ತಣ್ಣಿರುಪಂತ: ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಪಾಲೇದುವಿನಲ್ಲಿ ಯೋಗ ದಿನಾಚರಣೆ ಮತ್ತು ಉಚಿತ ನೋಟ್ ಪುಸ್ತಕ ವಿತರಣಾ ಕಾರ್ಯಕ್ರಮ ಜೂ. 21 ರಂದು ನಡೆಯಿತು.
ಬರ್ಕಟ ಅಬ್ದುಲ್ ರಝಾಕ್ ರವರ ಪುತ್ರನ ಹುಟ್ಟು ಹಬ್ಬದ ಪ್ರಯುಕ್ತ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಿಸಿದರು.

ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಸರ್ಕಾರಿ ಶಾಲೆಯಲ್ಲಿ ವಿದ್ಯಾಭ್ಯಾಸಕ್ಕೆ ಪೂರಕ ವಾತಾವರಣ ನಿರ್ಮಿಸಿ ಉತ್ತಮ ಶಿಕ್ಷಣ ಒದಗಿಸುವ ಧ್ಯೇಯ ಶಾಲಾಭಿವೃದ್ಧಿ ಸಮಿತಿಯದ್ದು ಇದಕ್ಕೆ ಪೂರಕವಾಗಿ ಈ ಶೈಕ್ಷಣಿಕ ವರ್ಷದ ಆರಂಭದಲ್ಲಿ 2 ನೂತನ ಕೊಠಡಿಗಳನ್ನು ನಿರ್ಮಿಸಲಾಗಿದೆ.
ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಅನಿಲ್ ಪಾಲೇದು, ಸದಸ್ಯ ಲೋಕಯ್ಯ ಮೂಲ್ಯ ಕಟ್ಟಾಜೆ, ಸಹ ಶಿಕ್ಷಕಿಯರಾದ ಮಂಜುಳಾ, ಶೃದ್ಧಾ ಜೈನ್ ಮತ್ತು ಪೋಷಕರು ಹಾಗೂ ಸದಸ್ಯರು ಉಪಸ್ಥಿತರಿದ್ದರು.











