25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಣಿಯೂರು ಗ್ರಾಮ ಪಂಚಾಯತ್ ಮುಂದೆ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

ಕಣಿಯೂರು: ಭಾರತೀಯ ಜನತಾ ಪಾರ್ಟಿ ಕಣಿಯೂರು ಮತ್ತು ಉರುವಾಲು ಶಕ್ತಿ ಕೇಂದ್ರ ದ ವತಿಯಿಂದ ಕರ್ನಾಟಕ ದ ಕಾಂಗ್ರೇಸ್ ಸರಕಾರದ ಜನವಿರೋಧಿ ನೀತಿ ಮತ್ತು ಎಲ್ಲಾ ರೀತಿಯ ಬೆಲೆ ಏರಿಕೆ ವಿರೋಧಿಸಿ ಕಣಿಯೂರು ಗ್ರಾಮ ಪಂಚಾಯತ್ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು.

ಪ್ರತಿಭಟನೆಯಲ್ಲಿ ಸೇರಿದ್ದ ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದರು..

ಪ್ರತಿಭಟನೆಯಲ್ಲಿ ಬಿಜೆಪಿ ಹಿರಿಯ ಮುಖಂಡರಾದ ಶಾರದಾ ಆರ್ ರೈ, ವಿಜಯ ಕುಮಾರ್ ಕಳ್ಳಲಿಕೆ, ಬಿಜೆಪಿ ಕಣಿಯೂರು ಮಹಾಶಕ್ತಿ ಕೇಂದ್ರ ದ ಕಾರ್ಯದರ್ಶಿ ಮಹೇಶ್ ಜೇಂಖ್ಯಾರು, ಕಣಿಯೂರು ಗ್ರಾಮ ಪಂಚಾಯತ್ ಅಧ್ಯಕ್ಷ ಸೀತಾರಾಮ ಮಡಿವಾಳರವರು ಸರ್ಕಾರದ ಜನ ವಿರೋಧಿ ನೀತಿಯ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದರು.

ಪ್ರತಿಭಟನೆ ಬಳಿಕ ಪಿ ಡಿ ಒ ಮೂಲಕ ರಾಜ್ಯ ಪಾಲರಿಗೆ ಮನವಿ ಸಲ್ಲಿಸಲಾಯಿತು.

ಪ್ರತಿಭಟನೆಯಲ್ಲಿ ಬಿಜೆಪಿ ಕಣಿಯೂರು ಶಕ್ತಿ ಕೇಂದ್ರ ಪ್ರಮುಖ್ ಯತೀಶ್ ಶೆಟ್ಟಿ ಪನೆಕ್ಕರ, ಉರುವಾಲು ಶಕ್ತಿ ಕೇಂದ್ರ ಪ್ರಮುಖ್ ಕೃಷ್ಣ ಪ್ರಸಾದ್, ಮಹಿಳಾ ಮೋರ್ಚಾ ಜಿಲ್ಲಾ ಕಾರ್ಯದರ್ಶಿ ಅಮಿತಾ ಕುಶಾಲಪ್ಪ ಗೌಡ, ಪದ್ಮುಂಜ ಸಿ ಎ ಬ್ಯಾಂಕ್ ಅಧ್ಯಕ್ಷ ರಕ್ಷಿತ್ ಪನೆಕ್ಕರ, ತಣ್ಣೀರುಪOತ ಸಿ ಎ ಬ್ಯಾಂಕ್ ಉಪಾಧ್ಯಕ್ಷ ಸುನಿಲ್ ಅನಾವು, ಕಣಿಯೋರು ಗ್ರಾಮ ಪಂಚಾಯ್ತ್ ಉಪಾಧ್ಯಕ್ಷೆ ಜಾನಕಿ ಪಿಂಡಿವನ, ಪಂಚಾಯತ್ ಮಾಜಿ ಅಧ್ಯಕ್ಷೆ ಗಾಯತ್ರಿ ಗೌಡ, ಪದ್ಮುಂಜ ಮಿಲ್ಕ್ ಸೊಸೈಟಿ ಅಧ್ಯಕ್ಷ ಪುರುಷೋತ್ತಮ್ ಗೌಡ ಸೇರಿದಂತೆ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ, ಕಾರ್ಯದರ್ಶಿ, ಪಂಚಾಯತ್ ಸದಸ್ಯರು ಸಹಕಾರಿ ಸಂಘ ಗಳ ನಿರ್ದೇಶಕರು ಸೇರಿದಂತೆ ಅನೇಕ ಕಾರ್ಯಕರ್ತರು ಪ್ರತಿಭಟನೆ ಯಲ್ಲಿ ಭಾಗವಹಿಸಿದರು.

Related posts

ಬೆಳ್ತಂಗಡಿ ಲಿಯೋ ಕ್ಲಬ್ ಗೆ ‘ಉದಯೋನ್ಮುಖ ನಕ್ಷತ್ರ’ ಅವಾರ್ಡ್

Suddi Udaya

ಆಟೋ ಚಾಲಕ ಯಶೋಧರ ಗೌಡ ಅಸೌಖ್ಯದಿಂದ ನಿಧನ

Suddi Udaya

ಗೇರುಕಟ್ಟೆ ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಈದುಲ್ ಫಿತರ್: ಖತೀಬರಾದ ತಾಜುದ್ದೀನ್ ಸಖಾಫಿರಿಗೆ ಬೀಳ್ಕೊಡುಗೆ

Suddi Udaya

ಕಡಿರುದ್ಯಾವರದಲ್ಲಿ ಒಂಟಿ ಸಲಗ ಹಾವಳಿ

Suddi Udaya

ಕೊಯ್ಯೂರು ಸ.ಪ್ರೌ. ಶಾಲೆಯಲ್ಲಿ ಸ್ವಾತಂತ್ರ್ಯ ಪೂರ್ವ ಮತ್ತು ನಂತರದ ದಿನಗಳ ಛಾಯಾಚಿತ್ರ ಹಾಗೂ ಸಾಕ್ಷ್ಯಚಿತ್ರಗಳ ಪ್ರದರ್ಶನ

Suddi Udaya

ರಜತ ಸಂಭ್ರಮದಲ್ಲಿರುವ ಉಜಿರೆಯ ಬೆನಕ ಆಸ್ಪತ್ರೆಯ ವತಿಯಿಂದ ಮಹಾಮಂಡಲೇಶ್ವರರಾಗಿ ಪಟ್ಟಾಭಿಶಿಕ್ತರಾದ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಗೆ ಗೌರವಾರ್ಪಣೆ

Suddi Udaya
error: Content is protected !!