. ಜಗನ್ನಾಥ ದೇವಾಡಿಗ ಹಂದೇವು ಕಾರ್ಯಕ್ರಮ ನಿರೂಪಿಸಿದರು.

ವೇಣೂರು ಸುತ್ತಮುತ್ತಲಿನ ನೂರಕ್ಕೂ ಅಧಿಕ ಯಕ್ಷಭಿಮಾನಿಗಳು ನೆರೆದಿದ್ದರು. ಹಿಮ್ಮೇಳ ಕಲಿಯಲು ಆಸಕ್ತರು ಕೊಂಕಣಾಜೆ ಚಂದ್ರಶೇಖರ ಭಟ್ಟರನ್ನು 91 90081 36127 ಸಂಪರ್ಕಿಸಬಹುದು.

Related posts

ಜೆಇಇ, ಬಿ ಆರ್ಕ್ ಫಲಿತಾಂಶ: ಎಕ್ಸೆಲ್ ನ ಸುಪ್ರೀತ್ ಎಂ ಬಡಿಗೇರ ಜಿಲ್ಲೆಗೆ ಪ್ರಥಮ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋ. ಬಿ.ಸಿ ಟ್ರಸ್ಟ್ ಸಿಡ್ಬಿ ಪ್ರಯಾಸ ಸ್ವ ಉದ್ಯೋಗ ಕ್ಕೆ 1ಕೋಟಿ ಪ್ರಗತಿ ನಿಧಿ ಮಜೂರಾತಿ ವಿತರಣೆ

Suddi Udaya

ಸುಲ್ಕೇರಿ ಗ್ರಾ.ಪಂ ನಲ್ಲಿ ವಿಶೇಷ ಚೇತನರ ಸಮನ್ವಯ ಸಭೆ

Suddi Udaya

ಧರ್ಮಸ್ಥಳ: ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಸಂಭ್ರಮ: ಪ್ರಧಾನಮಂತ್ರಿ, ಉಪರಾಷ್ಟ್ರಪತಿ ಹಾಗೂ ವಿವಿಧ ಗಣ್ಯರಿಂದ ಶುಭಾಶಯ

Suddi Udaya

ಉಜಿರೆ ಗ್ರಾ.ಪಂ. ನಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ

Suddi Udaya

ಮಾ.7-8: ಆದಿಪಜಿರಡ್ಕ ಶ್ರೀ ದೇವಲಿಂಗೇಶ್ವರ ದೇವಸ್ಥಾನದಲ್ಲಿ ಶತರುದ್ರ ಪಾರಾಯಣ, ರುದ್ರಯಾಗ ಮತ್ತು ಶ್ರೀ ಸತ್ಯನಾರಾಯಣ ಪೂಜೆ

Suddi Udaya
error: Content is protected !!