July 23, 2026
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹೊಸಂಗಡಿ: ಉಚಿತ ಆರೋಗ್ಯ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ

ಹೊಸಂಗಡಿ : ಆಳ್ವಾಸ್ ಹೋಮಿಯೋಪತಿಕ್ ಮೆಡಿಕಲ್ ಕಾಲೇಜು , ಆಸ್ಪತ್ರೆ ಮಿಜಾರ್ ಮತ್ತು ರಾಜ್ಯ ಪ್ರಶಸ್ತಿ ಪಡೆದ ಹೊಸಂಗಡಿ ಫ್ರೆಂಡ್ಸ್ ಕ್ಲಬ್ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ ಜೂ.22 ರಂದು ಹೊಸಂಗಡಿ ಫ್ರೆಂಡ್ಸ್ ಕ್ಲಬ್ ಸಭಾ ಭವನದಲ್ಲಿ ನಡೆಯಿತು.

ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಧರಣೇಂದ್ರ ಕುಮಾರ್ ಕಾರ್ಯಕ್ರಮ ಉದ್ಘಾಟಿಸಿ ಮಾತಾಡಿ ಫ್ರೆಂಡ್ಸ್ ಕ್ಲಬ್ ಸದಾ ಗ್ರಾಮಸ್ಥರ ಆರೋಗ್ಯದ ಬಗ್ಗೆ ಒತ್ತುಕೊಟ್ಟು ಆಳ್ವಾಸ್ ಆಸ್ಪತ್ರೆ ವತಿಯಿಂದ ವಾರಕ್ಕೊಮ್ಮೆ ಆರೋಗ್ಯ ತಪಾಸಣೆ ಮತ್ತು ಉಚಿತ ಚಿಕಿತ್ಸೆಯ ಏರ್ಪಾಡು ಮಾಡುತ್ತಿದೆ. 50 ವರ್ಷಗಳು ಮೇಲ್ಪಟ್ಟವರ ರಕ್ತದೊತ್ತಡ ಹಾಗೂ ಮಧುಮೇಹದ ತಪಾಸಣೆಗಾಗಿ ತನ್ನ ಕ್ಲಬ್ ನ ಸಭಾಂಗಣವನ್ನು ಕೊಟ್ಟಿದ್ದು ಗ್ರಾಮಸ್ಥರು ಇದರ ಸದುಪಯೋಗ ಮಾಡಬೇಕೆಂದು ಮನವಿ ಮಾಡಿದರು.

ಆಳ್ವಾಸ್ ಹೋಮಿಯೋಪತಿಕ್ ಆಸ್ಪತ್ರೆ ವೈದ್ಯ ಡಾ. ಭರತ್ ಮಾತನಾಡಿ, ಆರೋಗ್ಯ ಇದ್ದರೆ ಮಾತ್ರ ಜೀವನ ಮತ್ತು ನಮ್ಮ ಸಂಸ್ಥೆಯ ಆರೋಗ್ಯ ಶಿಬಿರದ ಸದುಪಯೋಗಪಡಿಸುವಂತೆ ಕರೆ ನೀಡಿ ಈ ನಿಟ್ಟಿನಲ್ಲಿ ನಿರಂತರವಾಗಿ ಸಹಕರಿಸುತ್ತಿರುವ ಫ್ರೆಂಡ್ಸ್ ಕ್ಲಬ್ ಹೊಸಂಗಡಿ ಮತ್ತು ಮಾಜಿ ಅಧ್ಯಕ್ಷ ದಿ| ಹರಿಪ್ರಸಾದ್ ರವರನ್ನು ಸ್ಮರಿಸಿದರು.

ಸಭಾ ಕಾರ್ಯಕ್ರಮದಲ್ಲಿ ಡಾ ಪ್ರಶಾಂತ್ , ಡಾ ಶಿವಕುಮಾರ್ , ಪೆರಿಂಜೆ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಎನ್ ಸೀತಾರಾಮ ರೈ ,ಬೆಳ್ತಂಗಡಿ ತಾಲೂಕು ಭೂನ್ಯಾಯ ಮಂಡಳಿ ಸದಸ್ಯ ಇಸ್ಮಾಯಿಲ್ ಕೆ ಪೆರಿಂಜೆ ,ಕ್ಲಬ್ ಅಧ್ಯಕ್ಷ ಶ್ರೀಪತಿ ಉಪಾದ್ಯಾಯ, ಗ್ರಾ.ಪಂ. ಸದಸ್ಯ ಆನಂದ ಬಂಗೇರ ಕೊಡಂಗೇರಿ ಉಪಸ್ಥಿತರಿದ್ದರು.

ಚಂದ್ರ ಪೇರಿ ,ಭರತ್ ,ನಾಗೇಶ್ ಕೋಟಿಯಾನ್ ಹೊಸಂಗಡಿ ,ಸಚ್ಚಿದಾನಂದ ಪೆರಿಂಜೆ ,ದೇವದಾಸ್ ,ರಾಜೇಶ್ ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು.

ಶ್ರೀಪತಿ ಉಪಾಧ್ಯಾಯ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಸುಜಿತ್ ವಂದಿಸಿದರು.

Related posts

ಉಜಿರೆ ಶ್ರೀ ಧ.ಮಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗವಿಜ್ಞಾನಗಳ ಮಹಾವಿದ್ಯಾಲಯ ಆಸ್ಪತ್ರೆ, ಬೆಳ್ತಂಗಡಿ ಲಯನ್ಸ್ ಸೇವಾ ಸಂಸ್ಥೆ, ಲಿಯೋ ಕ್ಲಬ್ ಸಹಯೋಗದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ವಿದ್ಯಾರ್ಥಿಗಳು ನೈತಿಕ ಮೌಲ್ಯಗಳನ್ನು ಹೆಚ್ಚಿಸಿ ಕೊಳ್ಳಬೇಕು: ಡಾ ಪ್ರಸನ್ನ ಕುಮಾರ್ ಐತಾಳ್

Suddi Udaya

ಪಡಂಗಡಿ: ರಾಷ್ಟ್ರಮಟ್ಟದ ವಾಲಿಬಾಲ್ ಆಟಗಾರ್ತಿ ಸಾಲಿಯತ್ ಹೃದಯಾಘಾತದಿಂದ ನಿಧನ

Suddi Udaya

ಪಟ್ರಮೆಯ ದೀಪಕ್ ಎ.ಎಸ್ ರವರು ಸಲ್ಲಿಸಿದ ಆರ್ ಟಿಐ ಅರ್ಜಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಕಾರ್ಯಾಲಯಾದಿಂದ ಪ್ರತಿಕ್ರಿಯೆ

Suddi Udaya

ಮುಂಡಾಜೆ : ಮೈಸೂರು ವಿಭಾಗ ಮಟ್ಟದ ವಾಲಿಬಾಲ್ ಪಂದ್ಯಾಟ ಉದ್ಘಾಟನೆ

Suddi Udaya

ಧರ್ಮಸ್ಥಳ: ಕಲ್ಲೇರಿ ನಿವಾಸಿ ಲೀಲಾವತಿ ಗೌಡ ನಿಧನ

Suddi Udaya
error: Content is protected !!