July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಉಜಿರೆ ಗ್ರಾ.ಪಂ. ನಲ್ಲಿ ಪ್ರತಿಭಟನೆ

ಉಜಿರೆ: ರಾಜ್ಯ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿ ಖಂಡಿಸಿ ಉಜಿರೆ ಬಿಜೆಪಿ ಘಟಕದಿಂದ ಉಜಿರೆ ಗ್ರಾಮ ಪಂಚಾಯತ್ ಮುಂಭಾಗದಲ್ಲಿ ಜೂ.23ರಂದು ಪ್ರತಿಭಟನೆ ನಡೆಯಿತು.

ವಿಧಾನ ಪರಿಷತ್ ಮಾಜಿ ಸದಸ್ಯ ಬಾಲಕೃಷ್ಣ ಭಟ್ ಮಾತನಾಡಿ, ಕಾಂಗ್ರೆಸ್ ಸರ್ಕಾರದಿಂದ ಯಾವುದೇ ಅನುದಾನಗಳು ಬಿಡುಗಡೆ ಆಗುತ್ತಿಲ್ಲ, ಕಾಂಗ್ರೆಸ್ ಸರಕಾರ ಜನರ ಕಣ್ಣಿಗೆ ಮಣ್ಣೆರಚುವ ಕೆಲಸ ಮಾಡುತ್ತಿದೆ. ವಿದ್ಯುತ್, ಬಸ್ ದರ, ತೆರಿಗೆಗಳನ್ನು ಸರಕಾರ ಹೆಚ್ಚುವರಿ ಮಾಡುತ್ತಿದೆ ಎಂದು ಆರೋಪಿಸಿದರು.

ನಂತರ ವಿವಿಧ ಬೇಡಿಕೆಗಳನ್ನು ಒಳಗೊಂಡ ಮನವಿಯನ್ನು ಪಂಚಾಯತ್‌ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ ನೊಚ್ಚ ರವರ ಮೂಲಕ ರಾಜ್ಯಪಾಲರಿಗೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾಕಿರಣ್ ಕಾರಂತ್, ಉಪಾಧ್ಯಕ್ಷ ರವಿಕುಮಾರ್ ಬರಮೇಲು, ಕೇಶವ ಭಟ್ ಅತ್ತಾಜೆ, ವರ್ತಕರ ಸಂಘದ ಅಧ್ಯಕ್ಷ ಅರವಿಂದ ಕಾರಂತ್ ಹಾಗೂ ಪಕ್ಷದ ಕಾರ್ಯಕರ್ತರುಗಳು ಉಪಸ್ಥಿತರಿದ್ದರು.

Related posts

ಅಖಿಲ ಭಾರತ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಶ್ರಿಗುರುದೇವ ಕಾಲೇಜಿನ ವಿದ್ಯಾರ್ಥಿಗೆ ಸ್ವರ್ಣ ಪದಕ

Suddi Udaya

ಬಳಂಜ- ಅಳದಂಗಡಿ ಸಂಪರ್ಕಿಸುವ ಬಾವಲಿಗುಂಡಿ ಬಳಿ ಗುಡ್ಡ ಕುಸಿತ, ಸಂಚಾರ ಸ್ಥಗಿತ

Suddi Udaya

ಗುಡ್ ಫ್ಯೂಚರ್ ಆಂ.ಮಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಅಧಿಕೃತ ಪಡಿತರ ಚೀಟಿ ನವೀಕರಣ ಕೇಂದ್ರ, ಬಸ್ ಪಾಸ್ ವಿತರಣಾ ಕೇಂದ್ರವಾದ ಕರ್ನಾಟಕ ಒನ್ ಸ್ಥಳಾಂತರಗೊಂಡು ಶುಭಾರಂಭ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಚೆನ್ನೆಮಣೆ ಗೊಬ್ಬು ಪಂಥೊ ಮತ್ತು ಸಂಧಿ ಪಾರ್ದನ ಸುಗಿಪ್ಪು ಪಂಥೊದ ಸಮಾರೋಪ ಸಮಾರಂಭ

Suddi Udaya
error: Content is protected !!