September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಲ್ಪತರು ನರ್ಸಿಂಗ್ ಸ್ಕೂಲ್ ನಲ್ಲಿ ಲ್ಯಾಂಪ್ ಲೈಟಿಂಗ್ ಮತ್ತು ಓಥ್ ಸಮಾರಂಭ

ಬೆಳ್ತಂಗಡಿ: ಬೆಳ್ತಂಗಡಿಯ ಕಲ್ಪತರು ನರ್ಸಿಂಗ್ ಸ್ಕೂಲ್ ಜೂ.23 ರಂದು ಶ್ರದ್ಧೆಯೊಂದಿಗೆ ಲ್ಯಾಂಪ್ ಲೈಟಿಂಗ್ ಮತ್ತು ಓಥ್ ಸಮಾರಂಭ ಆಚರಿಸಲಾಯಿತು.

ಮುಖ್ಯ ಅತಿಥಿಯಾಗಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಅತಿ ವಂದನೀಯ ಲಾರೆನ್ಸ್ ಮುಕ್ಕುಯಿ ಮಾತನಾಡಿ “ನೀವು ಇಂದು ಈ ದೀಪವನ್ನು ಹೊತ್ತಿರುವಷ್ಟೆ ಅಲ್ಲ, ರೋಗಿಗಳಿಗಾಗಿ ಪ್ರೀತಿಯ ದೀಪವನ್ನೂ ಬೆಳಗಿಸಲು ಕರೆಹೊಂದಿದವರು. ಈ ಸೇವೆಗೆ ಸಮರ್ಪಿತ ಮನಸ್ಸು ಅತ್ಯಗತ್ಯ. ಈ ದೀಪ ನಿಮ್ಮ ಜೀವನದ ದಿಕ್ಕನ್ನು ತೋರಿಸುವ ಬೆಳಕು ಆಗಲಿ” ಎಂದು ಆಶೀರ್ವದಿಸಿದರು.

ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಸಂಜಾತ್ , ಇತರ ಗಣ್ಯರು, ಶಿಕ್ಷಕವೃಂದ ಹಾಗೂ ವಿದ್ಯಾರ್ಥಿಗಳು ಸಮಾರಂಭದಲ್ಲಿ ಭಾಗವಹಿಸಿದರು.

ಕಾರ್ಯಕ್ರಮದಲ್ಲಿ ನರ್ಸಿಂಗ್ ವಿದ್ಯಾರ್ಥಿನಿಯರು ವಿದ್ಯೆಯ ದೀಪ ಬೆಳಗಿಸಿ ನರ್ಸಿಂಗ್ ಸೇವೆಗೆ ತಮ್ಮ ಪ್ರತಿಜ್ಞಾ ವಿಧಿಯನ್ನು ವಾಚಿಸಿದರು. ವಿದ್ಯಾರ್ಥಿಗಳಿಗೆ ಪೋಷಕರು, ಬಂಧುಮಿತ್ರರು ಹಾಗೂ ಶಿಕ್ಷಕರು ಹಾರೈಕೆ ಸಲ್ಲಿಸಿದರು. ಕಲ್ಪತರು ನರ್ಸಿಂಗ್ ಸ್ಕೂಲಿನ ಪ್ರಾಂಶುಪಾಲರಾದ ಶ್ರೀಮತಿ ಚಂದ್ರಿಕಾರವರು ಪ್ರತಿಜ್ಞೆಯನ್ನು ಹೇಳಿಕೊಟ್ಟರು.

Related posts

ಪಿಲಿಚಾಮುಂಡಿಕಲ್ಲು ದೊಂಪದಬಲಿ ಉತ್ಸವ ಸಮಿತಿಯ ನಿಕಟಪೂರ್ವ ಉಪಾಧ್ಯಕ್ಷ ವಿಶ್ವನಾಥ ಕೋಟ್ಯಾನ್ ನಿಧನ

Suddi Udaya

ಅಳದಂಗಡಿಯಲ್ಲಿ ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ 17 ಶಾಖೆ ಉದ್ಘಾಟನೆ ಸಜೀಪಮುನ್ನೂರು ಸಹಕಾರಿ ಸಂಘದಲ್ಲಿ ವಿವಿಧ ಸಾಲ ಸೌಲಭ್ಯ,ಠೇವಣಿ ಮೇಲಿನ ಆಕರ್ಷಕ ಬಡ್ಡಿ ದರಗಳು

Suddi Udaya

ಎಸ್.ಎಸ್.ಎಲ್.ಸಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿ ಅಭಿಷೇಕ್ ಗೆ ಬೆಳ್ತಂಗಡಿ ವಕೀಲರ ಸಂಘದಿಂದ ಸನ್ಮಾನ

Suddi Udaya

ಎಸ್. ಡಿ. ಎಂ ನ ನವೀಕೃತ ಡೀನ್ ಚೇಂಬರ್ ಗೆ ಚಾಲನೆ

Suddi Udaya

ಚಾರ್ಮಾಡಿ: ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಹೋಮಕುಂಡದ ಭೂಮಿ ಪೂಜೆ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಬ್ರಹ್ಮಾವರ ವಲಯ ಹಾಗೂ ರೋಟರಿ ಕ್ಲಬ್ ವತಿಯಿಂದ ಪ್ರತಿಷ್ಠಿತ ಛಾಯಾರತ್ನ ಪ್ರಶಸ್ತಿಗೆ ಉಮೇಶ್ ಮದ್ದಡ್ಕ ಆಯ್ಕೆ

Suddi Udaya
error: Content is protected !!