July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರತಿಭಟನೆ

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಪಟ್ರಮೆ ಗ್ರಾಮ ಪಂಚಾಯತ್ ಬಳಿ ಬಿಜೆಪಿ ಪ್ರತಿಭಟನೆ

ಪಟ್ರಮೆ : ಬಿಜೆಪಿ ಕಾರ್ಯಕರ್ತ ಜಯರಾಮ್ ರವರ ಮನೆಯಲ್ಲಿ ಶ್ಯಾಮ್ ಪ್ರಸಾದ್ ಮುಖರ್ಜಿ ಬಲಿದಾನ ದಿವಸವನ್ನು ಪುಷ್ಪನಮನದ ಮೂಲಕ ನಡೆಸಿ ಅಲ್ಲಿಂದ ಮೆರವಣಿಗೆ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಪಟ್ರಮೆ ಗ್ರಾಮ ಪಂಚಾಯತ್ ಕಚೇರಿ ಬಳಿ ಪ್ರತಿಭಟನೆ ನಡೆಸಲಾಯಿತು.

ಪ್ರಮುಖ ಭಾಷಣಕಾರರಾಗಿ ಸಂದೀಪ್ ರೈ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿಯನ್ನು ಖಂಡಿಸಿ, ಪಂಚಾಯತ್ ಮಟ್ಟದಲ್ಲಿ ಈಗಿನ ಸರಕಾರದಿಂದ ಆಗುತ್ತಿರುವ ಅನ್ಯಾಯಗಳ ಬಗ್ಗೆ ಎಳೆ ಎಳೆಯಾಗಿ ವಿವರಿಸಿದರು.

9/11 ಸಮಸ್ಯೆ, ಅಕ್ರಮ ಸಕ್ರಮ ಸಮಸ್ಯೆ, ವಿದ್ಯುತ್ ದರ ಸಮಸ್ಯೆ, ವಸತಿ ಸಮಸ್ಯೆ, ಕೆಂಪು ಕಲ್ಲು ನಿಷೇಧ, ಬಿಪಿಎಲ್ ಕಾರ್ಡು ರದ್ಧತಿ, ಸಂಧ್ಯಾ ಸುರಕ್ಷಾ, ವೃದ್ಧಾಪ್ಯ ವೇತನ ಮುಂತಾದ ಸ್ಥಳೀಯ ಸಮಸ್ಯೆಗಳ ಬಗ್ಗೆ ಮಾತನಾಡಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರವನ್ನು ನೀಡಲಾಯಿತು.


ಪ್ರತಿಭಟನೆಯಲ್ಲಿ ಪಂಚಾಯತ್ ಅಧ್ಯಕ್ಷ ಮನೋಜ್, ಹಾಗೂ ಸದಸ್ಯರು, ಶಕ್ತಿಕೇಂದ್ರ ಪ್ರಮುಖ್ ಡಾಗಯ್ಯ ಗೌಡ, ಸೊಸೈಟಿ ನಿರ್ದೇಶಕರುಗಳು, ಬಿಜೆಪಿ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

Related posts

ನಾರಾವಿ ಸಂತ ಅಂತೋನಿ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ

Suddi Udaya

ಕಲ್ಮಂಜ: ಡಾ| ಉದಯ ಹೆಬ್ಬಾರ್ ನಿಧನ

Suddi Udaya

ಮಳೆಗೆ ಹಾನಿಗೊಳಗಾದ ನಾವರ ಜಾಲಪಲ್ಕೆ ದಾಮೋದರ ಪೂಜಾರಿ ರವರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ, ಪರಿಶೀಲನೆ

Suddi Udaya

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ತೆನೆ ಹಬ್ಬ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾಗಿ ಲೆನ್ಸಿ ಪಿಂಟೊ, ಉಪಾಧ್ಯಕ್ಷರಾಗಿ ಫ್ರಾನ್ಸಿಸ್ ವಿ.ವಿ ಅವಿರೋಧ ಆಯ್ಕೆ

Suddi Udaya

ಫೇಸ್‌ಬುಕ್ ಮೂಲಕ ಪರಿಚಯವಾದ ಮಹಿಳೆಯಿಂದ ರೂ.6.96 ಲಕ್ಷ ವಂಚನೆ

Suddi Udaya
error: Content is protected !!