25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರತಿಭಟನೆ

ರಾಜ್ಯದ ಕಾಂಗ್ರೆಸ್ ಸರಕಾರದ ದುರಾಡಳಿತದ ವಿರುದ್ದ ಕಳಿಯ ಗ್ರಾ.ಪಂ. ಎದುರು ಬಿಜೆಪಿ ಪ್ರತಿಭಟನೆ

ಗೇರುಕಟ್ಟೆ; ಭಾರತೀಯ ಜನತಾ ಪಾರ್ಟಿ ಕಳಿಯ ಮತ್ತು ನ್ಯಾಯತರ್ಪು ಶಕ್ತಿಕೇಂದ್ರ ವತಿಯಿಂದ ರಾಜ್ಯದ ಕಾಂಗ್ರೇಸ್ ಸರಕಾರದ ದುರಾಡಳಿತದ ವಿರುದ್ದ ಕಳಿಯ ಗ್ರಾಮ‌ ಪಂಚಾಯತ್ ಎದುರು ಜೂ.23 ರಂದು ಪ್ರತಿಭಟನೆ ನಡೆಯಿತು.


ಪ್ರತಿಭಟನೆಯನ್ನು ಉದ್ದೇಶಿಸಿ, ಸಹಕಾರ ಭಾರತಿ ನಿಕಟಪೂರ್ವ ಅಧ್ಯಕ್ಷ ರಾಜೇಶ್ ಪೆಂರ್ಬುಡ ಮಾತನಾಡಿ, ರಾಜ್ಯದ ಸಿದ್ಧರಾಮಯ್ಯ ನೇತ್ರತ್ವದ ಸರಕಾರ ಭ್ರಷ್ಟಾಚಾರದಲ್ಲಿ ಮುಳುಗಿದ್ದು, ಕಾಂಗ್ರೇಸ್ ಶಾಸಕರೇ ಸರಕಾರದ ಭ್ರಷ್ಠಾಚಾರದ ವಿರುದ್ದ ಮಾತನಾಡುತ್ತಿದ್ದಾರೆ. ಗ್ರಾಮ ಪಂಚಾಯತ್ ಮಟ್ಟದಲ್ಲಿ ಆಗುತ್ತಿದ್ದ 9/11 ಮೂಡ ಕ್ಕೆ ವರ್ಗಾಯಿಸುವ ಮೂಲಕ ಪಂಚಾಯತ್ ಆಡಳಿತಕ್ಕೆ ಬೆಲೆ ಇಲ್ಲದಂತೆ ಮಾಡಿರುವ ಜೊತೆಗೆ ಜನಸಾಮಾನ್ಯರಿಗೆ ವಿನಾಕಾರಣ ಅಲೆದಾಟ ಮಾಡುವ ಪರಿಸ್ಥಿತಿ ಸರ್ಕಾರ ಮಾಡಿದೆ.ಇದರ ಹಿಂದೆ ಸಚಿವರ ಜೇಬು ತುಂಬಿಸುವ ಹುನ್ನಾರ ಇದೆ ಎಂದರು.


ಕುವೆಟ್ಟು ಮಹಾಶಕ್ತಿಕೇಂದ್ರ ಅಧ್ಯಕ್ಷ ಚಂದ್ರಕಾಂತ ನಿಡ್ಡಾಜೆ, ಕಳಿಯ ಶಕ್ತಿಕೇಂದ್ರ ಅಧ್ಯಕ್ಷ ಕರುಣಾಕರ್ ಕೊರಂಜ, ನ್ಯಾಯತರ್ಪು ಶಕ್ತಿಕೇಂದ್ರ ಶಕ್ತಿಕೇಂದ್ರ ಅಧ್ಯಕ್ಷ ವಿಜಯ ಗೌಡ, ಕಳಿಯ ಗ್ರಾಮ ಪಂಚಾಯತ್ ಅಧ್ಯಕ್ಷ ದಿವಾಕರ್ ಎಂ., ಉಪಾಧ್ಯಕ್ಷೆ ಇಂದಿರ ಶೆಟ್ಟಿ, ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ವಸಂತ ಮಜಲು, ಮಂಡಲ ಯುವಮೋರ್ಚಾ ಕಾರ್ಯದರ್ಶಿ ಹರೀಶ್ ಗೌಡ, ಕಾರ್ಯಕಾರಿಣಿ ಸದಸ್ಯ ಶೇಖರ ನಾಯ್ಕ, ಗೇರುಕಟ್ಟೆ ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಜನಾರ್ದನ ಗೌಡ, ನಾಳ ಹಾಲು ಉತ್ಪಾದಕರ ಸಂಘದ ಉಪಾಧ್ಯಕ್ಷ ಸೋಮಪ್ಪ ಕುಬಾಯ, ಗ್ರಾಮ ಪಂಚಾಯತ್ ಸದಸ್ಯರಾದ ಸುಧಾಕರ ಮಜಲು, ಯಶೋಧರ ಶೆಟ್ಟಿ, ಸುಭಾಷಿಣಿ ಜನಾರ್ದನ, ಸಿಎ ಬ್ಯಾಂಕ್ ನಿರ್ದೇಶಕರಾದ ಕುಶಾಲಪ್ಪ ಗೌಡ, ಕೇಶವ ಪೂಜಾರಿ, ಲೋಕೇಶ್ ನಾಳ ಮಮತಾ ಆಳ್ವ, ಬೂತ್ ಸಮಿತಿ ಅಧ್ಯಕ್ಷರಾದ ನವೀನ್ ಶೆಟ್ಡಿ, ಸಿದ್ದಪ್ಪ ಗೌಡ, ಕಾರ್ಯದರ್ಶಿಗಳಾದ ನಂದೀಶ್, ಗಣೇಶ್ ಕೆಬಿ ರೋಡ್, ವಸಂತ ಕಲಾಯಿದೊಟ್ಟು, ಕಾರ್ಯಕರ್ತರು, ಸಾರ್ವಜನಿಕರು ಉಪಸ್ಥಿತರಿದ್ದರು…

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಸಂಭ್ರಮ

Suddi Udaya

ಕುತ್ಲೂರು: ದರ್ಖಾಸು ಮನೆಯ ಶ್ರೀಮತಿ ಅಪ್ಪಿ ನಿಧನ

Suddi Udaya

ಬೆಳ್ತಂಗಡಿ ತಾಲೂಕು ಪಂಚಾಯತ್ ನೂತನ ಕಟ್ಟಡ ಉದ್ಘಾಟನೆ

Suddi Udaya

ವೇಣೂರು ಸರಕಾರಿ ಪ್ರೌಢಶಾಲೆಯ ಭೌತಿಕ ಸೌಲಭ್ಯಕ್ಕೆ ರೋಟರಿ ಕ್ಲಬ್ ಸಿದ್ದಕಟ್ಟೆ ಇವರಿಂದ ಆರ್ಥಿಕ ನೆರವು

Suddi Udaya

ಬೆಳ್ತಂಗಡಿ ತಾಲೂಕಿನ ಕೃಷಿಕರಿಗೆ ರೂ. 48.28 ಕೋಟಿ ಬೆಳೆ ವಿಮೆ ಮಂಜೂರು: ಶಾಸಕ ಹರೀಶ್ ಪೂಂಜ

Suddi Udaya

ಉಜಿರೆ: ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya
error: Content is protected !!