25.5 C
ಪುತ್ತೂರು, ಬೆಳ್ತಂಗಡಿ
April 24, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ, 28ನೇ ವರ್ಷದ ಸಾಮೂಹಿಕ ಶ್ರೀ ಗೌರಿ ಪೂಜೆ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಚನೆ- ಪೂರ್ವಭಾವಿ ಸಭೆ

ಉಜಿರೆ: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಹಾಗೂ ಸಾರ್ವಜನಿಕ ಗಣೇಶೋತ್ಸವ ಸಮಿತಿ ವತಿಯಿಂದ ನಡೆಯುವ 28ನೇ ವರ್ಷದ ಸಾಮೂಹಿಕ ಶ್ರೀ ಗೌರಿ ಪೂಜೆ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವದ ವಿವಿಧ ಸಮಿತಿ ರಚನೆ ಹಾಗೂ ಪೂರ್ವಭಾವಿ ಸಭೆಯು ಜೂ.22ರಂದು ಉಜಿರೆಯ ಕುಂಜರ್ಪದಲ್ಲಿ ನಡೆಯಿತು.

28ನೇ ವರ್ಷದ ಸಾಮೂಹಿಕ ಶ್ರೀ ಗೌರಿ ಪೂಜೆ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಚಂದ್ರಶೇಖರ್ ಶೆಟ್ಟಿ ಬಿಲ್ಲರೋಡಿ, ಕಾರ್ಯದರ್ಶಿಯಾಗಿ ಅಶೋಕ್, ಕೋಶಾಧಿಕಾರಿಯಾಗಿ ಅಶ್ವಥ್ ರವರನ್ನು ಆಯ್ಕೆ ಮಾಡಲಾಯಿತು.

ಉಪಾಧ್ಯಕ್ಷರುಗಳಾಗಿ ನಿರಂಜನ್ ಕಡಂಬು, ಕಿಶೋರ್ ಪೆರ್ಲ, ಸುದೇಶ್ ಕುಂಟಿನಿ, ಸಚಿನ್ ಕಲ್ಲೆ, ಸಂತೋಷ್ ವೇಣೂರು, ದಿನೇಶ್ ನಾವೂರ, ಬೊಮ್ಮಯ್ಯ, ಲಿಂಗಪ್ಪ, ಜಯಂತ್ ಬಂಗೇರ ನಿಡ್ಲೆ, ಮಹೇಶ್ ಅತ್ರೋಡಿ, ಲಿವೀಶ್ ಚಂದ್ರ, ಜೊತೆ ಕಾರ್ಯದರ್ಶಿಯಾಗಿ ಸೃಜನ್ ಕುಂಜರ್ಪ, ವಿಕ್ಕಿ ಶೆಟ್ಟಿ,ಮನು ಮನ್ನಡ್ಕ, ಸೃಜನ್ ಪಜಿರಡ್ಕ ಪ್ರಮೋದ್ ವಿವೇಕಾನಂದ ನಗರ, ಸದಾಶಿವ ಆಯ್ಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ರಾಷ್ಟೀಯ ಹಿಂದೂ ಜಾಗರಣ ವೇದಿಕೆಯ ಸಂಸ್ಥಾಪಕ ಮಹೇಶ್ ಶೆಟ್ಟಿ ತಿಮರೋಡಿ, ಗೌರವಾಧ್ಯಕ್ಷ ಹರೀಶ್ ಕುಮಾರ್ ಬರಮೇಲು, ಅಧ್ಯಕ್ಷ ಅನಿಲ್ ಕುಮಾರ್ ಅಂತರ, ಸಂಚಾಲಕ ಮನೋಜ್ ಕುಮಾರ್, ಶಿಲ್ಪಿ ವೆಂಕಟೇಶ್ ಕಾಶಿಬೆಟ್ಟು, ಉಮೇಶ್ ಅತ್ತಾಜೆ, ಪ್ರಶಾಂತ್ ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಉಪಸ್ಥಿತರಿದ್ದರು.

ಅನಿಲ್ ಕುಮಾರ್ ಅಂತರ 2024ನೇ ಸಾಲಿನ ಆಯ-ವ್ಯಯ ವೆಚ್ಚವನ್ನು ಮಂಡಿಸಿದರು. ಕಿಶೋರ್ ಪೆರ್ಲ ಸ್ವಾಗತಿಸಿ ವಂದಿಸಿದರು.

Related posts

ಕೊಕ್ಕಡ ಸೇವಾ ಮಂದಿರದಲ್ಲಿ ಬೇಸಿಗೆ ಶಿಬಿರದ ಸಮಾರೋಪ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಮತ್ತು ಲಯನ್ಸ್ ಕ್ಲಬ್ ಬೆಳ್ತಂಗಡಿಯ ವತಿಯಿಂದ ದೀಪಾವಳಿ ಸಂಭ್ರಮ

Suddi Udaya

ಬಳಂಜ ಗ್ರಾ.ಪಂ. ನ ಅಭಿವೃದ್ಧಿಯ ಓಟಕ್ಕೆ ಒಲಿದ ಪ್ರತಿಷ್ಠಿತ ಗಾಂಧಿ ಪುರಸ್ಕಾರ: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವ ಕುಮಾರ್,ಸಚಿವ ಪ್ರಿಯಾಂಕ್ ಖರ್ಗೆರವರಿಂದ ಪ್ರಶಸ್ತಿ ಪ್ರದಾನ

Suddi Udaya

ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಗೂಡ್ಸ್ ಟೆಂಪೋ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಜು.25: ಹಾಲು ಹೆಚ್ಚಳ ಮತ್ತು ಹೈನುಗಾರಿಕಾ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!