ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರತಿಭಟನೆ

ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಮಿತ್ತಬಾಗಿಲು ಗ್ರಾ.ಪಂ. ನಲ್ಲಿ ಪ್ರತಿಭಟನೆ

ಮಿತ್ತಬಾಗಿಲು: ರಾಜ್ಯ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿ ಖಂಡಿಸಿ ಮಿತ್ತಬಾಗಿಲು ಬಿಜೆಪಿ ಘಟಕದಿಂದ ಮಿತ್ತಬಾಗಿಲು ಗ್ರಾಮ ಪಂಚಾಯತ್ ಮುಂಭಾಗದಲ್ಲಿ ಜೂ.23ರಂದು ಪ್ರತಿಭಟನೆ ನಡೆಯಿತು.

ಗ್ರಾ.ಪಂ. ಅಧ್ಯಕ್ಷ ವಿನಯಚಂದ್ರ ಮಾತನಾಡಿ, ರಾಜ್ಯದ ಕಾಂಗ್ರೆಸ್ ಸರ್ಕಾರದ ಜನ ವಿರೋಧಿ ನೀತಿಯಿಂದಾಗಿ ಇಂದು ರಸ್ತೆಗಳಿಗೆ ಚರಲು ಹಾಕಬೇಕಾದರೆ ಪಂಚಾಯತ್ ನಲ್ಲಿ ಅನುದಾನ ಇಲ್ಲದಾಗಿದೆ. ಕೇಂದ್ರ ಸರ್ಕಾರದ 15ನೇ ಹಣಕಾಸಿನಿಂದ ಮಾತ್ರ ಇಂದು ಸಣ್ಣ ಪುಟ್ಟ ಕೆಲಸಗಳು ನಡೆಯುತ್ತಿದೆ. ಕಾಂಗ್ರೆಸ್ ನ ಬಿಟ್ಟಿ ಭಾಗ್ಯದಿಂದಾಗಿ ಜನ ಸಾಮಾನ್ಯರಿಗೆ ಸಮಸ್ಯೆಗಳು ಆಗುತ್ತಿದೆ ಎಂದರು.

ನಂತರ ವಿವಿಧ ಬೇಡಿಕೆಗಳನ್ನು ಒಳಗೊಂಡ ಮನವಿಯನ್ನು ಪಂಚಾಯತ್‌ ಅಭಿವೃದ್ಧಿ ಅಧಿಕಾರಿ ರವರ ಮೂಲಕ ರಾಜ್ಯಪಾಲರಿಗೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಪಂ ಉಪಾಧ್ಯಕ್ಷೆ ವಿಜಯಲಕ್ಷ್ಮೀ, ಹಿರಿಯ ಮುಖಂಡ ವಾಸುದೇವ ರಾವ್ ಕಕ್ಕೇನೇಜಿ ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರುಗಳು ಉಪಸ್ಥಿತರಿದ್ದರು.

Related posts

ಮಚ್ಚಿನ ಅನಂತೇಶ್ವರ ಸಂಜೀವಿನಿ ಮಹಿಳಾ ಒಕ್ಕೂಟದ ವತಿಯಿಂದ ಸ್ವಸಹಾಯ ಸಂಘದ ಸದಸ್ಯರಿಗೆ ಫಿನೈಲ್ ಹಾಗೂ ಸೋಪ್ ಆಯಿಲ್ ತರಬೇತಿ

Suddi Udaya

ಶಿರ್ಲಾಲು ಕೃಷಿಕ ಶಿವಪ್ಪ ಪೂಜಾರಿ ನಿಧನ

Suddi Udaya

ಎಸ್.ಡಿ.ಎಂ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆ ಭೇಟಿ

Suddi Udaya

ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ವಿನೂತನ ‘ಸಿರಿ ಮಿಲ್ಲೆಟ್ ಕೆಫೆ’ ಧಾರವಾಡದಲ್ಲಿ ಶುಭಾರಂಭ

Suddi Udaya

ದಯಾ ವಿಶೇಷ ಶಾಲೆಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಎಕ್ಸೆಲ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಗ್ಯಾರಂಟಿ ನ್ಯೂಸ್ ನಿಂದ ಆರೋಗ್ಯ ರತ್ನ ಪ್ರಶಸ್ತಿ ಪ್ರದಾನ

Suddi Udaya
error: Content is protected !!