25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಲ್ .ಸಿ.ಆರ್ ವಿದ್ಯಾ ಸಂಸ್ಥೆ : ಶಾಲಾ ಸಂಸತ್ತು ಚುನಾವಣೆ

ಕಕ್ಯಪದವು: ಎಲ್ ಸಿ ಆರ್ ವಿದ್ಯಾ ಸಂಸ್ಥೆಯಲ್ಲಿ 2025 – 26 ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಸಂಸತ್ತಿನ ಪದಾಧಿಕಾರಿಗಳ ಆಯ್ಕೆ ಮಾಡಲು ಜೂ. 23ರಂದು ಚುನಾವಣೆಯನ್ನು ನಡೆಸಲಾಯಿತು.

ಎಲ್ಲಾ ವಿದ್ಯಾರ್ಥಿಗಳ ಮತದಾನ ಪ್ರಕ್ರಿಯೆಯು ಎಲೆಕ್ಟ್ರಾನಿಕ್ ವೋಟಿಂಗ್ ಮೆಷಿನ್ ಮಾದರಿ (EVM) ಯ ಮೂಲಕ ನೆರವೇರಿತು. ವಿದ್ಯಾರ್ಥಿಗಳಿಗೆ ಮತದಾನದ ಬಗ್ಗೆ ಅರಿವು ಮೂಡಿಸುವ ಉದ್ದೇಶದೊಂದಿಗೆ ಮತದಾನದ ಕಾರ್ಯ ಚಟುವಟಿಕೆಗಳನ್ನು ಆಧುನಿಕ ಮೊಬೈಲ್ ತಂತ್ರಜ್ಞಾನದ ಮೂಲಕ ಮಾಡಲಾಯಿತು. ವಿವಿಧ ಶಿಕ್ಷಕ ಸಿಬ್ಬಂದಿಗಳ ಸಹಕಾರದಿಂದ ಮತದಾನ ಪ್ರಕ್ರಿಯೆಯು ಶಿಸ್ತಿನಿಂದ ಮತ್ತು ಯಶಸ್ವಿಯಾಗಿ ಪೂರ್ಣಗೊಂಡಿತು. ಹಾಗೂ ಮತ ಎಣಿಕೆಯನ್ನು ಮಾಡಿ ಫಲಿತಾಂಶ ಘೋಷಣೆಯನ್ನು ಮಾಡಲಾಯಿತು.

ಶಾಲಾ ವಿದ್ಯಾರ್ಥಿ ಸಂಘದ ನಾಯಕಿಯಾಗಿ ಮನಸ್ವಿನಿ . ಕೆ, ಉಪನಾಯಕಿಯಾಗಿ ಅದಿತಿ ಎಂ. ಪ್ರಭು ಆಯ್ಕೆಯಾದರು. ಹಾಗೂ ಶಿಕ್ಷಣ, ಸಾಂಸ್ಕೃತಿಕ, ಕ್ರೀಡಾ, ಆರೋಗ್ಯ ಮಂತ್ರಿಗಳನ್ನು ಆಯ್ಕೆ ಮಾಡಲಾಯಿತು.
ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣವನ್ನು ಬೆಳೆಸಲು ಹಾಗೂ ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಎಂಬುದಾಗಿ ಮುಖ್ಯ ಶಿಕ್ಷಕಿ ಶ್ರೀಮತಿ ವಿಜಯ ಕೆ ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿ ವಿಜೇತರನ್ನು ಅಭಿನಂದಿಸಿದರು.

Related posts

ಪ್ರತಿಭಾ ಕಾರಂಜಿ ಸ್ಪರ್ಧೆ: ಬಂದಾರು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya

ಹಲವಾರು ಮೃತದೇಹ ಹೂತು ಹಾಕಿದ ದೂರು ಪ್ರಕರಣ ಧರ್ಮಸ್ಥಳ ಶೌಚಾಲಯದ ಸುತ್ತಮುತ್ತ ಸ್ಥಳ ಮಹಜರು

Suddi Udaya

ಡಿ.8 ರಿಂದ ಡಿ.12 ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ

Suddi Udaya

ಬೆಳ್ತಂಗಡಿ ಮುಳಿಯದಲ್ಲಿ ‘ಮುಳಿಯ ಚಿನ್ನೋತ್ಸವ’ ವಿಶ್ವ ವಿನೂತನ ಚಿನ್ನಾಭರಣಗಳ ಹಬ್ಬಕ್ಕೆ ಚಾಲನೆ

Suddi Udaya

ಕನ್ಯಾಡಿ || : ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಮಿತಿ ರಚನೆ

Suddi Udaya

ಶ್ರೀ ಗುರುದೇವ ಕಾಲೇಜಿನಲ್ಲಿ ಪ.ಪೂ. ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟ

Suddi Udaya
error: Content is protected !!