24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಯಕ್ಷಭಾರತಿ ಕನ್ಯಾಡಿ ವತಿಯಿಂದ ವಿಶ್ವ ಯೋಗ ದಿನಾಚರಣೆ

ಕನ್ಯಾಡಿ : ಯಕ್ಷಭಾರತಿ ಕನ್ಯಾಡಿ ವತಿಯಿಂದ ವಿಶ್ವ ಯೋಗದಿನಾಚರಣೆಯು ಕನ್ಯಾಡಿಯ ಹರಿಹರಾನುಗ್ರಹ ಕಲ್ಯಾಣ ಮಂಟಪದಲ್ಲಿ ಜರುಗಿತು. ಕನ್ಯಾಡಿ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಸಮಿತಿ ಅಧ್ಯಕ್ಷ ಹರೀಶ ರಾವ್ ಮುಂಡ್ರುಪ್ಪಾಡಿ ಕಾರ್ಯಕ್ರಮವನ್ನು ಉದ್ಘಾಟಿಸಿ ಯೋಗದ ನಿತ್ಯ ಅನುಷ್ಠಾನ ಸ್ವಸ್ತ ಮನಸ್ಸು, ಆರೋಗ್ಯ ಹೊಂದಲು ಸಾಧ್ಯವೆಂದರು.

ಉಜಿರೆಯ ಎಸ್ ಡಿ ಎಂ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ವಿದ್ಯಾಲಯದ ಡಾ. ಅಭಿಷೇಕ್ ಪೂಜಾರಿ ಯೋಗದ ಅಷ್ಟಾಂಗಗಳ ಬಗ್ಗೆ ಮಾಹಿತಿ ನೀಡಿ ಸರಳವಾಗಿ ಮಾಡುವ ಯೋಗ ಕ್ರಿಯೆಗಳ ಪ್ರಾತ್ಯಕ್ಷಿಕೆಯನ್ನು ನೀಡಿ ಪ್ರಶ್ನೆಗಳಿಗೆ ಉತ್ತರಿಸಿದರು. ಯಕ್ಷಭಾರತಿ ಅಧ್ಯಕ್ಷರಾದ ರಾಘವೇಂದ್ರ ಬೈಪಾಡಿತ್ತಾಯರು ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭದಲ್ಲಿ ಯಕ್ಷಗಾನ ಡಿಪ್ಲೊಮಾದಲ್ಲಿ ಡಿಸ್ಟಿಂಕ್ಷನ್ ಪಡೆದ ಸಂಸ್ಥೆಯ ಕಾರ್ಯದರ್ಶಿ ದಿವಾಕರ ಆಚಾರ್ಯ ಗೇರುಕಟ್ಟೆ ಅವರನ್ನು ಅಭಿನಂದಿಸಲಾಯಿತು.

ಯಕ್ಷ ಭಾರತಿಯ ಟ್ರಸ್ಟಿಗಳಾದ ಹರಿದಾಸ ಗಾಂಭೀರ, ಮಹೇಶ ಕನ್ಯಾಡಿ, ಕುಸುಮಾಕರ ಕೊತ್ತೋಡಿ, ಸೂರ್ಯಾನಂದ ರಾವ್ ಹಾಗೂ ಸಂಸ್ಥೆಯ ಆಹ್ವಾನಿತ ಸದಸ್ಯರಾದ ಕೌಶಿಕ್ ರಾವ್ ಉಪಸ್ಥಿತರಿದ್ದು ಸಹಕಾರ ನೀಡಿದರು.

ಕು. ಪ್ರತೀಕ್ಷ, ಕು. ಹರಿಪ್ರಿಯ ಪ್ರಾರ್ಥಿಸಿದರು. ಯಕ್ಷ ಭಾರತಿ ಅಧ್ಯಕ್ಷ ರಾಘವೇಂದ್ರ ಬೈಪಾಡಿಕ್ತಾಯ ಸ್ವಾಗತಿಸಿ, ಕಾರ್ಯದರ್ಶಿ ದಿವಾಕರ ಆಚಾರ್ಯ ಗೇರುಕಟ್ಟೆ ಕಾರ್ಯಕ್ರಮ ನಿರೂಪಿಸಿದರು.

Related posts

ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ನೂತನವಾಗಿ ನಿರ್ಮಾಣಗೊಂಡ ಮುಗೇರಡ್ಕ – ದಂಬೆತ್ತಿಮಾರು ಕಾಂಕ್ರಿಟೀಕರಣ ರಸ್ತೆ ಉದ್ಘಾಟನೆ

Suddi Udaya

ಸಾರ್ವಜನಿಕರಿಗೆ ಉಚಿತ ರಕ್ತದೂತ್ತಡ ಹಾಗೂ ಮಧುಮೇಹ ತಪಾಸಣೆ

Suddi Udaya

ಉಜಿರೆ ರತ್ನಮಾನಸ ನಿಲಯದಲ್ಲಿ ಕ್ರಿಸ್ಮಸ್ ಆಚರಣೆ ಮತ್ತು ವಿದ್ಯಾರ್ಥಿಗಳಿಗೆ ಮೌಲ್ಯಾಧಾರಿತ ಮಾಹಿತಿ

Suddi Udaya

ಇಂಡೋ ನೇಪಾಳ ಅಂತರಾಷ್ಟ್ರೀಯ ಚಾಂಪಿಯನ್‌ಶಿಪ್ ತ್ರೋಬಾಲ್ ಪಂದ್ಯಾಟ: ಕಣಿಯೂರಿನ ಯೂನಿತ್ ಕೆ. ನಾಯಕತ್ವದ ತಂಡ ಪ್ರಥಮ ಸ್ಥಾನ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕಕ್ಕೆ ವಲಯ ಅಧ್ಯಕ್ಷರ ಭೇಟಿ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಜಯಾನಂದ ಪೂಜಾರಿ ಅಭಿವೃದ್ಧಿ ಸಮಿತಿ ಅಧ್ಯಕ್ಷರಾಗಿ ನವೀನ್ ಕುಮಾರ್ ಆಯ್ಕೆ

Suddi Udaya
error: Content is protected !!