25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೇಣೂರು: ಧೀಮಹಿ ಸನಾತನ ಪ್ರತಿಷ್ಠಾನದಿಂದ ಯಕ್ಷಗಾನ ಹಿಮ್ಮೇಳ  ತರಗತಿ ಆರಂಭ

ವೇಣೂರು: ವೇಣೂರಿನ ಮಹಾವೀರ ನಗರದಲ್ಲಿ ಇರುವ ಧೀಮಹಿ ಸನಾತನ ಪ್ರತಿಷ್ಠಾನದಿಂದ ನಡೆಸಲ್ಪಡುವ ಯಕ್ಷಗಾನ ಹಿಮ್ಮೇಳ  ತರಗತಿಯ ಉದ್ಘಾಟನೆಯನ್ನು ಮಾತೃಶ್ರೀ ಗೌರಮ್ಮನವರು ದೀಪ ಪ್ರಜ್ವಲಿಸುವ ಮೂಲಕ ಜೂ.22 ರಂದು ನೆರವೇರಿಸಿದರು.

ಧೀಮಹಿ ಸನಾತನ ಪ್ರತಿಷ್ಠಾನದ ಧ್ಯೇಯೋದ್ದೇಶಗಳನ್ನು ಪ್ರಸ್ತಾವಿಕ ನುಡಿಯಲ್ಲಿ ಸಂಚಾಲಕರಾದ ಯಜ್ಞನಾರಾಯಣ ಭಟ್ ವಿವರಿಸಿದರು. ಮುಖ್ಯ ಅತಿಥಿಗಳಾಗಿ ವೇಣೂರು ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಪಂಜಾಲಬೈಲು ಎನ್. ಪುರುಷೋತ್ತಮ ರಾವ್, ಭಾಸ್ಕರ ಪೈ ಹಾಗೂ ವೇಣೂರು ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಪಾಣೂರು ಅಶೋಕ ಅವರು ಶುಭ ಹಾರೈಸಿದರು.


ಯಕ್ಷಗಾನ ತರಗತಿಯ ಗುರುಗಳಾಗಿ ಖ್ಯಾತ ಹಿಮ್ಮೇಳವಾದಕ ಕೊಂಕಣಾಜೆ ಚಂದ್ರಶೇಖರ ಭಟ್ ಅವರು ಬೋಧನಾ ಕ್ರಮದ ಬಗ್ಗೆ ಪರಿಚಯಿಸಿದರು. ರವಿಶಂಕರ ಭಟ್ ಬೆದ್ರಡ್ಕ ವಂದಿಸಿದರು. ಜಗನ್ನಾಥ ದೇವಾಡಿಗ ಹಂದೇವು ಕಾರ್ಯಕ್ರಮ ನಿರೂಪಿಸಿದರು.

ವೇಣೂರು ಸುತ್ತಮುತ್ತಲಿನ ನೂರಕ್ಕೂ ಅಧಿಕ ಯಕ್ಷಭಿಮಾನಿಗಳು ನೆರೆದಿದ್ದರು. ಹಿಮ್ಮೇಳ ಕಲಿಯಲು ಆಸಕ್ತರು ಕೊಂಕಣಾಜೆ ಚಂದ್ರಶೇಖರ ಭಟ್ಟರನ್ನು 91 90081 36127 ಸಂಪರ್ಕಿಸಬಹುದು.

Related posts

ಭಾರತ್ ಅಟೋ ಕಾರ್‍ಸ್ ನಲ್ಲಿ ಮಾನ್ಸೂನ್ ಉಚಿತ ತಪಾಸಣೆ ಶಿಬಿರಕ್ಕೆ ಚಾಲನೆ

Suddi Udaya

ಪಟ್ರಮೆ: ಪಾದೆಯಲ್ಲಿ ಮನೆಯ ಹಿಂಭಾಗ ಸಂಪೂರ್ಣ ಹಾನಿಯಾಗಿದ್ದು ಬಿಜೆಪಿ ಬೆಳ್ತಂಗಡಿ ಮಂಡಲ ವತಿಯಿಂದ ಭೇಟಿ, ಪರಿಶೀಲನೆ

Suddi Udaya

ಉಜಿರೆಯಲ್ಲಿ ರೈನಥಾನ್ ಸ್ಪರ್ಧೆ ಮಳೆಗಾಲದ ಓಟಕ್ಕೆ ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪಿ.ಎಲ್ ಧರ್ಮ ಚಾಲನೆ ರೈನಥಾನ್ ಸ್ಪರ್ಧೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಸೇರಿದ ಸ್ಪರ್ಧಾರ್ಥಿಗಳು

Suddi Udaya

ಶ್ರೀರತ್ನಾತ್ರಯ ಜೈನ ಸಂಘ ದಿಂದ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್ ರಿಗೆ ಮನವಿ: ಜೈನ ಧರ್ಮೀಯರಿಗೆ ಪ್ರತ್ಯೇಕ ನಿಗಮ ರಚನೆ ಸಚಿವರ ಭರವಸೆ

Suddi Udaya

ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ: ಧರ್ಮಸ್ಥಳದಲ್ಲಿ ಆಮಂತ್ರಣ ಪತ್ರ ಬಿಡುಗಡೆ

Suddi Udaya

ಉಜಿರೆಯಲ್ಲಿ ರಮ್ಯಾ 1ಗ್ರಾಂ ಗೋಲ್ಡ್, ಫ್ಯಾನ್ಸಿ ಮತ್ತು ಫೂಟ್ ವೇ‌ರ್ ನೂತನ ಶೋರೂಮ್ ಶುಭಾರಂಭ

Suddi Udaya
error: Content is protected !!