September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರತಿಭಟನೆ

ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿ ವಿರೋಧಿಸಿ ಕಡಿರುದ್ಯಾವರ ಗ್ರಾ.ಪಂ. ನಲ್ಲಿ ಪ್ರತಿಭಟನೆ

ಕಡಿರುದ್ಯಾವರ : ರಾಜ್ಯ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿ ಖಂಡಿಸಿ ಕಡಿರುದ್ಯಾವರ ಬಿಜೆಪಿ ಘಟಕದಿಂದ ಕಡಿರುದ್ಯಾವರ ಗ್ರಾಮ ಪಂಚಾಯತ್ ಮುಂಭಾಗದಲ್ಲಿ ಜೂ.23ರಂದು ಪ್ರತಿಭಟನೆ ನಡೆಯಿತು.

ಪ್ರತಿಭಟನಾ ಸಭೆಯಲ್ಲಿ ಸೂರಜ್ ವಳಂಬ್ರ ಪ್ರಾಸ್ತವಿಕವಾಗಿ ಮಾತನಾಡಿದರು. ಅಶೋಕ್ ಕುಮಾರ್ ರವರು ರಾಜ್ಯ ಸರಕಾರದ 9/11 ನಕ್ಷೆಗೆ ಮೂಡದಿಂದ ಅನುಮತಿ ಪಡೆಯ ಆದೇಶ ಮಾಡಿದ್ದು ಅದರಿಂದ ಜನರಿಗಾಗುವ ತೊಂದರೆ ಬಗ್ಗೆ, ಕಟ್ಟಡ ಸಂಖ್ಯೆ ಇದ್ದರು ವಿದ್ಯುತ್ ಸಂಪರ್ಕ ಪಡೆಯಲು ವಾಸಯೋಗ್ಯ ಪ್ರಮಾಣ ಪತ್ರದ ಆದೇಶದ ಬಗ್ಗೆ, ನೋಂದಾವಣೆ ಶುಲ್ಕವನ್ನು. 2% ದಿಂದ 10% ಮಾಡಿರುವ ಬಗ್ಗೆ ಹಾಗೂ ಕಾಂಗ್ರೆಸ್ ಸರಕಾರದ ಭ್ರಷ್ಟಾಚಾರದ ಬಗ್ಗೆ ಮಾತಾಡಿ ಆಕ್ರೋಶವನ್ನು ವ್ಯಕ್ತಪಡಿಸಿ ತಕ್ಷಣ ಜನವಿರೋಧಿ ಆದೇಶಗಳನ್ನು ವಾಪಾಸ್ ಪಡೆಯುವಂತೆ ಹೇಳಿದರು. ತಪ್ಪಿದರೆ ಮುಂದೆ ದೊಡ್ಡ ಮಟ್ಟದಲ್ಲಿ ಹೋರಾಟವನ್ನು ಮಾಡುವುದಾಗಿ ಎಚ್ಚರಿಕೆಯನ್ನು ನೀಡಿದರು.

ಪ್ರತಿಭಟನೆಯಲ್ಲಿ ಪಂಚಾಯತ್ ಅಧ್ಯಕ್ಷೆ ರತ್ನಾವತಿ, ಉಪಾಧ್ಯಕ್ಷೆ ಸಾವಿತ್ರಿ , ಪಂಚಾಯತ್ ಸದಸ್ಯರು ರಾಜೇಶ್, ಹಿರಿಯರಾದ ಪ್ರಭಾಕರ ಶೆಣೈ, ಪ್ರಶಾಂತ್ ಅಂತರ, ರೇಣುಕಾ ರಮೇಶ್, ಹೇಮಾವತಿ, ರಾಮಚಂದ್ರ ಜನಾರ್ದನ ಕಾನರ್ಪ, ಸಿ ಎ ಬ್ಯಾಂಕ್ ಉಪಾಧ್ಯಕ್ಷ ಆನಂದ ಗೌಡ ಬರಮೇಲು, ಪ್ರಮುಖ ಕಾರ್ಯಕರ್ತರು ಸಾರ್ವಜನಿಕರು ಭಾಗವಹಿಸಿದರು.

Related posts

ಬೆಳ್ತಂಗಡಿಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆ: ಎಚ್ಚರ ವಹಿಸುವಂತೆ ಶಾಸಕ ಹರೀಶ್ ಪೂಂಜ‌ ಮನವಿ: ತುರ್ತು ಸಂದರ್ಭಗಳಲ್ಲಿ‌ ಸಹಾಯವಾಣಿ ಸಂಪರ್ಕಿಸಲು ಸೂಚನೆ

Suddi Udaya

ನ್ಯಾಯತರ್ಪು: ಜಾರಿಗೆಬೈಲು ಮಸೀದಿ ಬಳಿ ತಂಡಗಳ ನಡುವೆ ಹಲ್ಲೆ: ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಪುಂಜಾಲಕಟ್ಟೆ ಉಳಿ ಯುವಕ ಮಂಡಲದಿಂದ ಭಜನಾ ತರಬೇತಿ ಕಾರ್ಯಗಾರ

Suddi Udaya

ಜಿಲ್ಲಾ ರಾಜ್ಯೋತ್ಸವ ಪುರಸ್ಕೃತರಾದ ಎಲ್ಲರಿಗೂ ಅಭಿನಂದನೆಗಳು – ಹರೀಶ್ ಪೂಂಜ

Suddi Udaya

ಬೆಸ್ಟ್ ಎಂಎಲ್‌ಎ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್‌ ಪೂಂಜರಿಗೆ ತಾಲೂಕು ಒಕ್ಕಲಿಗ ಸಮುದಾಯದಿಂದ ಗೌರವಾರ್ಪಣೆ

Suddi Udaya

ಮೊಗ್ರು: ಕಡಮ್ಮಾಜೆ ಫಾರ್ಮ್ ನಲ್ಲಿ 3ನೇ ವರ್ಷದ ಜೇನು ಕೃಷಿ ಮಾಹಿತಿ ಶಿಬಿರ

Suddi Udaya
error: Content is protected !!