July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೂ.27 : ಮುಂಗಾರು ಹಂಗಾಮಿನ ರೈತರ ಬೆಳೆ ಸಮೀಕ್ಷೆ ಹಾಗೂ ತೋಟದ ಸಮಗ್ರ ನಿರ್ವಹಣೆ ಕುರಿತು ಸಾಂಸ್ಥಿಕ ತರಬೇತಿ

ಬೆಳ್ತಂಗಡಿ :ಇಲ್ಲಿಯ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ರೈತರಿಗೆ ಜೂ.27ರಂದು ಪೂರ್ವಾಹ್ನ 10.30ರಿಂದ ಮುಂಗಾರು ಹಂಗಾಮಿನ ರೈತರ ಬೆಳೆ ಸಮೀಕ್ಷೆ ತಂತ್ರಾಂಶದ ಕುರಿತು ಮತ್ತು ಅಡಿಕೆ ಹಾಗೂ ತೆಂಗು ಬೆಳೆಗಳ ಸಮಗ್ರ ರೋಗ, ಕೀಟ ನಿರ್ವಹಣೆ ಹಾಗೂ ಬೋರ್ಡೋ ದ್ರಾವಣ ತಯಾರಿ ಮತ್ತು ಮುಂಗಾರು ಹಂಗಾಮಿನಲ್ಲಿ ತೋಟದ ಸಮಗ್ರ ನಿರ್ವಹಣೆ ಕುರಿತು ಒಂದು ದಿನದ ಸಾಂಸ್ಥಿಕ ತರಬೇತಿಯನ್ನು ಆಯೋಜಿಸಲಾಗಿದೆ.

ಸಂಪನ್ಮೂಲ ವ್ಯಕ್ತಿಗಳಾಗಿ ಮಹಾವೀರ ಶೆಬಣ್ಣವರ್, ಸಹಾಯಕ ತೋಟಗಾರಿಕೆ ಅಧಿಕಾರಿ ಬೆಳ್ತಂಗಡಿ ಮತ್ತು ಪ್ರಭಾಕರ ಮಯ್ಯ ಸುರ್ಯ, ಪ್ರಗತಿಪರ ಕೃಷಿಕರು ಭಾಗವಹಿಸಲಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ರೈತರು ಭಾಗವಹಿಸುವಂತೆ ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ಕೋರಿರುತ್ತಾರೆ.

Related posts

ಪಾರೆoಕಿ ಗ್ರಾಮದ ಹಾರಬೆ ಶ್ರೀ ದುಗಲಾಯ ಮತ್ತು ಗುಳಿಗ ದೈವಗಳ ವಾರ್ಷಿಕ ನೇಮೋತ್ಸವ

Suddi Udaya

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘಕ್ಕೆ ರೂ.ಒಂದು ಲಕ್ಷ ದೇಣಿಗೆ

Suddi Udaya

ವೇಣೂರಿನ ಧೀಮಹಿಯಲ್ಲಿ ಭರತನಾಟ್ಯ ತರಗತಿಗಳ ಉದ್ಘಾಟನೆ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ -ಸ್ಪೆಷಾಲಿಟಿ ಆಸ್ಪತ್ರೆ ದಶಮಾನೋತ್ಸವ ಸಂಭ್ರಮಾಚರಣೆ

Suddi Udaya

ವೇಣೂರು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಮತ್ತು ಯುವವಾಹಿನಿ ಘಟಕದಿಂದ ಯಕ್ಷಗಾನ ಕಲಾವಿದರಿಗೆ ಸನ್ಮಾನ

Suddi Udaya

ಮೈಸೂರು ವಿಭಾಗದ ಕ್ರಿಕೆಟ್‌ನಲ್ಲಿ ಬೆಳ್ತಂಗಡಿಯ ಜಾನ್ವಿ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya
error: Content is protected !!