July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಅಪರಾಧ ಕೃತ್ಯಗಳ ಬಗ್ಗೆ ಮಾಹಿತಿ ತಿಳಿದಿರುವ ವ್ಯಕ್ತಿ ಠಾಣೆಗೆ ಶರಣಾಗಲು ಸಿದ್ದ: ಬೆಂಗಳೂರಿನ ವಕೀಲರನ್ನು ಸಂಪರ್ಕಿಸಿದ ಪೊಲೀಸರು

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಅಪರಾಧ ಕೃತ್ಯಗಳ ಬಗ್ಗೆ ತಿಳಿದಿರುವ ವ್ಯಕ್ತಿಯೊಬ್ಬ ಧರ್ಮಸ್ಥಳ ಠಾಣೆಗೆ ಬಂದು ಮಾಹಿತಿ ನೀಡುವುದಾಗಿ ಬರವಣಿಗೆ ಇರುವ ಪತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ಪ್ರಸಾರವಾಗಿರುವುದು ಕಂಡು ಬಂದಿರುತ್ತದೆ.

ಈ ಪತ್ರದ ನೈಜತೆಯನ್ನು ಪರಿಶೀಲಿಸುವ ಸಲುವಾಗಿ ಸದ್ರಿ ಪತ್ರದಲ್ಲಿ ನಮೂದಿಸಲಾಗಿದ್ದ ಬೆಂಗಳೂರಿನ ವಕೀಲರಿಗೆ ಧರ್ಮಸ್ಥಳ ಪೊಲೀಸ್ ಠಾಣೆಯಿಂದ ಸಂಪರ್ಕಿಸಿದಾಗ ಸದ್ರಿ ವಕೀಲರು ವ್ಯಕ್ತಿಯೋರ್ವ ತನ್ನ ಬಳಿ ಬಂದು ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಅಪರಾಧ ಕೃತ್ಯಗಳ ಬಗ್ಗೆ ತನಗೆ ಮಾಹಿತಿ ಇರುವುದಾಗಿ ಹಾಗೂ ತಾನು ಪೊಲೀಸ್ ಠಾಣೆಗೆ ಶರಣಾಗಿ ಮಾಹಿತಿಯನ್ನು ನೀಡಲು ಸಿದ್ಧವಿರುವುದಾಗಿ ತಿಳಿಸಿರುತ್ತಾರೆ.

ಸದ್ರಿ ವ್ಯಕ್ತಿಗೆ ಅಗತ್ಯವಾದ ಕಾನೂನು ಸುರಕ್ಷತೆಯನ್ನು ಕಲ್ಪಿಸಿ ಆ ಬಳಿಕ ಆತನನ್ನು ಹಾಜರುಪಡಿಸುವುದಾಗಿ ವಕೀಲರು ತಿಳಿಸಿರುತ್ತಾರೆ. ಅದರಂತೆ ಸದ್ರಿ ವ್ಯಕ್ತಿ ಹಾಜರಾಗಿ ಮಾಹಿತಿ ನೀಡಿದಲ್ಲಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಇಲಾಖೆ ಪ್ರಕಟಣೆ ತಿಳಿಸಿದೆ.

Related posts

ಉಜಿರೆ ವಾಣಿಜ್ಯ ಮತ್ತು ಕೈಗಾರಿಕಾ ಸಂಘದಿಂದ ಸಾಧಕರಿಗೆ ಅಭಿನಂದನೆ

Suddi Udaya

ಮಚ್ಚಿನ ಪರಿಸರದಲ್ಲಿ ಚಿರತೆ ಓಡಾಟ: ಗ್ರಾಮಸ್ಥರಲ್ಲಿ ಭಯದ ವಾತವರಣ

Suddi Udaya

‘ಕನ್ನಡ ಪಯಸ್ವಿನಿ ಶಿಕ್ಷಣ ರತ್ನ ಅಚೀವ್ಮೆಂಟ್ ಅವಾರ್ಡ್’ಗೆ ಶಿಕ್ಷಕಿ ಪವಿತ್ರಾ ದಿನೇಶ್ ಕೊಕ್ಕಡ ಆಯ್ಕೆ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನ ಆಚರಣೆ

Suddi Udaya

ಓಡಿಲ್ನಾಳ : ಮೈರಲ್ಕೆ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪ್ರಥಮ ವರ್ಷದ ಶ್ರೀ ಶಾರದೋತ್ಸವ: ಧಾರ್ಮಿಕ ಸಭೆ

Suddi Udaya

ಡೆಂಗ್ಯೂ ಜ್ವರದಿಂದ ಬಳಲಿ ವಿಶ್ರಾಂತಿಯಲ್ಲಿದ್ದ ಬದ್ಯಾರು ನಿವಾಸಿ ದಿವಾಕರ ಶೆಟ್ಟಿ ಅಸ್ವಸ್ಥಗೊಂಡು ನಿಧನ

Suddi Udaya
error: Content is protected !!