July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುಂಡದಬೆಟ್ಟು ಮಂಜುಶ್ರೀ ಭಜನಾ ಮಂಡಳಿಯ ನೂತನ ಅಧ್ಯಕ್ಷರಾಗಿ ಆನಂದ, ಕಾರ್ಯದರ್ಶಿಯಾಗಿ ಸಂದೀಪ್ ಆಯ್ಕೆ


ವೇಣೂರು: ಕುಂಡದಬೆಟ್ಟು ಮಂಜುಶ್ರೀ ಭಜನಾ ಮಂಡಳಿ ಇದರ ವಾರ್ಷಿಕ ಮಹಾಸಭೆ ಮಂಡಳಿಯ ಅಧ್ಯಕ್ಷ ರವಿ ಕುಮಾರ್ ಕೆ ವೈ ಇವರ ಅಧ್ಯಕ್ಷತೆಯಲ್ಲಿ ಮಂಜುಶ್ರೀ ಭಜನಾ ಮಂದಿರದಲ್ಲಿ ಜರುಗಿತು.


2023-24 ಹಾಗೂ 2024-25 ನೇ ಸಾಲಿನ ವಾರ್ಷಿಕ ವರದಿಯನ್ನು ಕಾರ್ಯದರ್ಶಿ ತನಿಯಪ್ಪ ರಾಣ್ಯ ಮಂಡಿಸಿದರು.
2024-25 ನೇ ಸಾಲಿನ ವಾರ್ಷಿಕ ಲೆಕ್ಕಪತ್ರವನ್ನು ಕೋಶಾಧಿಕಾರಿ ಜಯಪ್ರಸಾದ್ ಕುಲಾಲ್ ಮಂಡಿಸಿದರು.
2025-26 ಹಾಗೂ 2026-27 ನೇ ಸಾಲಿನ ಮುಂದಿನ ಎರಡು ವರ್ಷಗಳ ಅವಧಿಗೆ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ಆನಂದ ಟೈಲರ್ ನೀಲಂಬೋಡಿ, ಗೌರವಾಧ್ಯಕ್ಷರಾಗಿ ಅನಿಲ್ ಹೆಗ್ಡೆ, ಉಪಾಧ್ಯಕ್ಷರಾಗಿ ಶಿವಪ್ರಸಾದ್ ಹೆಗ್ಡೆ ನೆಲ್ಲಿಗುಡ್ಡೆ, ಕಾರ್ಯದರ್ಶಿಯಾಗಿ ಸಂದೀಪ್ ಆಚಾರ್ಯ ಗೋಳಿಯಂಗಡಿ, ಕೋಶಾಧಿಕಾರಿಯಾಗಿ ಸಂತೋಷ್ ಕುಲಾಲ್ ಕಲ್ಲಾಜೆ, ಜೊತೆ ಕಾರ್ಯದರ್ಶಿಯಾಗಿ ನಿರಂಜನ್ ಸಾಲಿಯಾನ್ ಪಾರೊಟ್ಟು ಪದಾಧಿಕಾರಿಗಳಾಗಿ ಆಯ್ಕೆಯಾದರು.

ರವಿಕುಮಾರ್ ಕೆ ವೈ, ತನಿಯಪ್ಪ ರಾಣ್ಯ, ಧರ್ಣಪ್ಪ ಪೂಜಾರಿ, ತಿಮ್ಮಪ್ಪ ಪೊಸಲಾಯಿ, ಚಂದ್ರ ದೇವಾಡಿಗ, ಜಗದೀಶ್ ಆಚಾರ್ಯ, ಸಂಜೀವ ಪೂಜಾರಿ, ವರದ ಕುಲಾಲ್, ಹರೀಶ್ ಕುಲಾಲ್, ಹರೀಶ್ ಆಚಾರ್ಯ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಆಯ್ಕೆಯಾದರು.


ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ರವಿಕುಮಾರ್ ಕೆ ವೈ ರವರು ಮಾತಾಡುತ್ತಾ , ಕಳೆದ ಎರಡು ವರ್ಷಗಳಿಂದ ಮಂಡಳಿಯು ವಿವಿಧ ಅಭಿವೃದ್ಧಿ ಚಟುವಟಿಕೆಗಳನ್ನು ನಡೆಸಿದ್ದು ಮಂಡಳಿಯ ಪದಾಧಿಕಾರಿಗಳು ಹಾಗೂ ಊರ ಭಕ್ತಾಭಿಮಾನಿಗಳು ಸಂಪೂರ್ಣ ಸಹಕಾರ ನೀಡಿದ್ದಾರೆ ಎಂದು ಸ್ಮರಿಸಿದರು. ಹಿರಿಯರಾದ ಕೆ ವೈ ಈಶ್ವರ ಭಟ್ ರವರು ಉಪಸ್ಥಿತರಿದ್ದರು.
ಜಗನ್ನಾಥ ದೇವಾಡಿಗರವರ ಪ್ರಾರ್ಥನೆಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮವನ್ನು ಮಾಜಿ ಅಧ್ಯಕ್ಷರಾದ ಭರತ್ ರಾಜ್ ಅಮೈ ಸ್ವಾಗತಿಸಿದರು. ಸಂತೋಷ್ ಕುಲಾಲ್ ಧನ್ಯವಾದ ಸಮರ್ಪಿಸಿದರು.

Related posts

ಜಿಲ್ಲಾ ಮಟ್ಟದ ಕ್ರೀಡಾಕೂಟ: ಬಜಿರೆ ಶಾಲೆಗೆ ಹಲವು ಪ್ರಶಸ್ತಿ

Suddi Udaya

ತೆಕ್ಕಾರು: ಸಿಡಿಲಿನ ಬಡಿತಕ್ಕೆ ಮನೆ ಸಂಪೂರ್ಣ ಹಾನಿ

Suddi Udaya

ಧರ್ಮಸ್ಥಳ ವಸ್ತು ಸಂಗ್ರಹಾಲಯಕ್ಕೆ ಬರಲಿದೆ ಹಾಯಿದೋಣಿ: ಜೂ.9ರಂದು ಕುಂದಾಪುರದಿಂದ ಮೆರವಣಿಗೆಯ ಮೂಲಕ ಧಮ೯ಸ್ಥಳಕ್ಕೆ

Suddi Udaya

ಬಹುನಿರೀಕ್ಷಿತ ರಾನಿ ಚಲನಚಿತ್ರದ ನಾಯಕ ನಟ ಗಂಭೀರ ಗಾಯ: ಕಾರ್ಯಕಾರಿ ನಿರ್ಮಾಪಕ ಕೊಕ್ರಾಡಿಯ ಗಿರೀಶ್ ಹೆಗ್ಡೆ ಅದೃಷ್ಟವಶಾತ್ ಪಾರು

Suddi Udaya

ಓಡಿಲ್ನಾಳ ಸ. ಉ. ಪ್ರಾ. ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ ಮತ್ತು ಸನ್ಮಾನ

Suddi Udaya

ಕರಾವಳಿ ಹಿಂದುತ್ವದ ಭದ್ರಕೋಟೆ : ಶಾಸಕ ಹರೀಶ್ ಪೂಂಜ

Suddi Udaya
error: Content is protected !!